Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹ್ರೈನ್: ಕನ್ನಡ ಸಂಘ ಬಹರೈನ್ ವತಿಯಿಂದ...

ಬಹ್ರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ʼಕೆಎಸ್ ಬಿ ಚಾಂಪಿಯನ್ಸ್ ಟ್ರೋಫಿ 2024ʼ ಕ್ರಿಕೆಟ್ ಪಂದ್ಯಾವಳಿ

ವಾರ್ತಾಭಾರತಿವಾರ್ತಾಭಾರತಿ29 Jan 2024 12:34 PM IST
share
ಬಹ್ರೈನ್:  ಕನ್ನಡ ಸಂಘ ಬಹರೈನ್ ವತಿಯಿಂದ ʼಕೆಎಸ್ ಬಿ ಚಾಂಪಿಯನ್ಸ್ ಟ್ರೋಫಿ 2024ʼ ಕ್ರಿಕೆಟ್ ಪಂದ್ಯಾವಳಿ

ಬಹ್ರೈನ್: ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಸಂಘ ಬಹರೈನ್ ಆಯೋಜಿಸಿದ್ದ ಬಿಎಂಎಂಐ ಶಾಪ್ಸ್ ಕೆಎಸ್ ಬಿ ಚಾಂಪಿಯನ್ಸ್ ಟ್ರೋಫಿ 2024 ಕ್ರಿಕೆಟ್ ಪಂದ್ಯಾವಳಿಯ ವಿಜೇತರಿಗೆ ಭಾರತದ ಮಾಜಿ ಅಗ್ರ ವೇಗದ ಬೌಲರ್ ಮತ್ತು ಪ್ರಸ್ತುತ ಐಸಿಸಿ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಶುಕ್ರವಾರ ಟ್ರೋಫಿಗಳನ್ನು ವಿತರಿಸಿದರು.

ಮನಾಮಾದ ಇಂಡಿಯನ್ ಕ್ಲಬ್ ನಲ್ಲಿ ನಡೆದ ಒಂದು ತಿಂಗಳ ಅವಧಿಯ ಪಂದ್ಯಾವಳಿಯಲ್ಲಿ ಪುರುಷ, ಮಹಿಳೆಯರು ಮತ್ತು 16 ವರ್ಷದೊಳಗಿನ ಬಾಲಕರ ಮೂರು ವಿಭಾಗಗಳಲ್ಲಿ 34 ತಂಡಗಳು ಭಾಗವಹಿಸಿದ್ದವು.

ಸುಮಾರು 700 ಮಂದಿ ಪಂದ್ಯಾವಳಿಯ ಫೈನಲ್ ಪಂದ್ಯಗಳನ್ನು ವೀಕ್ಷಿಸಿದರು ಮತ್ತು ಬಹುಮಾನ ಪ್ರದಾನದಲ್ಲಿ ಪಾಲ್ಗೊಂಡಿದ್ದರು.

ವಿಜೇತ ಮತ್ತು ರನ್ನರ್ ಅಪ್ ತಂಡಗಳು:

ಪುರುಷರು:

ವಿಜೇತರು - ರಿಫಾ ಇಂಡಿಯನ್ ಸ್ಟಾರ್

ರನ್ನರ್ ಅಪ್ - New World

ಮಹಿಳೆಯರು:

ವಿಜೇತರು - ಕನ್ನಡ ಸಂಘ ಬಹ್ರೈನ್

ರನ್ನರ್-ಅಪ್ - HPCA ಕ್ವೀನ್ಸ್

16 ವರ್ಷದೊಳಗಿನ ಬಾಲಕರು

ವಿಜೇತರು - HPCA;

ರನ್ನರ್-ಅಪ್ - NSP

ದ್ವೀಪದೇಶದಲ್ಲಿ ಕ್ರಿಕೆಟ್ ಅನ್ನು ಉತ್ತೇಜಿಸುವಲ್ಲಿ ಬಹ್ರೇನ್‌ನ ಪ್ರಯತ್ನಗಳನ್ನು ಶ್ಲಾಘಿಸಿದ ಜಾವಗಲ್ ಶ್ರೀನಾಥ್ ಅವರು ಪ್ರತಿ ವರ್ಷ ಕನ್ನಡ ಸಂಘದ ಆಯೋಜನೆಯಲ್ಲಿ ಪಂದ್ಯಾವಳಿ ನಡೆಸುವಂತೆ ಒತ್ತಾಯಿಸಿದ್ದಲ್ಲದೇ ಸಂಘಟಿತ ಪಂದ್ಯಾವಳಿ ಆಯೋಜಿಸಿದ ಕನ್ನಡ ಸಂಘವನ್ನು ಶ್ಲಾಘಿಸಿದರು.

ಸಮಾರಂಭದಲ್ಲಿ ಕನ್ನಡ ಸಂಘದ ಅಧ್ಯಕ್ಷ ಅಮರನಾಥ್ ರೈ, ವಿಶೇಷ ಅಭ್ಯಾಗತರಾದ ಡಾ.ಶ್ರೀಕಾಂತ್ ರೈ, ನವೀನ್ ಶೆಟ್ಟಿ, ಆಡಳಿತ ನಿರ್ದೇಶಕರು(AUMA Middle east), ಸುಭಾಸ್ ಚಂದ್ರ (CFO) ದಿಯಾರ್ ಅಲ್ ಮುಹರಕ್, ದೀಪಕ್ ನಾಯರ್ (ಸಿಇಒ, ಬಿಎಫ್‌ಸಿ), ಕ್ಯಾಸಿಯಸ್ ಪೆರಿಯೆರಾ (ಅಧ್ಯಕ್ಷರು, ದಿ ಇಂಡಿಯನ್ ಕ್ಲಬ್), ಪ್ರದೀಪ ಶೆಟ್ಟಿ (ಮಾಜಿ ಅಧ್ಯಕ್ಷರು, ಕನ್ನಡ ಸಂಘ), ನವೀನ್ ಶೆಟ್ಟಿ ರಿಫಾ (ಉದ್ಯಮಿ), ಹಾಗೂ ಕರ್ನಾಟಕದ ಮಾಜಿ ಕ್ರಿಕೆಟಿಗರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಸಂಘದ ಉಪಾಧ್ಯಕ್ಷ ಮಹೇಶ್‌ಕುಮಾರ್‌, ಕೆಎಸ್‌ಬಿ ಚಾಂಪಿಯನ್ಸ್‌ ಟ್ರೋಫಿ ಮುಖ್ಯ ಸಂಯೋಜಕ ಡಿ.ರಮೇಶ್‌ ಮತ್ತು ಕನ್ನಡ ‌ಸಂಘದ ಕ್ರೀಡಾ ಕಾರ್ಯದರ್ಶಿ ಜಾನ್ ದೀಪಕ್ ಡೆ'ಸ ಪ್ರಧಾನ‌ ನಿರ್ವಾಹಕರಾಗಿದ್ದರು.

ಇದಕ್ಕೂ ಮುನ್ನ ಮನಾಮದ ಕನ್ನಡ ಭವನದಲ್ಲಿ ನಡೆದ ಸಮಾರಂಭದಲ್ಲಿ ಶ್ರೀನಾಥ್ ಅವರನ್ನು ಸನ್ಮಾನಿಸಲಾಯಿತು. 'ಮೈಸೂರು ಎಕ್ಸ್‌ಪ್ರೆಸ್' ಎಂದೇ ಕರೆಯಲ್ಪಡುವ ಶ್ರೀನಾಥ್ ಅವರು ಆಕರ್ಷಕ ಸಂವಾದದ ಮೂಲಕ ಪ್ರೇಕ್ಷಕರ ಮನಗೆದ್ದರು.

ಪ್ರಸ್ತುತ ಕಾರ್ಯಕ್ರಮದಲ್ಲಿ ಬಹ್ರೈನ್‌ನಲ್ಲಿರುವ ಭಾರತೀಯ ರಾಯಭಾರಿ, ವಿನೋದ್ ಕೆ. ಜೇಕಬ್, ದಕ್ಷಿಣ ಕನ್ನಡ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಡಾ.ಶ್ರೀಕಾಂತ್ ರೈ ಮತ್ತು ಬಹ್ರೈನ್ ಕ್ರಿಕೆಟ್ ಫೆಡರೇಶನ್ ಸಲಹಾ ಮಂಡಳಿಯ ಅಧ್ಯಕ್ಷ ಮೊಹಮ್ಮದ್ ಮನ್ಸೂರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕನ್ನಡ ಸಂಘದ ಅಧ್ಯಕ್ಷ ಅಮರನಾಥ ರೈ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ರಾಮಪ್ರಸಾದ್ ಅಮ್ಮೆನಡ್ಕ ಕಾರ್ಯಕ್ರಮವನ್ನು ನಿರೂಪಿಸಿದರು.

Tags

BahrainKSB Champions Trophy 2024cricket tournament
share
ವಾರ್ತಾಭಾರತಿ
ವಾರ್ತಾಭಾರತಿ
Next Story
X