Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಶಾಲಾ ಹಂತದಲ್ಲೇ ಮಕ್ಕಳಲ್ಲಿ ಸಾಹಿತ್ಯದ...

ಶಾಲಾ ಹಂತದಲ್ಲೇ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಬೇಕು : ಶಾಸಕ ಬಸವಂತಪ್ಪ

ವಾರ್ತಾಭಾರತಿವಾರ್ತಾಭಾರತಿ19 Jan 2026 12:11 AM IST
share
ಶಾಲಾ ಹಂತದಲ್ಲೇ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಬೇಕು : ಶಾಸಕ ಬಸವಂತಪ್ಪ
ದಾವಣಗೆರೆ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ

ದಾವಣಗೆರೆ : ಈಗಿನ ಮಕ್ಕಳು ಹೆಚ್ಚು ಪ್ರಜ್ಞಾವಂತರಾಗುತ್ತಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಿಗೆ ಬೇಕಾಗಿರುವ ಸಂಸ್ಕೃತಿ, ಸಂಸ್ಕಾರಗಳನ್ನು ಒಳಗೊಂಡಿರುವ ಸಾಹಿತ್ಯವನ್ನು ನೀಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸಲಹೆ ನೀಡಿದ್ದಾರೆ.

ತಾಲೂಕಿನ ಕುರ್ಕಿ-ಹಿರೇತೊಗಲೇರಿಯಲ್ಲಿ ರವಿವಾರ ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ದಾವಣಗೆರೆ ತಾಲೂಕು 12ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ಮಕ್ಕಳಿಗೆ ಪ್ರೀತಿ, ವಿಶ್ವಾಸ ತೋರಿಸಬೇಕು. ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿ, ಆತ್ಮವಿಶ್ವಾಸ ತುಂಬಬೇಕು. ಮೂಢನಂಬಿಕೆ ಹೋಗಲಾಡಿಸಿ, ವೈಚಾರಿಕತೆ ಬೆಳೆಸಬೇಕು. ಉತ್ತಮ ಮೌಲ್ಯಗಳನ್ನು ಕಲಿಸಿ, ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೂಡ ಹೆಚ್ಚು ಹೆಚ್ಚು ಕಾರ್ಯ ಚಟುವಟಿಕೆಗಳನ್ನು ಶಾಲಾ- ಕಾಲೇಜು ಮಕ್ಕಳಿಗೆ ಹಮ್ಮಿಕೊಂಡು ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಬೇಕೆಂದರು.

ಗ್ರಾಮೀಣ ಪ್ರದೇಶಗಳಲ್ಲಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಅತ್ಯಂತ ಅಗತ್ಯವಿದೆ. ಏಕೆಂದರೆ ಸಮ್ಮೇಳನಗಳು ಗ್ರಾಮೀಣ ಜನರ ಸಾಹಿತ್ಯ, ಸಂಸ್ಕೃತಿ, ಕಲೆಗಳನ್ನು ಪ್ರೋತ್ಸಾಹಿಸುತ್ತವೆ, ಕನ್ನಡ ಭಾಷೆಯ ಪ್ರಚಾರ ಮಾಡುತ್ತವೆ, ಗ್ರಾಮೀಣ ಸಮಸ್ಯೆಗಳನ್ನು ಮುಖ್ಯ ವೇದಿಕೆಗೆ ತರುತ್ತವೆ, ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡುತ್ತವೆ ಮತ್ತು ಸಾಹಿತ್ಯ ಪರಿಷತ್ತನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುತ್ತವೆ. ಈ ಸಮ್ಮೇಳನಗಳು ಸ್ಥಳೀಯ ಅಭಿವೃದ್ಧಿ, ಶಿಕ್ಷಣ ಹಾಗೂ ಸಾಂಸ್ಕೃತಿಕ ಪುನರುಜ್ಜೀವನಕ್ಕೆ ಪ್ರಮುಖವಾಗಿವೆ ಎಂದರು.

ಪಟ್ಟಣದ ಸಮ್ಮೇಳನಗಳಿಗೆ ಹೋಗಲು ಕಷ್ಟಪಡುವ ಗ್ರಾಮಸ್ಥರು, ಮಕ್ಕಳನ್ನು ಸಾಹಿತ್ಯ ಮತ್ತು ಸಂಸ್ಕೃತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿ. ಅಲ್ಲದೇ ಸರಕಾರಿ ಶಾಲೆಗಳ ಅಭಿವೃದ್ಧಿ, ಗ್ರಾಮೀಣ ಪ್ರದೇಶಗಳಲ್ಲಿನ ಸಾಹಿತ್ಯ ಅಭಿರುಚಿ, ಸ್ಥಳೀಯ ಸಂಸ್ಕೃತಿಗಳ ರಕ್ಷಣೆ, ಪ್ರವಾಸೋದ್ಯಮ ಅಭಿವೃದ್ಧಿ ಮುಂತಾದ ಗ್ರಾಮೀಣ ಸಮಸ್ಯೆಗಳನ್ನು ಮುಖ್ಯ ವೇದಿಕೆಗೆ ತರಲು ಸಮ್ಮೇಳನಗಳು ವೇದಿಕೆ ಒದಗಿಸುತ್ತವೆ ಎಂದು ಶಾಸಕ ಬಸವಂತಪ್ಪ ತಿಳಿಸಿದರು.

ಸರಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ನಾಳೆಯಿಂದಲೇ ಶಾಲೆಯ ಅಭಿವೃದ್ಧಿಗೆ ಕ್ರಮ ಜರುಗಿಸುತ್ತೇನೆ. ರೈತರ ಹಿತವನ್ನು ಕಾಪಾಡುತ್ತೇನೆ. ಈಗಾಗಲೇ 70 ಕೋಟಿ ರೂ. ವೆಚ್ಚದಲ್ಲಿ ಭದ್ರಾ ಕಾಲುವೆಗಳ ಆಧುನೀಕರಣ ಕಾರ್ಯ ಪ್ರಾರಂಭಿಸಲಾಗಿದೆ. ಜೊತೆಗೆ 22 ಕೆರೆಗಳ ಏತನೀರಾವರಿ ಯೋಜನೆಯ ಕಾಮಗಾರಿಯನ್ನೂ ಶೀಘ್ರದಲ್ಲಿ ಪ್ರಾರಂಭಿಸುವ ಮೂಲಕ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇದೇ ಸಂದರ್ಭ ‘ವಿಜ್ಞಾನಧಾರೆ’, ‘ಸೌರ ಕುಟುಂಬ’, ‘ಅಂತಸಾಕ್ಷಿ’, ‘ಜೀವನಾಡಿ’ ಹಾಗೂ ‘ತಾತನ ಪ್ರತಿಧ್ವನಿಗಳು’ ಕೃತಿಗಳನ್ನು ಗಣ್ಯರು ಲೋಕಾರ್ಪಣೆಗೊಳಿಸಿದರು. ಬಳಿಕ ಕೃತಿಗಳನ್ನು ರಚಿಸಿದ ಸಾಹಿತಿಗಳನ್ನು ಸನ್ಮಾನಿಸಲಾಯಿತು.

ಸಮ್ಮೇಳನದ ಸರ್ವಾಧ್ಯಕ್ಷ ಎಸ್.ಸಿದ್ದೇಶ್ ಕುರ್ಕಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ತೊಗಲೇರಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಸುಮತಿ ಜಯ್ಯಪ್ಪ, ಕುರ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಟಿ.ಟಿ.ನಳಿನಾಕ್ಷಿ ವೆಂಕಟೇಶ್, ದೂಡ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸರ್ವ ಸದಸ್ಯರು, ಪದಾಧಿಕಾರಿಗಳು, ಶಾಲಾ ಮಕ್ಕಳು ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.


Tags

MLA Basavanthappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X