Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಣ್ಣು ಕೃಷಿಯಲ್ಲಿ ಬದುಕು ಕಟ್ಟಿಕೊಂಡ ಯುವ...

ಹಣ್ಣು ಕೃಷಿಯಲ್ಲಿ ಬದುಕು ಕಟ್ಟಿಕೊಂಡ ಯುವ ರೈತ

ಕುಂಟನಹಳ್ಳಿ ಮಲ್ಲೇಶಕುಂಟನಹಳ್ಳಿ ಮಲ್ಲೇಶ8 Oct 2024 1:15 PM IST
share
ಹಣ್ಣು ಕೃಷಿಯಲ್ಲಿ ಬದುಕು ಕಟ್ಟಿಕೊಂಡ ಯುವ ರೈತ

ಮಂಡ್ಯ: ಮಳೆ ಆಶ್ರಿತ ಪ್ರದೇಶ ನಾಗಮಂಗಲ ತಾಲೂಕು ಹರಳಕೆರೆ ಗ್ರಾಮದ ಯುವ ರೈತ ಎಚ್.ಎಸ್.ಚನ್ನೇಗೌಡ, ಸಾವಯವ ಬೇಸಾಯ ಕ್ರಮದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ಬೆಳೆದು ಇತರರಿಗೆ ಮಾದರಿಯಾಗಿದ್ದಾರೆ. ವಾರ್ಷಿಕ ಸುಮಾರು 15 ಲಕ್ಷ ರೂ. ಸಂಪಾದನೆ ಮಾಡುತ್ತಿದ್ದಾರೆ.

ಎರಡು ಎಕರೆ ಜಮೀನಿನಲ್ಲಿ ಒಂದು ಕೊಳವೆಬಾವಿ ನೆರವಿನಿಂದ ಬಿಳಿಸೀಬೆ, ಕಪ್ಪು ಸೀಬೆ, ತೈವಾನ್ ಪಿಂಕ್ ಸೀಬೆಗಳ ಒಂದು ಸಾವಿರ ಗಿಡಗಳನ್ನು ಬೆಳೆಸಿದ್ದಾರೆ. ಇದರ ಜತೆಗೆ 50 ಬಿಳಿ ನೇರಳೆ, ಕಪ್ಪು ನೇರಳೆ, ಜಂಬೂನೇರಳೆ ಗಿಡಗಳು, 50 ತೈವಾನ್ ನಿಂಬೆಯ ಗಿಡಗಳು, 40 ಮೂಸಂಬಿ ಗಿಡಗಳು, 20 ಲೀಚಿ ಗಿಡಗಳು, 20 ಬಿಳಿ ಮತ್ತು ಕೆಂಪು ವಾಟರ್ ಆ್ಯಪಲ್ ಗಿಡಗಳು, 80 ಬೆಣ್ಣೆ ಹಣ್ಣಿನ ಗಿಡ, 30 ಎರಳೆಕಾಯಿ ಗಿಡಗಳು, 25 ಲಕ್ಷ್ಮಣ ಫಲ ಗಿಡಗಳು ಇವೆ.

ಇದಲ್ಲದೆ, ಚೆರ್ರಿ, ಊಟಿ ಸೇಬು, ಮರಸೇಬು, ವಾಲ್‌ನೆಟ್, ಸ್ಟಾರ್ ಫ್ರೂಟ್, ಬೆಟ್ಟದ ನೆಲ್ಲಿಕಾಯಿ, ಆಲ್‌ಸ್ಪೇಸ್ ಗಿಡ, ಡ್ರಾಗನ್ ಫ್ರೂಟ್, ಸೀತಾಫಲ, ರಾಮಫಲ ಸೇರಿದಂತೆ 25 ಹೆಚ್ಚು ಬಗೆಯ ಹಣ್ಣುಗಳ ಗಿಡಗಳಿಂದಲೂ ಚನ್ನೇಗೌಡರು ಆದಾಯ ಪಡೆಯುತ್ತಿದ್ದಾರೆ.

ನೀರಿನ ಮಿತಬಳಕೆಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ವ್ಯವಸ್ಥೆ ಮಾಡಿಕೊಂಡಿದ್ದಾರೆ. ತೋಟದಲ್ಲಿ ಕಳೆ ನಿಯಂತ್ರಿಸಲು ಮಲ್ಲಿಂಗ್ ಮಾದರಿಯ ಉಳುಮೆ ಮಾಡುತ್ತಾರೆ. ಗಿಡಗಳಿಗೆ ಉಂಟಾಗುವ ಕೀಟಬಾಧೆಯನ್ನು ತಪ್ಪಿಸಲು ಕ್ರಿಮಿನಾಶಕಗಳನ್ನು ಬಳಸದೇ ಬೇವಿನ ಎಣ್ಣೆ, ಉಳಿ ಮಜ್ಜಿಗೆ, ನಾಟಿ ಹಸುವಿನ ಗಂಜಲವನ್ನು ಸಿಂಪಡಣೆ ಮಾಡುತ್ತಾರೆ. ಎರೆಹುಳು ಮತ್ತು ಹಸಿರು ಮತ್ತು ಒಣತಾಜ್ಯಗಳಿಂದ ಗೊಬ್ಬರ ತಯಾರು ಮಾಡಿಕೊಳ್ಳುತ್ತಾರೆ. ಎಮ್ಮೆ, ಹಸು, ಮೇಕೆ, ಕುರಿಗಳನ್ನು ಸಾಕಿದ್ದು, ಇವುಗಳ ಗೊಬ್ಬರವನ್ನು ಬಳಸುತ್ತಾರೆ. ರಾಸಾಯನಿಕ ಗೊಬ್ಬರ ಬಳಸುವುದಿಲ್ಲ.

ಸಾವಯವ ಪದ್ಧತಿಯಲ್ಲಿ ಬೆಳೆದಿರುವ ಹಣ್ಣುಗಳಿಗೆ ಚನ್ನೇಗೌಡ ಸ್ಥಳೀಯವಾಗಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಆನ್‌ಲೈನ್ ಮೂಲಕವೂ ವಹಿವಾಟು ನಡೆಸುತ್ತಾರೆ. ಗ್ರಾಹಕರ ಮನೆ ಬಾಗಿಲಿಗೆ ಹಣ್ಣುಗಳನ್ನು ತಲುಪಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ತರಕಾರಿ ಬೆಳೆಯಲ್ಲಿ ನಷ್ಟ ಅನುಭವಿಸಿದ ನಂತರ ಹಣ್ಣಿನ ಬೇಸಾಯ ಮಾಡುವ ಚಿಂತನೆ ಬಂತು. ತರಬೇತಿ ಪಡೆದಿರಲಿಲ್ಲ. ಯುಟ್ಯೂಬ್‌ನಲ್ಲಿ ಬೇಸಾಯದ ವೀಡಿಯೊಗಳನ್ನು ನೋಡಿ ಹಣ್ಣಿನ ಬೇಸಾಯ ಮಾಡಲು ಶುರು ಮಾಡಿದೆ. ಈಗ ದಿನಕ್ಕೆ ನೂರಾರು ಕೆ.ಜಿ. ಸೀಬೆ ಬೆಳೆದು ಮಾರುಕಟ್ಟೆಗೆ ಒಯ್ಯುತ್ತೇನೆ.

-ಎಚ್.ಎಸ್.ಚನ್ನೇಗೌಡ, ರೈತ

Tags

farming
share
ಕುಂಟನಹಳ್ಳಿ ಮಲ್ಲೇಶ
ಕುಂಟನಹಳ್ಳಿ ಮಲ್ಲೇಶ
Next Story
X