Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಕನಕದಾಸರು ಆಕಸ್ಮಿಕವಾಗಿ ಕುರುಬ...

ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ದಾರ್ಶನಿಕ ಸಂತ : ಸಿಎಂ ಸಿದ್ದರಾಮಯ್ಯ

► "ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ" ►"ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ"

ವಾರ್ತಾಭಾರತಿವಾರ್ತಾಭಾರತಿ5 Jan 2025 5:49 PM IST
share
ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ದಾರ್ಶನಿಕ ಸಂತ : ಸಿಎಂ ಸಿದ್ದರಾಮಯ್ಯ

ದಾವಣಗೆರೆ : ʼಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

537ನೇ ಕನಕ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ದನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆಯ ಕಾರಣಕ್ಕೆ ಅವಮಾನಿತರಾಗಿದ್ದರು. ಯಾರೂ ಜನ್ಮತಃ ದಡ್ಡರಾಗಿರಲು ಸಾಧ್ಯವಿಲ್ಲ. ಕಾಳಿದಾಸರು ಶಾಕುಂತಲಾ ಬರೆದದ್ದು, ವ್ಯಾಸರು ಮಹಾಭಾರತ ಬರೆದದ್ದು, ವಾಲ್ಮೀಕಿ ರಾಮಾಯಣ ಬರೆದದ್ದೇ ಹುಟ್ಟಿನಿಂದ ಯಾರೂ ದಡ್ಡರಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದೆ ಎಂದರು.

ಒಬ್ಬರಿಗೆ ಒಂದೇ ಮತ. ಎಲ್ಲಾ ಜಾತಿ, ಧರ್ಮ, ಅಂತಸ್ತಿವರಿಗೂ ಒಂದೇ ಮತ. ಈ ಸಮಾನತೆ ಆರ್ಥಿಕವಾಗಿ, ಸಾಮಾಜಿಕವಾಗಿಯೂ ಜಾರಿ ಆಗಬೇಕು. ಆಗ ಮಾತ್ರ ಸಮಾನತೆ ದಿಕ್ಕಿನಲ್ಲಿ ನಾವು ಮುನ್ನಡೆಯಲು ಸಾಧ್ಯ ಎಂದರು.

ಯಾವ ಧರ್ಮದಲ್ಲೂ ಮನುಷ್ಯ ತಾರತಮ್ಯ ಇಲ್ಲ. ಧರ್ಮವನ್ನು ರಾಜಕೀಯವಾಗಿ ಬಳಸಿಕೊಳ್ಳುವವರು ತಮ್ಮ ಲಾಭಕ್ಕಾಗಿ ತಾರತಮ್ಯ, ದ್ವೇಷ ಸೃಷ್ಟಿಸುತ್ತಾರೆ. ಶೋಷಿತ ಸಮುದಾಯಗಳು ಜಾತಿ ಸಮ್ಮೇಳನ ಮಾಡುವುದು ತಪ್ಪಲ್ಲ. ಆದರೆ ಮುಂದುವರೆದ ಜಾತಿಗಳು ಜಾತಿ ಹೆಸರಲ್ಲಿ ಸಮ್ಮೇಳನ ನಡೆಸುವುದು ಸಾಮಾಜಿಕವಾಗಿ ತಪ್ಪಾಗುತ್ತದೆ. ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ ಎಂದರು.

ನಾನು ಎಲ್ಲಾ ಜಾತಿಯವರನ್ನೂ ಪ್ರೀತಿಸುತ್ತೇನೆ. ಆದರೆ ಜಾತಿ ಮಾಡುವವರನ್ನು ನಾನು ವಿರೋಧಿಸುತ್ತೇನೆಯೇ ಹೊರತು ಅವರನ್ನೂ ದ್ವೇಷಿಸುವುದಿಲ್ಲ. ಜಾತಿ ಕಾರಣದಿಂದ ಕನಕದಾಸರನ್ನು ಉಡುಪಿ ಮಠದ ಒಳಗೆ ಬಿಡಲಿಲ್ಲ ಎನ್ನುತ್ತಾ ಕನಕನ‌ ಕಿಂಡಿ ಸೃಷ್ಟಿಯಾದ ಪ್ರಸಂಗವನ್ನು ವಿವರಿಸಿದರು.

ಕನಕದಾಸರ 500ನೇ ಜಯಂತಿಯನ್ನು ನಾನು ಸಾರಿಗೆ ಸಚಿವನಾಗಿದ್ದಾಗ ಆಗಿನ ಎಸ್.ಆರ್.ಬೊಮ್ಮಾಯಿ ಸರಕಾರದಲ್ಲಿ ಆರಂಭಿಸಿದೆವು. ಬಳಿಕ ಇಡೀ ರಾಜ್ಯ ಪ್ರವಾಸ ಮಾಡಿ ಕಾಗಿನೆಲೆ ಗುರುಪೀಠವನ್ನು , ಮಠವನ್ನು ರೂಪಿಸಿದ್ದು ಕೂಡ ನಾನೇ. ಆದ್ದರಿಂದ ಇಡೀ ಸಮುದಾಯ ಒಟ್ಟಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ :

ನಾನು ಜಾತಿ ಜನಗಣತಿ ಪರವಾಗಿ ಇದ್ದೇವೆ. ಕಾಂತರಾಜ ಅವರ ವರದಿಯನ್ನು ಮುಂದಿನ ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚಿಸುವ ಉದ್ದೇಶ ಕೂಡ ಇದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X