Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. Hubballi | ವಿಶ್ವ ಶಾಂತಿಗಾಗಿ ತಕ್ಷಣವೇ...

Hubballi | ವಿಶ್ವ ಶಾಂತಿಗಾಗಿ ತಕ್ಷಣವೇ ಯುದ್ಧ ನಿಲ್ಲಿಸಲು ಆಗ್ರಹ; ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ10 March 2026 10:57 PM IST
share
Hubballi | ವಿಶ್ವ ಶಾಂತಿಗಾಗಿ ತಕ್ಷಣವೇ ಯುದ್ಧ ನಿಲ್ಲಿಸಲು ಆಗ್ರಹ; ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರಿಂದ ಧರಣಿ

ಹುಬ್ಬಳ್ಳಿ : ಇರಾನ್ ಮತ್ತು ಜಗತ್ತಿನ ಇತರ ಭಾಗಗಳ ಮೇಲೆ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಭಾರತ ಸರಕಾರ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ಹುಬ್ಬಳ್ಳಿಯ ಡಾ. ಅಂಬೇಡ್ಕರ್ ವೃತ್ತದಲ್ಲಿ ಸಿಐಟಿಯು ನೇತೃತ್ವದಲ್ಲಿ ‘ವಿಶ್ವ ಶಾಂತಿಗಾಗಿ ಯುದ್ಧ ವಿರೋಧಿಸಿ’ ಕಾರ್ಮಿಕರ ಪ್ರದರ್ಶನ ನಡೆಯಿತು.

ಈ ವೇಳೆ ಮಾತನಾಡಿದ ಸಿಐಟಿಯು ಅಖಿಲ ಭಾರತ ಕಾರ್ಯದರ್ಶಿ ಕೆ.ಎನ್.ಉಮೇಶ್, ಇರಾನ್ ಮೇಲಿನ ಯುಎಸ್-ಇಸ್ರೇಲ್ ಮಿಲಿಟರಿ ಆಕ್ರಮಣವನ್ನು ಬಲವಾಗಿ ಖಂಡಿಸಿದರು. ಜಾಗತಿಕವಾಗಿ ತೈಲೋತ್ಪನ್ನಗಳ ಮೇಲೆ ಅಧಿಪತ್ಯ ಸಾಧಿಸಲು ಸಲುವಾಗಿ ಅಮೆರಿಕ ಹೀನ ಕೃತ್ಯಕ್ಕೆ ಇಳಿದಿದ್ದು, ವೆನಿಝುವೆಲಾ, ಲಿಬಿಯಾ, ಇರಾನ್ ಮೇಲೆ ದಾಳಿ ನಡೆಸಿದೆ. ಇದರಿಂದ ಭಾರತದ ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸುವಂತಾಗಿದೆ. ಹೀಗಾಗಿ ಈ ಸಾಮ್ರಾಜ್ಯಶಾಹಿ ಯುದ್ಧವನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.

ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಮಾತನಾಡಿ, ಅಮೆರಿಕ ಏಕಪಕ್ಷೀಯ ಅಸಮಂಜಸ ಸುಂಕ ಯುದ್ಧದ ನಂತರ, ಈಗ ಇರಾನ್ ಮೇಲೆ ಏಕಪಕ್ಷೀಯ ಬಾಂಬ್ ದಾಳಿಯು ಇಡೀ ಮಧ್ಯಪ್ರಾಚ್ಯವನ್ನು ಯುದ್ಧದ ಸ್ಥಿತಿಗೆ ಮತ್ತು ಇಡೀ ಜಗತ್ತನ್ನು ಆರ್ಥಿಕ ಪ್ರಕ್ಷುಬ್ಧತೆಯ ಸ್ಥಿತಿಗೆ ತಳ್ಳಿದೆ. ನಾಗರಿಕ ಮೂಲಸೌಕರ್ಯ, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಮತ್ತು ನಗರ ಪ್ರದೇಶಗಳನ್ನು ಹೇಡಿತನದಿಂದ ಗುರಿಯಾಗಿಸಿಕೊಂಡಿರುವುದು ಜಿನೇವಾ ಸಮಾವೇಶಗಳು ಸೇರಿದಂತೆ ಅಂತರ್‌ರಾಷ್ಟ್ರೀಯ ಮಾನವೀಯ ಕಾನೂನನ್ನು ಉಲ್ಲಂಘಿಸುತ್ತದೆ. ಇರಾನ್‌ನ ಸರ್ವೋಚ್ಚ ನಾಯಕರಾಗಿದ್ದ ಆಯತುಲ್ಲಾ ಖಾಮಿನೈ ಮತ್ತು ಅನೇಕ ನಾಯಕರು ಕೊಲ್ಲಲ್ಪಟ್ಟಿದ್ದಾರೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಬಾಲಕಿಯರ ಶಾಲೆಯ ಮೇಲೆ ಗುರಿಯಾಗಿಟ್ಟುಕೊಂಡು ನಡೆಸಿದ ಬಾಂಬ್ ದಾಳಿಯಲ್ಲಿ 165 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ಇದು ಅಪರಾಧಿ ಆಡಳಿತಗಳ ಕ್ರೌರ್ಯ ಮತ್ತು ಅನಾಗರಿಕತೆಯ ವಿಸ್ತರಣೆಯನ್ನು ತೋರಿಸುತ್ತದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡರಾದ ಮಹೇಶ ಪತ್ತಾರ, ಬಿ.ಐ.ಈಳಿಗೇರ, ತಿಲಕ ಗೌಡ, ಯಮುನಾ ಗಾಂವಕರ, ಗುರುಸಿದ್ದಪ್ಪ ಅಂಬಿಗೇರ, ಬಾಬಾಜಾನ ಮುಧೋಳ, ಚಿದಾನಂದ ಸವದತ್ತಿ, ಮಂಜುಳಾ ಪವಾರ, ಬಸೀರ ಮುಧೋಳ, ದೊಡ್ಡವ್ವ ಪೂಜಾರಿ, ಮಹೇಶ ಹುಲಗೋಡ, ಜಯಶ್ರೀ, ದೊಡ್ಡವ್ವ ಪೂಜಾರಿ, ಮಂಜುನಾಥ ಹುಜರಾತಿ, ಮಂಜುಳಾ ಪವಾರ ಹಾಗು ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.

ಎರಡು ವರ್ಷಗಳ ಹಿಂದೆ ಫೆಲೆಸ್ತೀನ್ ಜನರ ಮೇಲೆ ಇಸ್ರೇಲ್ ನಡೆಸಿದ ದಾಳಿಯಿಂದಾಗಿ 70 ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದು ಅಮೆರಿಕ ಮತ್ತು ಇಸ್ರೇಲ್ ಯುದ್ಧ ದಾಹಕ್ಕೆ ಉದಾಹರಣೆ ಆಗಿದೆ. ಸಮಾಜವಾದಿ ದೇಶಗಳ ಅನುಪಸ್ಥಿತಿಯಿಂದಾಗಿ ಅಮೆರಿಕನ್ ಸಾಮ್ರಾಜ್ಯಶಾಹಿ ಏಕಚಕ್ರಾಧಿಪತ್ಯದಿಂದಾಗಿ ಜಗತ್ತು ನಲುಗಿ ಹೋಗಿದೆ. ಇದರ ವಿರುದ್ಧ ಜಾಗತಿವಾಗಿ ಪ್ರತಿರೋಧ ಬೆಳೆದು ಬರಬೇಕು.

ಸನತ್ ಕುಮಾರ್ ಬೆಳಗಲಿ, ಹಿರಿಯ ಪತ್ರಕರ್ತ

Tags

Hubballi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X