Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಉಪಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಸೋಲಿನ...

ಉಪಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಸೋಲಿನ ಭೀತಿ : ಶ್ರೀರಾಮುಲು

ವಾರ್ತಾಭಾರತಿವಾರ್ತಾಭಾರತಿ2 April 2026 1:22 PM IST
share
ಉಪಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಸೋಲಿನ ಭೀತಿ : ಶ್ರೀರಾಮುಲು

ದಾವಣಗೆರೆ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಸೋಲಿನ ಭೀತಿ ಮತ್ತು ಭಯ ಆರಂಭವಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ತಿಳಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಸರಕಾರ ಹುಟ್ಟಿದ್ದೇ ಸುಳ್ಳಿನಿಂದ. ಅದಕ್ಕೆ ಈಗಲೂ ಅವರು ಸುಳ್ಳು ಹೇಳುತ್ತಿದ್ದಾರೆ. ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಬಿಜೆಪಿ ಗೆದ್ದರೆ ಗ್ಯಾರಂಟಿಗಳನ್ನು ಬಂದ್ ಮಾಡುತ್ತೇವೆ ಎಂದು ಸಿಎಂ ಹೇಳುತ್ತಾರೆ. ಕರ್ನಾಟಕದಲ್ಲಿ ಇರುವುದು ಕಾಂಗ್ರೆಸ್ ಸರಕಾರವೇ ಹೊರತು ಬಿಜೆಪಿ ಸರಕಾರವಲ್ಲ. ಆದ್ದರಿಂದ ಗ್ಯಾರಂಟಿ ನಿಲ್ಲಿಸುವುದಿದ್ದರೆ ಅವರೇ ನಿಲ್ಲಿಸಬೇಕು ಎಂದರು.

ಕಾಂಗ್ರೆಸ್‍ನವರು ಮೊದಲಿನಿಂದಲೂ ಜನರು ದಡ್ಡರು ಅಂತ ತಿಳಿದಿದ್ದಾರೆ. ಆದರೆ ಈಗ ಎರಡೂ ಕಡೆ ಸೋಲುತ್ತಿದ್ದೇವೆ ಎಂಬ ಮನವರಿಕೆ ಅವರಿಗೆ ಅಗಿದೆ. ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಅವರ ಪರವಾಗಿ ಎಲ್ಲರೂ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಇದರಿಂದ ಕಾಂಗ್ರೆಸ್‍ಗೆ ಸೋಲಿನ ಭೀತಿ ಪ್ರಾರಂಭವಾಗಿದೆ ಎಂದರು.

2018ರಲ್ಲಿ ಚುನಾವಣೆ ನಡೆದಾಗ ದಲಿತ ನಾಯಕ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗಿತ್ತು. ಆಗ ಸಿದ್ದರಾಮಯ್ಯ ಪರಮೇಶ್ವರ್ ಅವರನ್ನು ಸೋಲಿಸಿದರು. ಈಗ ಕಾಲ ಬದಲಾಗಿದೆ. ಅಹಿಂದ ಹೆಸರು ಹೇಳಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಅಧಿಕಾರ ಹಂಚಿಕೆ ಮಾಡುವಾಗ ಅಹಿಂದ ಇಲ್ಲ. ಬೇಕಾದವರಿಗೆ ಮಾತ್ರ ಅಧಿಕಾರ ಕೊಟ್ಟರು ಎಂದರು.

ಸಿದ್ದರಾಮಯ್ಯ ಅವರಿಗೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೈಯುವುದು ಬಿಟ್ಟು ಬೇರೇನೂ ಗೊತ್ತಿಲ್ಲ. ಯಾವುದೇ ಹೊಸ ವಿಚಾರ ಇಲ್ಲ. ಆದರೆ ಇವರ ಸರಕಾರ ಏನೂ ಮಾಡಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರ ಐಸಿಯು ಸ್ಥಿತಿಯಲ್ಲಿದೆ. ಸುಳ್ಳಿನ ವೆಂಟಿಲೇಟರ್ ಮೇಲೆ ಸರಕಾರ ಇದೆ. ಆ ವೆಂಟಿಲೇಟರ್ ತೆಗೆದರೆ ಸರಕಾರದ ಕಥೆ ಮುಗಿದಂತೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ನೀತಿ ಆಯೋಗದ ಸಭೆಗೆ, ಜಿಎಸ್‍ಟಿ ಸಭೆಗಳಿಗೆ ಚಕ್ಕರ್ ಹಾಕಿದ್ದಾರೆ. ಮಧ್ಯ ಏಷ್ಯಾ ದಲ್ಲಿ ಯುದ್ಧ ನಡೆಯುತ್ತಿದೆ. ರಾಜ್ಯಕ್ಕೆ ಸಂಬಂಧಿಸಿದ ಸಭೆ ಕರೆದರೂ ಇವರು ಹೋಗುವುದಿಲ್ಲ. ಇಂತಹವರಿಗೆ ಮೋದಿ ಅವರನ್ನು ಬೈಯುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ದಕ್ಷಿಣ ಕ್ಷೇತ್ರದಲ್ಲಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಗೆಲ್ಲುತ್ತಾರೆ ಎಂಬ ಎಲ್ಲಾ ವಿಶ್ವಾಸ ಇದೆ. ಈ ಬಾರಿ ಎಲ್ಲರೂ ಬಿಜೆಪಿಗೆ ಮತ ನೀಡಲು ಸಂಕಲ್ಪ ಮಾಡಿದ್ದಾರೆ. ಎಲ್ಲಾ ನಾಯಕರು ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

Tags

Sriramulu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X