Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. MGT ಕೇಂದ್ರ ಸಮಿತಿ| ಸೌದಿ ಅರೇಬಿಯಾದ...

MGT ಕೇಂದ್ರ ಸಮಿತಿ| ಸೌದಿ ಅರೇಬಿಯಾದ ಅಧ್ಯಕ್ಷರಾಗಿ ಅಬ್ದುಲ್ ಸತ್ತಾರ್ ಜಯಪುರ ಪುನರಾಯ್ಕೆ

ವಾರ್ತಾಭಾರತಿವಾರ್ತಾಭಾರತಿ16 Jan 2024 9:53 PM IST
share
MGT ಕೇಂದ್ರ ಸಮಿತಿ| ಸೌದಿ ಅರೇಬಿಯಾದ ಅಧ್ಯಕ್ಷರಾಗಿ ಅಬ್ದುಲ್ ಸತ್ತಾರ್ ಜಯಪುರ ಪುನರಾಯ್ಕೆ

ರಿಯಾದ್: ಮಲ್ನಾಡ್ ಗಲ್ಪ್ ಟ್ರಸ್ಟ್ (MGT) ಇದರ ಕೇಂದ್ರ ಸಮಿತಿಯ 2023ನೇ ಸಾಲಿನ ವಾರ್ಷಿಕ ಮಹಾಸಭೆಯು ರಿಯಾದ್ ನ ಲೋರಾನ್ ರೆಸಾರ್ಟ್ ನಲ್ಲಿ ಶುಕ್ರವಾರ ಮಧಾಹ್ನ ನಡೆಯಿತು.

ಹಿರಿಯ ಸದಸ್ಯರಾದ ಅಶ್ರಫ್ JVC ಅವರ ಖಿರಾಅತ್ ಮೂಲಕ ಆರಂಭಗೊಂಡ ಸಭೆಯನ್ನು ಜುಬೈಲ್ ಘಟಕದ ಅಧ್ಯಕ್ಷರಾದ ಶಮೀಮ್ ಮೂಡಿಗೆರೆ ಸ್ವಾಗತಿಸಿದರು. ನಂತರ MGT ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಇರ್ಶಾದ್ ಚಕ್ಮಕ್ಕಿ ಅವರು 2023ರ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರಗಳನ್ನು ಸಭೆಯಲ್ಲಿ ಮಂಡಿಸಿದರು. ಅವೆರಡನ್ನು ಮಂಜೂರು ಮಾಡಲಾಯಿತು.

ನಂತರ ನಾಲ್ಕು ವಲಯಗಳ ಅಧ್ಯಕ್ಷರುಗಳಾದ ನಝೀರ್ ಜಯಪುರ (ರಿಯಾದ್), ಶಮೀಮ್ ಮೂಡಿಗೆರೆ (ಜುಬೈಲ್), ಅಫ್ಝಲ್ ಸಮದ್ ಕೊಪ್ಪ (ದಮಾಮ್ - ಕೋಬಾರ್) ಹಾಗು ಇಕ್ಬಾಲ್ ಗಬ್ಗಲ್ (ಜಿದ್ದಾ) - ಇವರುಗಳು ಮಾತನಾಡಿ ತಮ್ಮ ತಮ್ಮ ವಲಯಗಳ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು.

ತದನಂತರ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ಅವರು ಕಳೆದ ಎರಡು ವರ್ಷಗಳಲ್ಲಿ ತನ್ನ ಅಧ್ಯಕ್ಷತೆಯಲ್ಲಿ MGTಯ ಯಶಸ್ಸಿಗಾಗಿ ಶ್ರಮಿಸಿದ ಹಾಗು ಸಹಕಾರ ನೀಡಿದ ಎಲ್ಲಾ ಹಿರಿಯ / ಕಿರಿಯ ಸದಸ್ಯರುಗಳಿಗೆ ಧನ್ಯವಾದಗಳನ್ನು ತಿಳಿಸಿ ಸಮಿತಿಯನ್ನು ಬರ್ಖಾಸ್ತುಗೊಳಿಸಿದರು.

ನಂತರ ಹೊಸ ಸಮಿತಿಯನ್ನು ರಚಿಸಲು ಬಶೀರ್ ಬಾಳುಪೇಟೆ ಹಾಗು ಅಬೂಬಕ್ಕರ್ ಹಂಡುಗುಳಿ ಮೂಡಿಗೆರೆ ಅವರನ್ನು ನೇಮಕ ಮಾಡಲಾಯಿತು.

ಅಬ್ದುಲ್ ಸತ್ತಾರ್ ಅವರನ್ನೇ ಮುಂದಿನ ಒಂದು ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಪುನರಾಯ್ಕೆ ಮಾಡಲಾಯಿತು. ಹಾಗೆಯೇ ಅಬೂಬಕ್ಕರ್ ಹಂಡುಗುಳಿ ಮೂಡಿಗೆರೆ ಅವರನ್ನು ಗೌರವಾಧ್ಯಕ್ಷರಾಗಿ, ನಝೀರ್ ಜಯಪುರ ಮತ್ತು ಜಲಾಲ್ ಬೇಗ್ ರನ್ನು ಕ್ರಮವಾಗಿ ಪ್ರಧಾನ ಕಾರ್ಯದರ್ಶಿ ಹಾಗು ಖಜಾಂಚಿಗಳನ್ನಾಗಿ ಆಯ್ಕೆ ಮಾಡಲಾಯಿತು.

ಹಿರಿಯ ಸದಸ್ಯರುಗಳಾದ ಶರೀಫ್ ಸ್ಯಾಂಕನ್, ಫಾರೂಕ್ ಅರಬ್ ಎನರ್ಜಿ ಹಾಗು ಬಶೀರ್ ಬಾಳುಪೇಟೆಯವರು ಸಂದರ್ಭೋಚಿತವಾಗಿ ಮಾತನಾಡಿ, ಹೊಸ ಸಮಿತಿಗೆ ಶುಭ ಹಾರೈಸಿ, ನೂತನ ಸದಸ್ಯರನ್ನು ಹುರಿದುಂಬಿಸಿದರು.

ನಂತರ ರಮಝಾನ್ ಕಲೆಕ್ಷನ್ 2024ನ್ನು ಅಧಿಕೃತವಾಗಿ ಶರೀಫ್ ಸ್ಯಾಂಕನ್ ರವರಿಂದ ಉದ್ಘಾಟಿಸಲಾಯಿತು. ಪವಿತ್ರ ರಮಝಾನ್ ನಲ್ಲಿ ಗರಿಷ್ಠ ಕಿಟ್ ಗಳನ್ನು ಸಂಗ್ರಹಿಸುವ ಯೋಜನೆಗೆ ಎಲ್ಲಾ ನಾಲ್ಕು ವಲಯಗಳೂ ಶ್ರಮಿಸಲು ಪಣತೊಡಲಾಯಿತು.

ನೂತನ ಪ್ರಧಾನ ಕಾರ್ಯದರ್ಶಿ ನಝೀರ್ ಜಯಪುರ ಅವರು ವಂದಿಸಿದರು.





































share
ವಾರ್ತಾಭಾರತಿ
ವಾರ್ತಾಭಾರತಿ
Next Story
X