Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಸರಕಾರಿ ಜಾಗ ಒತ್ತುವರಿ ಆರೋಪ; ದಾವಣಗೆರೆ...

ಸರಕಾರಿ ಜಾಗ ಒತ್ತುವರಿ ಆರೋಪ; ದಾವಣಗೆರೆ ಮಹಾನಗರ ಪಾಲಿಕೆಯಿಂದ ಮನೆಗಳ ತೆರವು ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ31 Dec 2025 1:36 AM IST
share
ಸರಕಾರಿ ಜಾಗ ಒತ್ತುವರಿ ಆರೋಪ; ದಾವಣಗೆರೆ ಮಹಾನಗರ ಪಾಲಿಕೆಯಿಂದ ಮನೆಗಳ ತೆರವು ಕಾರ್ಯಾಚರಣೆ

ದಾವಣಗೆರೆ: ನಗರದ ಕೊಂಡಜ್ಜಿ ರಸ್ತೆಯಲ್ಲಿರುವ ವಿಜಯನಗರ ಬಡಾವಣೆಯಲ್ಲಿ ಸರಕಾರಿ ಜಾಗವನ್ನು ಒತ್ತುವರಿ ಮಾಡಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸರ ಬಂದೋಬಸ್ತಿನಲ್ಲಿ ಮಂಗಳವಾರ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸಿದರು.

ಯಾವುದೇ ಸೂಚನೆ, ಕಾಲಾವಕಾಶ ನೀಡದೇ ತೆರವಿಗೆ ಮುಂದಾಗಿದ್ದಾರೆ ಎಂದು ಅಲ್ಲಿನ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿ ಮಾತಿನ ಚಕಮಕಿ ನಡೆಸಿದ ಘಟನೆಯೂ ನಡೆಯಿತು.

ಸುಮಾರು 25 ವರ್ಷಗಳ ಹಿಂದೆ ಕೊಂಡಜ್ಜಿ ರಸ್ತೆಯ ನಿವಾಸಿ ರಾಮಪ್ಪ ಗೌಡರು ಒಟ್ಟು 16 ಮನೆ ನಿರ್ಮಿಸಿದ್ದರು. ಈ ಮನೆಗಳನ್ನು ಪಾಲಿಕೆಯ ಪಾರ್ಕ್ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡರು. ಮೂರು ಮನೆಗಳನ್ನು ಒಡೆದು ಹಾಕಿದ ನಂತರ ಜಿಲ್ಲಾಧಿಕಾರಿಯವರು ಮನೆಗಳ ತೆರವಿಗೆ ಎರಡು ದಿನ ಕಾಲಾವಕಾಶ ನೀಡಿ ಆದೇಶಿಸಿದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಮನೆಗಳ ತೆರವು ಕಾರ್ಯಾಚರಣೆ ಅರ್ಧಕ್ಕೆ ಕೈಬಿಟ್ಟರು.

‘ಯಾವುದೇ ನೋಟಿಸ್ ನೀಡದೆ ಏಕಾಏಕಿ ಮನೆಗಳನ್ನು ತೆರವುಗೊಳಿಸಿದ್ದಾರೆ. ಪೊಲೀಸರು ಮಹಿಳೆಯರನ್ನು ಮನೆಯಿಂದ ಹೊರಗೆ ಎಳೆದು ಹಾಕಿ ದೌರ್ಜನ್ಯ ಎಸಗಿದ್ದಾರೆ. ಮನೆಯ ಮಾಲಕರಿಗೆ ನೋಟೀಸ್ ನೀಡಿದ್ದಾರಂತೆ. ಆದರೆ, ಅವರು ನಮಗೆ ತಿಳಿಸಿಲ್ಲ. ಈಗ ನಮ್ಮ ಬದುಕು ಬೀದಿಗೆ ಬಂದಿದೆ’ ಎಂದು ನಿವಾಸಿಗಳು ಅಳಲು ತೋಡಿಕೊಂಡರು.

ಮನೆ ಬಾಡಿಗೆದಾರ ನಿರಂಜನ್ ಮಾತನಾಡಿ, ದಾವಣಗೆರೆಯಲ್ಲಿ ಈ ರೀತಿ ಸರಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಸಾಕಷ್ಟು ಕಡೆ ಮನೆ ನಿರ್ಮಿಸಲಾಗಿದೆ. ಅಧಿಕಾರಿಗಳು ಅವರ ಮೇಲೂ ಕ್ರಮ ಕೈಗೊಳ್ಳಲಿ. ಇಲ್ಲಿ ನಾಲ್ಕು ಮನೆಗಳನ್ನು ಒಡೆದು ಹಾಕಿದರೆ ಸಾಲದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮನೆಗಳ ಮಾಲಕ ರಾಮಪ್ಪಗೌಡರು ಮಾತನಾಡಿ, ಅಧಿಕಾರಿಗಳು ನಮಗೆ ನೋಟೀಸ್ ಕೂಡ ನೀಡದೆ ಮನೆಗಳ ತೆರವಿಗೆ ಬಂದಿದ್ದಾರೆ. ಅಧಿಕಾರಿಗಳು ನೋಟೀಸ್ ನೀಡಿದ್ದೇವೆ ಎನ್ನುತ್ತಿದ್ದು, ಅದು ನೋಟೀಸ್ ಅಲ್ಲ. ಇ-ಸ್ವತ್ತು ಪತ್ರ. ಅದು ಹೇಗೆ ನೋಟೀಸ್ ಆಗಲು ಸಾಧ್ಯ? ಎಂದು ಪ್ರಶ್ನಿಸಿದರು.

25 ವರ್ಷಗಳ ಹಿಂದೆಯೇ ಮನೆಗಳನ್ನು ನಿರ್ಮಿಸಿದ್ದೇವೆ. ಹಿಂದೆ ಜಮೀನಾಗಿತ್ತು, ವಂಶ ಪಾರಂಪರ್ಯವಾಗಿ ನಮಗೆ ಬಂದಿದೆ. ಮನೆಗೆ ವಿದ್ಯುತ್ ಬಿಲ್, ನೀರಿನ ಬಿಲ್ ಸೇರಿದಂತೆ ಎಲ್ಲ ದಾಖಲೆಗಳನ್ನು ಕೊಟ್ಟು, ಕೆಲವೇ ತಿಂಗಳುಗಳ ಹಿಂದೆ ಕಂದಾಯ ಹಣವನ್ನು ಕಟ್ಟಿಸಿಕೊಂಡ ಅಧಿಕಾರಿಗಳು ಐದು ತಿಂಗಳಿನಿಂದ ಸರಕಾರಿ ಜಾಗ, ಪಾರ್ಕ್ ಜಾಗ ಎನ್ನುತ್ತಿದ್ದಾರೆ.

-ರಾಮಪ್ಪಗೌಡ, ಮನೆಗಳ ಮಾಲಕ

Tags

Davangere
share
ವಾರ್ತಾಭಾರತಿ
ವಾರ್ತಾಭಾರತಿ
Next Story
X