Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿ: SKSSF ಅಬುಧಾಬಿ ಕರ್ನಾಟಕ...

ಅಬುಧಾಬಿ: SKSSF ಅಬುಧಾಬಿ ಕರ್ನಾಟಕ ಮತ್ತು ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ (ರಿ) ಆಶ್ರಯದಲ್ಲಿ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ27 July 2024 10:36 PM IST
share
ಅಬುಧಾಬಿ: SKSSF ಅಬುಧಾಬಿ ಕರ್ನಾಟಕ ಮತ್ತು ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ (ರಿ) ಆಶ್ರಯದಲ್ಲಿ ರಕ್ತದಾನ ಶಿಬಿರ

ಅಬುಧಾಬಿ: SKSSF ಕರ್ನಾಟಕ ಅಬುಧಾಬಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಬೃಹತ್ ಮೀಲಾದ್ ಕಾನ್ಫೆರೆನ್ಸ್ ಪ್ರಚಾರಾರ್ಥ ಸಾರ್ವಜನಿಕ ರಕ್ತದಾನ ಶಿಬಿರವು ಶುಕ್ರವಾರ ಯುನೈಟೆಡ್ ಅರಬ್ ಎಮಿರೇಟ್ಸ್‌‌ನ ಅಬುಧಾಬಿ ಬ್ಲಡ್ ಬ್ಯಾಂಕ್‌ನಲ್ಲಿ ಯಶಸ್ವಿಯಾಗಿ ನಡೆಯಿತು.

ರಕ್ತದಾನ ಶಿಬಿರದಲ್ಲಿ ಒಟ್ಟು 74 ಮಂದಿ ರಕ್ತದಾನ ಮಾಡಿದರು. ಇದರಲ್ಲಿ 7 ಮಂದಿ ಸಿಂಗಲ್ ಡೋನರ್ ಪ್ಲೇಟ್ಲೆಟ್ಸ್ ದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಅಬುಧಾಬಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಉಸ್ತಾದ್ ಶಹೀರ್ ಹುದವಿ ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕದ ಸೇವೆಯನ್ನು ಶ್ಲಾಘಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬ್ಯಾರೀಸ್ ವೆಲ್ಫೇರ್ ಅಸೋಷಿಯೇಶನ್ ಅಬುಧಾಬಿ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ, ಕರ್ಮ ಭೂಮಿಯಲ್ಲಿ ಸೇವೆಗೈಯ್ಯಲು ಅವಕಾಶ ನೀಡಿದ ಆಡಳಿತಾಧಿಕಾರಿ ಶೇಕ್ ಮುಹಮ್ಮದ್ ಬಿನ್ ಝಾಯೆದ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ರಕ್ತದಾನ ಮಾಡುವುದು ಮತ್ತು ಅದಕ್ಕಾಗಿ ಪರಿಶ್ರಮಿಸುವ ಸಂಸ್ಥೆಯ ಕಾರ್ಯಕರ್ತರ ಸೇವೆಯನ್ನು ಅಭಿನಂದಿಸಿದರು.

ಅಬುಧಾಬಿ ಸುನ್ನಿ ಸೆಂಟರ್ ಅಧ್ಯಕ್ಷ ಅಸ್ಸಯ್ಯದ್ ಅಬ್ದಲ್ ರಹ್ಮಾನ್ ತಂಙಳ್ ಪ್ರಾಸ್ತವಿಕ ಮಾತುಗಳನ್ನಾಡಿ,"ತನ್ನ ಸ್ವ ಶರೀರದಿಂದ ನೀಡುವ ದಾನವಾದ ರಕ್ತದಾನವನ್ನು ಮಾಡುತ್ತಿರುವ ನಿಮ್ಮ ಈ ಉತ್ತಮವಾದ ಸೇವೆಯನ್ನು ಸೃಷ್ಟಿಕರ್ತನು ಸ್ವೀಕರಿಸಲಿ" ಎಂದು ಹೇಳಿ ಸಾಮಾಜಿಕ ಸೇವೆಗಳಿಗಾಗಿ ಕಾರ್ಯಕರ್ತರನ್ನು ಅಭಿನಂದಿಸಿದರು.

ಬ್ಲಡ್ ಹೆಲ್ಪ್‌‌ಲೈನ್ ಕರ್ನಾಟಕದ ವ್ಯವಸ್ಥಾಪಕರಾದ ಸಿರಾಜುದ್ದೀನ್ ಪರ್ಲಡ್ಕ ಹಾಗೂ ಎಸ್.ಕೆ.ಎಸ್.ಎಸ್.ಎಫ್ ಅಬುಧಾಬಿ ಕರ್ನಾಟಕದ ಗೌರವಾಧ್ಯಕ್ಷರಾದ ಹನೀಫ್ ಅರಿಯಮೂಲೆ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಒಮೇಗಾ ಗ್ರೂಪ್ ಆಫ್ ಕಂಪನೀಸ್ ಮಾಲಕ ಮುಹಮ್ಮದ್ ಹಾಜಿ , ಅಯಾನ್ ರಿಯಲ್ ಎಸ್ಟೇಟ್ MD ಅನ್ಸಾರ್ ಬೆಳ್ಳಾರೆ ಭಾಗವಹಿಸಿ ಶುಭಹಾರೈಸಿದರು.

ಶಿಬಿರದಲ್ಲಿ ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕದ ಕಾರ್ಯ ನಿರ್ವಾಹಕರಾದ ಮೆಹತಾಬ್ ಕೈಕಂಬ, ಯಾಕೂಬ್ ಫೈರೋಝ್, ಎಸ್.ಕೆ.ಎಸ್.ಎಸ್.ಎಫ್ ಅಬುಧಾಬಿ ಕರ್ನಾಟಕದ ಪ್ರಮುಖರಾದ ಶಾಫಿ ಹಾಜಿ ಪೆರುವಾಯಿ, ಅಬೂಬಕ್ಕರ್ ಸಕಲೇಶಪುರ ಮತ್ತು ದಾರುಲ್ ಹಸನಿಯ್ಯ ಅಬುಧಾಬಿ ಸಮಿತಿ ಅಧ್ಯಕ್ಷ ಶಾಕಿರ್ ಕೂರ್ನಡ್ಕ,‌ ರಕ್ತದಾನ ಶಿಬಿರದ ಉಸ್ತುವಾರಿಗಳಾದ ಹಮೀದ್ ಸವಣೂರು, ಹಂಝ ನಾಳ, ತಸ್ಲೀಮ್ , SKSSF ಕಾರ್ಯಕರ್ತರಾದ ಹಿದಾಯತ್ ರಹ್ಮಾನ್ ಮರ್ವೆಲ್, ತ್ವಾಹ ಉಪ್ಪಿನಂಗಡಿ, ಜೌಹರ್ ಕನ್ನಡಿಕಟ್ಟೆ, ಹಫೀಝ್, ಶಾಫಿ ಕಿನ್ಯಾ, ಸಫ್ವಾನ್ ಮತ್ತು ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು. ಯಹ್ಯಾ ಕೊಡ್ಲಿಪೇಟೆ ಸ್ವಾಗತಿಸಿದರು. SKSSF ಅಬುಧಾಬಿ ಕರ್ನಾಟಕ ಸಮಿತಿಯ ಉಪಾಧ್ಯಕ್ಷರಾದ ಹಾಫಿಳ್ ಝೈನ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು. ಹಸನ್ ದಾರಿಮಿ ಉಸ್ತಾದ್ ಧನ್ಯವಾದ ಅರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X