Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಂಚ ಹಗರಣಕ್ಕೆ ನಾಟಕೀಯ ತಿರುವು: ಈಡಿ...

ಲಂಚ ಹಗರಣಕ್ಕೆ ನಾಟಕೀಯ ತಿರುವು: ಈಡಿ ಅಧಿಕಾರಿಯೇ ಆರೋಪಿ!

ವಾರ್ತಾಭಾರತಿವಾರ್ತಾಭಾರತಿ20 May 2025 7:59 AM IST
share
ಲಂಚ ಹಗರಣಕ್ಕೆ ನಾಟಕೀಯ ತಿರುವು: ಈಡಿ ಅಧಿಕಾರಿಯೇ ಆರೋಪಿ!

ತಿರುವನಂತಪುರಂ: ಕಾನೂನು ಜಾರಿ ನಿರ್ದೇಶನಾಲಯದ ಕುಣಿಕೆಯಿಂದ ತಪ್ಪಿಸಲು ಎರಡು ಕೋಟಿ ರೂಪಾಯಿ ಲಂಚ ಪಡೆಯಲು ಯತ್ನಿಸಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ವಿಚಕ್ಷಣಾ ಮತ್ತು ಭ್ರಷ್ಟಾಚಾರ ವಿರೋಧಿ ಬ್ಯೂರೊ (ವಿಎಸಿಬಿ) ಬಂಧಿಸಿದ್ದ ಪ್ರಕರಣ ಇದೀಗ ವಿಚಿತ್ರ ತಿರುವು ಪಡೆದುಕೊಂಡಿದ್ದು, ಇ.ಡಿ ಕೊಚ್ಚಿ ಘಟಕದ ಅಧಿಕಾರಿಯೊಬ್ಬರನ್ನು ಪ್ರಕರಣ ಪ್ರಮುಖ ಆರೋಪಿಯಾಗಿ ವಿಎಸಿಬಿ ವಿಚಾರಣೆಗೆ ಗುರಿಪಡಿಸಿದೆ.

ನಿರ್ದೇಶನಾಲಯದ ಕೊಚ್ಚಿ ಘಟಕದ ಸಹಾಯಕ ನಿರ್ದೇಶಕ ಶೇಖರ್ ಕುಮಾರ್ ಅವರನ್ನು ಮೂವಾಟ್ಟುಪ್ಪುಝ ವಿಚಕ್ಷಣಾ ವಿಶೇಷ ನ್ಯಾಯಾಲಯದಲ್ಲಿ ವಿಎಸಿಬಿ ಸಲ್ಲಿಸಿದ ರಿಮಾಂಡ್ ವರದಿಯಲ್ಲಿ ಪ್ರಮುಖ ಆರೋಪಿಯಾಗಿ ಹೆಸರಿಸಲಾಗಿದೆ. ಎರಡನೇ ಮತ್ತು ಮೂರನೇ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಈ ವರದಿ ಸಲ್ಲಿಕೆಯಾಗಿದೆ. ತಮ್ಮನಂನ ವಿಲ್ಸನ್ ವರ್ಗೀಸ್ (36) ಮತ್ತು ರಾಜಸ್ಥಾನದ ಮುಖೇಶ್ ಕುಮಾರ್ (55) ಅವರನ್ನು ವಿಎಸಿಬಿ ಶುಕ್ರವಾರ ಬಂಧಿಸಿತ್ತು. ಕೊಚ್ಚಿ ಮೂಲದ ಲೆಕ್ಕ ಪರಿಶೋಧಕ ರಂಜಿತ್ ವಾರಿಯರ್ ಎಂಬಾತನನ್ನೂ ವಿಎಸಿಬಿ ಶನಿವಾರ ಬಂಧಿಸಿತ್ತು. ಉದ್ಯಮಿಯ ವಿವರಗಳನ್ನು ವಿಲ್ಸನ್ ಜತೆ ಈತ ಹಂಚಿಕೊಂಡಿದ್ದ ಎನ್ನಲಾಗಿದೆ.

ಉದ್ಯಮಿ ಹೇಳಿಕೆಯ ಆಧಾರದಲ್ಲಿ ಇ.ಡಿ. ಅಧಿಕಾರಿಯನ್ನು ಆರೋಪಿಯಾಗಿ ವಿಚಾರಣೆಗೆ ಗುರಿಪಡಿಸಲಾಗಿದೆ ಎಂದು ಎರ್ನಾಕುಲಂ ವಿಎಸಿಬಿ ಅಧೀಕ್ಷಕ ಎಸ್.ಶಶಿಧರನ್ ಹೇಳಿದ್ದಾರೆ. ಆದರೆ ಅಧಿಕಾರಿಯ ಪಾತ್ರವನ್ನು ಇನ್ನಷ್ಟೇ ದೃಢಪಡಿಸಬೇಕಿದ್ದು, ಅವರನ್ನು ಇನ್ನೂ ಏಕೆ ಬಂಧಿಸಿಲ್ಲ ಎನ್ನುವುದು ಸ್ಪಷ್ಟವಾಗಿಲ್ಲ.

ಗೋಡಂಬಿ ರಫ್ತು- ಆಮದು ಕಂಪನಿಯನ್ನು ನಡೆಸುತ್ತಿದ್ದ ಕೊಲ್ಲಂ ಉದ್ಯಮಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿತ್ತು. ರಿಮಾಂಡ್ ವರದಿಯ ಪ್ರಕಾರ, ಈ ಉದ್ಯಮಿಯ ವಹಿವಾಟು ಅತ್ಯಧಿಕವಾಗಿದ್ದು, ಹಣ ದುರ್ಬಳಕೆಯನ್ನು ಮುಚ್ಚಿ ಹಾಕುವ ಸಲುವಾಗಿ ದಾಖಲೆಗಳನ್ನು ತಿರುಚಲಾಗಿದೆ ಎಂಬ ಆರೋಪದಲ್ಲಿ ಉದ್ಯಮಿಯನ್ನು 2024ರಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೊಚ್ಚಿ ಘಟಕದಿಂದ ಸಮನ್ಸ್ ನೀಡಲಾಗಿತ್ತು.

Tags

bribery scandalED officer
share
ವಾರ್ತಾಭಾರತಿ
ವಾರ್ತಾಭಾರತಿ
Next Story
X