ಹುಬ್ಬಳ್ಳಿ | ಸಾಲಗಾರರ ಕಿರುಕುಳ ಆರೋಪ: ವ್ಯಕ್ತಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಸಾಲಗಾರರ ಕಿರುಕುಳದಿಂದ ಬೇಸತ್ತು ಸಾಯುತ್ತಿರುವುದಾಗಿ ವೀಡಿಯೊ ಮಾಡಿ ವ್ಯಕ್ತಿಯೋರ್ವ ಆತ್ಮಹತ್ಯೆಗೈದ ಘಟನೆ ಸೋಮವಾರ ಜಿಲ್ಲೆಯ ಎಸ್.ಎಂ.ಕೃಷ್ಣ ನಗರದಲ್ಲಿ ನಡೆದಿದೆ.
ಬಾಷಾ ಸಾಬ್ ಸಂಕೇಶ್ವರ್ (65) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬಾಷಾ ಸಾಬ್ ಅವರು ಹಲವರೊಂದಿಗೆ ಸಾಲ ಪಡೆದಿದ್ದರು. ಆದರೆ, ಸಾಲಗಾರರು ಹಣ ವಾಪಸ್ ಕೊಡುವಂತೆ ನಿತ್ಯ ಪೀಡಿಸುತ್ತಿದ್ದರೆಂದು ಆರೋಪಿಗಳ ಮಾಹಿತಿ ಸಹಿತ ವೀಡಿಯೊ ಮಾಡಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸ್ ಆಯುಕ್ತರು ಬರುವವರೆಗೆ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದ ಘಟನೆಯೂ ನಡೆಯಿತು.
ಈ ಬಗ್ಗೆ ಕಸಬಾ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





