Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ದಾವಣಗೆರೆಯಲ್ಲಿ ಶಂಕಿತ ಉಗ್ರ ಚಟುವಟಿಕೆ...

ದಾವಣಗೆರೆಯಲ್ಲಿ ಶಂಕಿತ ಉಗ್ರ ಚಟುವಟಿಕೆ ಆರೋಪ: ಉತ್ತರ ಪ್ರದೇಶ ಮೂಲದ ಯುವಕನ ಬಂಧನ

ವಾರ್ತಾಭಾರತಿವಾರ್ತಾಭಾರತಿ24 Jun 2026 4:02 PM IST
share
ದಾವಣಗೆರೆಯಲ್ಲಿ ಶಂಕಿತ ಉಗ್ರ ಚಟುವಟಿಕೆ ಆರೋಪ: ಉತ್ತರ ಪ್ರದೇಶ ಮೂಲದ ಯುವಕನ ಬಂಧನ

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಉತ್ತರ ಪ್ರದೇಶ ಮೂಲದ 20 ವರ್ಷದ ಸುಹೇಲ್ ಎಂಬ ಯುವಕನನ್ನು ಶಂಕಿತ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂಬ ಸಂಶಯದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್.ಟಿ. ಮಾಹಿತಿ ನೀಡಿದ್ದು, ಸದ್ಯಕ್ಕೆ ಯಾವುದೇ ಸಂಘಟನೆಯೊಂದಿಗೆ ಆರೋಪಿಗೆ ನೇರ ಸಂಪರ್ಕವಿದೆ ಎಂಬುದು ದೃಢಪಟ್ಟಿಲ್ಲ. ಪ್ರಕರಣದ ಕುರಿತು ಈಗಲೇ ಯಾವುದೇ ಅಂತಿಮ ತೀರ್ಮಾನಕ್ಕೆ ಬರುವುದು ಸೂಕ್ತವಲ್ಲ. ಆರೋಪಿಯ ಮೊಬೈಲ್ ಹಾಗೂ ಡಿಜಿಟಲ್ ಮಾಹಿತಿಯ ಸಂಪೂರ್ಣ ಪರಿಶೀಲನೆಯ ಬಳಿಕವೇ ಇತರ ವ್ಯಕ್ತಿಗಳು ಅಥವಾ ಹಿಂದಿನ ಪ್ರಕರಣಗಳೊಂದಿಗೆ ಯಾವುದೇ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಬಂಧಿತನ ಮೊಬೈಲ್ ಫೋನ್ ಸೇರಿದಂತೆ ಇತರ ಡಿಜಿಟಲ್ ಸಾಧನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದೆ. ತನಿಖೆಯ ಭಾಗವಾಗಿ ಸಾಮಾಜಿಕ ಜಾಲತಾಣಗಳ ಸಂಪರ್ಕಗಳು, ಸಂದೇಶಗಳು ಹಾಗೂ ಕರೆ ವಿವರಗಳನ್ನು ಪರಿಶೀಲಿಸಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕವೇ ಆರೋಪಿಯ ಚಟುವಟಿಕೆಗಳ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Tags

DavangereUttar Pradesh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X