Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. Davangere | ದೇವಸ್ಥಾನ ಪ್ರವೇಶಿಸಿದ...

Davangere | ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಐವರು ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಆರೋಪ; 42 ಜನರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ1 Aug 2026 8:00 PM IST
share
Davangere | ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಐವರು ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಆರೋಪ; 42 ಜನರ ವಿರುದ್ಧ ಪ್ರಕರಣ ದಾಖಲು
ಅಧಿಕಾರಿಗಳ ಸಮ್ಮುಖದಲ್ಲಿ ದಲಿತರಿಂದ ದೇವಸ್ಥಾನ ಪ್ರವೇಶ

ಚನ್ನಗಿರಿ (ದಾವಣಗೆರೆ) : ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಐದು ಮಂದಿ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ಘಟನೆಯಲ್ಲಿ ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ 42 ಜನರ ವಿರುದ್ದ ಪ್ರಕರಣ ದಾಖಲಾಗಿದೆ.

ಶುಕ್ರವಾರ ಗ್ರಾಮದಲ್ಲಿ ʼಅಜ್ಜಿಹಬ್ಬʼದ ಆಚರಣೆಯ ಅಂಗವಾಗಿ ದಲಿತ ಸಮುದಾಯದವರು ಸಂಪ್ರದಾಯದಂತೆ ಎಡೆ ಹಾಗೂ ‘ಅಮ್ಮ (ಕೇಲು)'ಗಳನ್ನು ಪೂಜಿಸಿ ಗ್ರಾಮದ ಗಡಿಭಾಗಕ್ಕೆ ಕೊಂಡೊಯ್ಯುವ ವೇಳೆ ದೊಡ್ಡಯ್ಯಸ್ವಾಮಿ ದೇವಸ್ಥಾನದ ಬಳಿ ತೆರಳಿದ್ದರು.

ಈ ವೇಳೆ ಗ್ರಾಮದ ಕೆಲವರು ‘ದೇವಸ್ಥಾನದ ಬಳಿ ಬರಬಾರದು’ ಎಂದು ತಡೆದು ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವೇಳೆ ಎರಡು ಬಣಗಳ ನಡುವೆ ಘರ್ಷಣೆ ನಡೆದಿದ್ದು, ಐವರು ದಲಿತ ಯುವಕರು ಗಾಯಗೊಂಡಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಎಸ್ಪಿ ಡಾ.ಎಚ್.ಟಿ.ಶೇಖರ್, ಉಪವಿಭಾಗಾಧಿಕಾರಿ ಡಾ. ಚನ್ನಪ್ಪ, ತಹಸೀಲ್ದಾರ್ ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳ ಸಮ್ಮುಖದಲ್ಲೇ ದಲಿತ ಸಮುದಾಯದವರಿಗೆ ದೇವಸ್ಥಾನದ ಒಳಗೆ ಪ್ರವೇಶ ಕಲ್ಪಿಸಿ ದೇವರ ದರ್ಶನ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ‘ಕಾನೂನಿನ ಮುಂದೆ ಎಲ್ಲರೂ ಸಮಾನರು. ಜಾತಿ ಆಧಾರಿತ ತಾರತಮ್ಯ ಅಥವಾ ಸಾರ್ವಜನಿಕ ಸ್ಥಳಗಳು, ಹೋಟೆಲ್, ಕಟಿಂಗ್ ಶಾಪ್ ಹಾಗೂ ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗ್ರಾಮದ ರುದ್ರಭೂಮಿಯ ಜಾಗ ಅತಿಕ್ರಮಣಗೊಂಡಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ, ತಕ್ಷಣವೇ ತೆರವುಗೊಳಿಸಲು ಸೂಚನೆ ನೀಡಿದರು. ಅವರ ನಿರ್ದೇಶನದ ಮೇರೆಗೆ ತಹಸೀಲ್ದಾರ್ ಎನ್.ಜೆ. ನಾಗರಾಜ್ ಸ್ಥಳಕ್ಕೆ ಭೇಟಿ ನೀಡಿ ಬೇಲಿ ತೆರವುಗೊಳಿಸಿದರು.

ಎಸ್ಪಿ ಡಾ.ಎಚ್.ಟಿ.ಶೇಖರ್ ಮಾತನಾಡಿ, ದಲಿತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಡಾ. ಚನ್ನಪ್ಪ ಮಾತನಾಡಿ, ಘಟನೆ ಸಂಬಂಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಸಂವಿಧಾನದ ಪ್ರಕಾರ ಎಲ್ಲರಿಗೂ ದೇವಾಲಯ ಹಾಗೂ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸುವ ಹಕ್ಕು ಇದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರ ಬೀಳಲಿದೆ. ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದರು.

ಸ್ಥಳದಲ್ಲಿ ಡಿವೈಎಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಮಲ್ಲಿಕಾರ್ಜುನ್, ತಹಸೀಲ್ದಾರ್ ಎನ್.ಜೆ. ನಾಗರಾಜ್, ದಲಿತ ಸಂಘಟನೆಗಳ ಮುಖಂಡರಾದ ಕಗತೂರು ಆನಂದ್, ಬಸಾಪುರ ರಂಗನಾಥ್, ಕುಬೇಂದ್ರಸ್ವಾಮಿ, ಪ್ರಭಾಕರ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Tags

Davangeretemple
share
ವಾರ್ತಾಭಾರತಿ
ವಾರ್ತಾಭಾರತಿ
Next Story
X