Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಜ್ಮಾನ್ | ಮೊದಲ ಆವೃತ್ತಿಯ ತುಂಬೆ ಇಂಟರ್...

ಅಜ್ಮಾನ್ | ಮೊದಲ ಆವೃತ್ತಿಯ ತುಂಬೆ ಇಂಟರ್ ನ್ಯಾಷನಲ್ ರಿಸರ್ಚ್ ಗ್ರ್ಯಾಂಟ್ ಸಮಾರಂಭಕ್ಕೆ ತೆರೆ

34 ವಿಶ್ವವಿದ್ಯಾಲಯಗಳಿಂದ 192 ಅರ್ಜಿಗಳ ಸ್ವೀಕಾರ, 14 ಯೋಜನೆಗಳಿಗೆ ಅನುದಾನ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ17 April 2025 9:28 PM IST
share
ಅಜ್ಮಾನ್ | ಮೊದಲ ಆವೃತ್ತಿಯ ತುಂಬೆ ಇಂಟರ್ ನ್ಯಾಷನಲ್ ರಿಸರ್ಚ್ ಗ್ರ್ಯಾಂಟ್ ಸಮಾರಂಭಕ್ಕೆ ತೆರೆ

ಅಜ್ಮಾನ್ (ಯುಎಇ): ಎಪ್ರಿಲ್ 15ರಂದು ಅಜ್ಮಾನ್ ನ ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೊದಲ ಆವೃತ್ತಿಯ ತುಂಬೆ ಇಂಟರ್ ನ್ಯಾಷನಲ್ ರಿಸರ್ಚ್ ಗ್ರ್ಯಾಂಟ್ (ಸಂಶೋಧನಾ ಅನುದಾನ) ನ ಸಮಾರಂಭವು ಯಶಸ್ವಿಯಾಗಿ ನಡೆಯಿತು.

ಯುಎಇನಲ್ಲಿರುವ ತುಂಬೆ ಸಮೂಹವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಅಜ್ಮಾನ್ ನ ರಾಜಕುಮಾರ ಶೇಖ್ ಅಮ್ಮರ್ ಬಿನ್ ಹುಮೈದ್ ಅಲ್ ನುಐಮಿ ಅವರ ಪ್ರತಿನಿಧಿಯಾಗಿ ರೂಲರ್ಸ್ ಕೋರ್ಟ್ ನ ಅಧ್ಯಕ್ಷ ಡಾ. ಶೇಖ್ ಮಜೀದ್ ಬಿನ್ ಸಯೀದ್ ಅಲ್ ನುಐಮಿ ಆಗಮಿಸಿದ್ದರು. ವಿಜೇತರಿಗೆ ಅವರು ಸಂಶೋಧನಾ ಅನುದಾನ ಪ್ರದಾನ ಮಾಡಿದರು.

3 ದಶಲಕ್ಷ ದಿರ್ಹಂಗಳ ಆರಂಭಿಕ ನಿಧಿಯೊಂದಿಗೆ ಪ್ರಾರಂಭಗೊಂಡಿರುವ ಈ ಅಂತರ್ ರಾಷ್ಟ್ರೀಯ ಅನುದಾನವನ್ನು ಸೂಕ್ಷ್ಮ ಔಷಧ, ಔಷಧ ಸಂಶೋಧನೆ ಮತ್ತು ಕ್ಯಾನ್ಸರ್ ಪ್ರತಿರೋಧ, ಮಧುಮೇಹಕ್ಕೆ ಸಂಬಂಧಿಸಿದ ಜನಸಂಖ್ಯಾ ಆರೋಗ್ಯ, ಆರೋಗ್ಯಕರ ವೃದ್ಧಾಪ್ಯ ಹಾಗೂ ಮರು ಉತ್ಪಾದನಾ ಔಷಧ, ಕೃತಕ ಬುದ್ಧಿಮತ್ತೆ, ಆರೋಗ್ಯ ಸೇವೆ ನಿರ್ವಹಣೆ ಹಾಗೂ ಆರೋಗ್ಯ ಆರ್ಥಿಕತೆಯಲ್ಲಿನ ಮಾಹಿತಿ ಶಾಸ್ತ್ರ ಮತ್ತು ಡಿಜಿಟಲ್ ಪರಿವರ್ತನೆ ಹಾಗೂ ಆರೋಗ್ಯ ವೃತ್ತಿಪರ ಶಿಕ್ಷಣದಲ್ಲಿನ ಆವಿಷ್ಕಾರದಂತಹ ಪ್ರಮುಖ ವಲಯಗಳಲ್ಲಿನ ಮುಂಚೂಣಿ ಯೋಜನೆಗಳಿಗೆ ನೆರವಾಗುವಂತೆ ವಿನ್ಯಾಸಗೊಳಿಸಲಾಗಿದೆ.


ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ ಸ್ಥಾಪಕ ಹಾಗೂ ತುಂಬೆ ಸಮೂಹದ ಅಧ್ಯಕ್ಷ ಡಾ. ತುಂಬೆ ಮೊಯಿದೀನ್, “ನಾವು ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯನ್ನು ಸಂಶೋಧನಾ ತಾಣವನ್ನಾಗಿ ಪರಿವರ್ತಿಸಲು ಈ ಸಂಶೋಧನಾ ಅನುದಾನವನ್ನು ಜಾರಿಗೆ ತಂದಿದ್ದೇವೆ. 10 ವರ್ಷಗಳ ನಂತರ ಒಟ್ಟು ಸಂಶೋಧನಾ ಅನುದಾನದ ಮೊತ್ತ 10 ದಶಲಕ್ಷ ದಿರ್ಹಂಗಳಿಗೆ ತಲುಪ ಲಿದ್ದು, ಸಂಶೋಧನಾ ಉತ್ಕೃಷ್ಟತೆಯನ್ನು ಸಾಧಿಸುವ ದೀರ್ಘಕಾಲೀನ ಬದ್ಧತೆಯನ್ನು ಮತ್ತಷ್ಟು ಸದೃಢಗೊಳಿಸಲಿದೆ ಎಂದು ಅಭಿಪ್ರಾಯಪಟ್ಟರು.

ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ ಪ್ರಭಾರ ಕುಲಪತಿ ಪ್ರೊ. ಮಂದ ವೆಂಕಟರಮಣ ಅವರು ಮಾತನಾಡಿ, “ಈ ಅನುದಾನವು ಉತ್ತೇಜನಕಾರಿ ಚಾಲನೆ ಪಡೆದಿದ್ದು, ಸಂಶೋಧನಾ ಪ್ರಬಂಧ ಸಲ್ಲಿಕೆಯಲ್ಲಿನ ವೈವಿಧ್ಯತೆ ಮತ್ತು ಗುಣಮಟ್ಟವು ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ ಖ್ಯಾತಿಯನ್ನು ಪ್ರತಿಫಲಿಸಿದೆ. ಆರೋಗ್ಯ ಸೇವೆಯನ್ನು ಪರಿವರ್ತಿಸುವ ಹಾಗೂ ಜೀವಿತಾವಧಿಯನ್ನು ಹೆಚ್ಚಿಸುವ ಸಾಮರ್ಥ್ಯ ಹೊಂದಿರುವ ಸಂಶೋಧನೆಗಳಿಗೆ ನೆರವು ನೀಡಲು ನಾವು ಹೆಮ್ಮೆ ಪಡುತ್ತೇವೆ” ಎಂದರು.

ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ ಉಪ ಕುಲಪತಿ ಪ್ರೊ. ಸಲೀಂ ಚೌಯಿಬ್ ಅವರು ಮಾತನಾಡಿ, “ಆಯ್ಕೆಗೊಂಡಿರುವ ಸಂಶೋಧನಾ ಯೋಜನೆಗಳ ಗುಣಮಟ್ಟ ಹಾಗೂ ನೈಜತೆ ನಿಜಕ್ಕೂ ಅದ್ವಿತೀಯವಾಗಿದ್ದು, ಅವು ಜಾಗತಿಕ ಶೈಕ್ಷಣಿಕ ವಲಯದ ಆವಿಷ್ಕಾರಕ ಸ್ಫೂರ್ತಿಯನ್ನು ಮಂಡಿಸಿವೆ. ಅಭೂತಪೂರ್ವ ಸಂಶೋಧನೆ ಹಾಗೂ ಅಂತಾರಾಷ್ಟ್ರೀಯ ಸಹಯೋಗಕ್ಕೆ ತುಂಬೆ ಇಂಟರ್ ನ್ಯಾಷನಲ್ ರಿಸರ್ಚ್ ಗ್ರ್ಯಾಂಟ್ ಶಕ್ತಿಶಾಲಿ ವೇಗವರ್ಧಕವಾಗಿದೆ” ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X