Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ | ಖ್ಯಾತ ಭಾರತೀಯ ವಕೀಲ ಸುನೀಲ್...

ದುಬೈ | ಖ್ಯಾತ ಭಾರತೀಯ ವಕೀಲ ಸುನೀಲ್ ಅಂಬಾಳವೆಲಿಲ್ ಅವರಿಗೆ ‘ಯುಎಇಯಲ್ಲಿನ ಅತ್ಯುತ್ತಮ ವಕೀಲ’ ಪ್ರಶಸ್ತಿಯ ಗರಿ

ವಾರ್ತಾಭಾರತಿವಾರ್ತಾಭಾರತಿ14 Feb 2025 10:28 PM IST
share
ದುಬೈ | ಖ್ಯಾತ ಭಾರತೀಯ ವಕೀಲ ಸುನೀಲ್ ಅಂಬಾಳವೆಲಿಲ್ ಅವರಿಗೆ ‘ಯುಎಇಯಲ್ಲಿನ ಅತ್ಯುತ್ತಮ ವಕೀಲ’ ಪ್ರಶಸ್ತಿಯ ಗರಿ

ದುಬೈ: ಫೆಬ್ರವರಿ 9ರಂದು ದುಬೈನ ಎತಿಸಲಾತ್ ಅಕಾಡೆಮಿಯಲ್ಲಿ ಆಯೋಜನೆಗೊಂಡಿದ್ದ ಅದ್ದೂರಿ ಬ್ಯಾರಿ ಮೇಳ ಸಮಾರಂಭದಲ್ಲಿ ಖ್ಯಾತ ಭಾರತೀಯ ವಕೀಲ ಸುನೀಲ್ ಅಂಬಾಳವೆಲಿಲ್ ಅವರಿಗೆ ಯುಎಇಯ ಬ್ಯಾರಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ವತಿಯಿಂದ ‘ಯುಎಯಲ್ಲಿನ ಅತ್ಯುತ್ತಮ ವಕೀಲ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಭಾರತೀಯ ವಲಸಿಗ ಸಮುದಾಯಕ್ಕೆ ನೀಡಿರುವ ಅತ್ಯುತ್ತಮ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಸುನೀಲ್ ಅಂಬಾಳವೆಲಿಲ್ ಮುಂಚೂಣಿ ಕಾರ್ಪೊರೇಟ್ ಮತ್ತು ವಾಣಿಜ್ಯ ವಕೀಲರಾಗಿದ್ದು, ದುಬೈನಲ್ಲಿನ ಎನ್ವೈಕೆ ಲಾ ಫರ್ಮ್ ನ ಸಂಸ್ಥಾಪಕ ಪಾಲುದಾರರಾಗಿದ್ದಾರೆ. ಎರಡು ದಶಕಗಳ ಅನುಭವ ಹೊಂದಿರುವ ಅವರು, ವಾಣಿಜ್ಯ ವ್ಯವಹಾರಗಳು, ವಾಣಿಜ್ಯ ವ್ಯವಹಾರಗಳ ಕಾನೂನು, ಕಂಪನಿಗಳ ಕಾನೂನು, ದುಬೈ ರಿಯಲ್ ಎಸ್ಟೇಟ್ ಕಾನೂನು ಹಾಗೂ ಉಭಯ ದೇಶಗಳ ನಡುವಿನ ಸ್ವಾಧೀನತೆ ಮತ್ತು ಯುಎಇ ಕಾರ್ಮಿಕ ಕಾನೂನು ಸೇರಿದಂತೆ ಯುಎಇ ಕಾನೂನುಗಳಲ್ಲಿ ಪರಿಣತರಾಗಿದ್ದಾರೆ.

ಸುನೀಲ್ ಅಂಬಾಳವೆಲಿಲ್ ದುಬೈ ಸರಕಾರದ ಕಾನೂನು ವ್ಯವಹಾರಗಳ ಇಲಾಖೆ, ದುಬೈ ಅಂತಾರಾಷ್ಟ್ರೀಯ ಹಣಕಾಸು ಕೇಂದ್ರ ನ್ಯಾಯಾಲಯಗಳಲ್ಲಿ ನೋಂದಾಯಿತ ವಕೀಲರಾಗಿದ್ದು, ಕರ್ನಾಟಕ ಬಾರ್ ಕೌನ್ಸಿಲ್ ಹಾಗೂ ಭಾರತೀಯ ಸುಪ್ರೀಂ ಕೋರ್ಟ್ ಬಾರ್ ಕೌನ್ಸಿಲ್ ಗಳೆರಡಲ್ಲೂ ಸದಸ್ಯರಾಗಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, “ಯುಎಇಯ ಬ್ಯಾರಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ‘ಯುಎಇಯಲ್ಲಿನ ಅತ್ಯುತ್ತಮ ವಕೀಲ’ ಪ್ರಶಸ್ತಿ ಸ್ವೀಕರಿಸಲು ತುಂಬಾ ಸಂತಸವಾಗುತ್ತಿದೆ. ದುಬೈನಲ್ಲಿನ ನನ್ನ ಪಯಣವು ಎರಡು ದಶಕಗಳ ಹಿಂದೆ ಪ್ರಾರಂಭಗೊಂಡಿತು. ದುಬೈ ನಗರವು ಜಾಗತಿಕ ಕಾನೂನು ಮತ್ತು ಔದ್ಯಮಿಕ ತಾಣವಾಗಿ ರೂಪಾಂತರಗೊಂಡಿರುವುದಕ್ಕೆ ಸಾಕ್ಷಿಯಾಗಿರುವುದು ಅದ್ಭುತ ಅನುಭವವಾಗಿದೆ. ಯುಎಇಯಲ್ಲಿನ ಭಾರತೀಯ ವಲಸಿಗ ಸಮುದಾಯ ಹಾಗೂ ವ್ಯವಹಾರಗಳಿಗೆ ಉತ್ಕೃಷ್ಟತೆ ಮತ್ತು ಸಮಗ್ರತೆಯೊಂದಿಗೆ ಸೇವೆ ಸಲ್ಲಿಸುವ ನನ್ನ ಬದ್ಧತೆಯನ್ನು ಈ ಗೌರವವು ಮರುದೃಢೀಕರಿಸಿದೆ” ಎಂದು ಕೃತಜ್ಞತೆ ಸಲ್ಲಿಸಿದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ಎನ್.ಎ.ಹ್ಯಾರಿಸ್, ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ವೇದಿಕೆಯ ಉಪಾಧ್ಯಕ್ಷೆ ಆರತಿ ಕೃಷ್ಣ, ಪ್ರಖ್ಯಾತ ದಾನಿ ಡಾ. ರೊನಾಲ್ಡೊ ಕೊಲಾಸೊ, ಯುಎಇಯಲ್ಲಿನ ತುಂಬೆ ಸಮೂಹದ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ತುಂಬೆ ಮೊಯಿದೀನ್, ಬಿಸಿಸಿಐ ಯು ಎ ಇ ಘಟಕದ ಅಧ್ಯಕ್ಷ ಹಿದಾಯತ್ ಅಡ್ಡೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X