Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ...

ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ ಬದಲಾಯಿಸಬೇಕೆಂಬ ನಿಲುವಿನಿಂದ ಪ್ರಾಣ ಹೋದರೂ ಹಿಂದೆ ಸರಿಯೊಲ್ಲ: ದಿಂಗಾಲೇಶ್ವರ ಸ್ವಾಮೀಜಿ

"ಬಿಜೆಪಿಗೆ ಜೋಶಿ ಅನಿವಾರ್ಯವಾದರೆ, ನಮಗೆ ಜನರ ಹಿತ, ನೆಮ್ಮದಿ ಅನಿವಾರ್ಯ"

ವಾರ್ತಾಭಾರತಿವಾರ್ತಾಭಾರತಿ31 March 2024 2:13 PM IST
share
ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ ಬದಲಾಯಿಸಬೇಕೆಂಬ ನಿಲುವಿನಿಂದ ಪ್ರಾಣ ಹೋದರೂ ಹಿಂದೆ ಸರಿಯೊಲ್ಲ: ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ, ಮಾ.31: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ದಮನಕಾರಿ ನೀತಿಯಿಂದ ಕ್ಷೇತ್ರದ ಹಲವು ಸಮುದಾಯಗಳು ನೊಂದಿವೆ. ನೊಂದವರಿಗೆ ನ್ಯಾಯ ಕೊಡಿಸಬೇಕಿದೆ. ಆದ್ದರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಜೋಶಿಯವರನ್ನು ಬದಲಾಯಿಸಬೇಕೆಂಬ ನಿಲುವಿನಿಂದ ಮಾನ, ಪ್ರಾಣ ಹೋದರೂ ಹಿಂದೆ ಸರಿಯುವುದಿಲ್ಲ. ಜೋಶಿಯನ್ನು ಸೋಲಿಸುವುದು ಅನಿವಾರ್ಯವಾಗಿದೆ ಎಂದು ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಜೋಶಿ ಅನಿವಾರ್ಯವಾದರೆ, ನಮಗೆ ಜನರ ಹಿತ, ನೆಮ್ಮದಿ ಅನಿವಾರ್ಯ. ಇದಕ್ಕಾಗಿ ಹೋರಾಟವೂ ಅನಿವಾರ್ಯವಾಗಿದೆ. ನನ್ನ ಜೀವ ಇರುವವರೆಗೆ ಈ ಹೋರಾಟ ಮುಂದುವರಿಯಲಿದೆ. ಮುಂದಿಟ್ಟ ಹೆಜ್ಜೆ ಹಿಂದೆ ಇಡಲ್ಲ. ಆಮಿಷ, ಬೆದರಿಕೆಗೆ ಬಗ್ಗುವ ಮನಸ್ಥಿತಿಯ, ಪರಿಸ್ಥಿತಿಯ ಸ್ವಾಮಿ ನಾನಲ್ಲ ಎಂದರು.

ಅಭ್ಯರ್ಥಿ ಬದಲಾವಣೆಗೆ ಮಾರ್ಚ್ 31ರವರೆಗೆ ಗಡುವು ವಿಧಿಸಿದ್ದೆವು. ಆದರೆ ಬಿಜೆಪಿ ಈ ಬಗ್ಗೆ ಕ್ರಮ ವಹಿಸದ ಕಾರಣ ಎಪ್ರಿಲ್ 2ರಂದು ಬೆಳಗ್ಗೆ 10:30ಕ್ಕೆ ಧಾರವಾಡದಲ್ಲಿ ಲೋಕಸಭಾ ಕ್ಷೇತ್ರದ ಭಕ್ತರ ಸಭೆ ನಡೆಸಿ, ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದರು.

ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, ನೊಂದವರಿಗೆ ಸಾಂತ್ವನ ನೀಡುವುದು ನಮ್ಮ ಉದ್ದೇಶ. ಚುನಾವಣೆಗೆ ಸ್ಪರ್ಧಿಸುವ, ಬೇರೊಬ್ಬರನ್ನು ಸ್ಪರ್ಧಿಸುವಂತೆ ಮಾಡುವ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯ ಹಲವು ನಾಯಕರು ದೂರವಾಣಿ ಮೂಲಕ ಹಾಗೂ ಪ್ರತ್ಯಕ್ಷವಾಗಿ ನನ್ನ ಮನವೊಲಿಸಲು ಯತ್ನಿಸಿದರು. ಮಾನಹಾನಿ, ಪ್ರಾಣಹಾನಿಯ ಬೆದರಿಕೆಗಳೂ ಬಂದವು. ಆದರೆ ನಾನು ಒಂದು ಬಾರಿ ತೆಗೆದುಕೊಂಡ ತೀರ್ಮಾನವನ್ನು ಎಷ್ಟೇ ದೊಡ್ಡ ವ್ಯಕ್ತಿ, ಎಷ್ಟೇ ಒತ್ತಡ ಹೇರಿದರೂ ಬದಲಾಯಿಸಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X