Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಾ. ತುಂಬೆ ಮೊಯ್ದಿನ್ ಅವರಿಗೆ...

ಡಾ. ತುಂಬೆ ಮೊಯ್ದಿನ್ ಅವರಿಗೆ ಪ್ರತಿಷ್ಠಿತ ‘ಗಲ್ಫ್‌ ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ11 Sept 2023 5:38 PM IST
share
ಡಾ. ತುಂಬೆ ಮೊಯ್ದಿನ್ ಅವರಿಗೆ ಪ್ರತಿಷ್ಠಿತ ‘ಗಲ್ಫ್‌ ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ದುಬೈ: ತುಂಬೆ ಗ್ರೂಪ್‌ನ ಸ್ಥಾಪಕಾಧ್ಯಕ್ಷ ಡಾ. ತುಂಬೆ ಮೊಯ್ದಿನ್ ಅವರಿಗೆ ಪ್ರತಿಷ್ಠಿತ 'ಗಲ್ಫ್‌ ಕರ್ನಾಟಕ ರತ್ನ' ಪ್ರಶಸ್ತಿಯನ್ನು ರವಿವಾರ ದುಬೈನ ಗ್ರ್ಯಾಂಡ್‌ ಹಯಾತ್ ಹೋಟೆಲ್‌ನ ಸಭಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

ದುಬೈ ರಾಜಮನೆತನದ ಸದಸ್ಯರೂ ಎಂಬಿಎಂ ಸಮೂಹದ ಅಧ್ಯಕ್ಷರೂ ಆಗಿರುವ ಶೇಖ್ ಮುಹಮ್ಮದ್ ಮಖ್ತೂಮ್ ಜುಮಾ ಅಲ್ ಮಖ್ತೂಮ್ ಅವರು ಪ್ರಶಸ್ತಿಯನ್ನು ನೀಡಿ ಡಾ ತುಂಬೆ ಮೊಯ್ದೀನ್‌ ಅವರನ್ನು ಗೌರವಿಸಿದರು. ಆರೋಗ್ಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಅಪ್ರತಿಮ ಕೊಡುಗೆಯನ್ನು ಪರಿಗಣಿಸಿ ಡಾ. ತುಂಬೆ ಮೊಯ್ದಿನ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಭಾರತದ ಹೊರಗಿನ ಅತ್ಯಂತ ದೊಡ್ಡ ಖಾಸಗಿ ವೈದ್ಯಕೀಯ ವಿಶ್ವ ವಿದ್ಯಾಲಯದ ಒಡೆತನ ಹೊಂದಿದ ಜಗತ್ತಿನ ಏಕೈಕ ಭಾರತೀಯ ಎಂಬ ಹೆಗ್ಗಳಿಕೆಗೆ ಡಾ. ತುಂಬೆ ಮೊಯ್ದಿನ್ ಪಾತ್ರರಾಗಿದ್ದಾರೆ.

ಈ ಸಮಾರಂಭದಲ್ಲಿ 20 ಇತರ ಉನ್ನತ ಉದ್ಯಮಿಗಳಿಗೂ ಅವರವರ ಕ್ಷೇತ್ರಗಳಲ್ಲಿ ಅವರು ನೀಡಿದ ಗಣನೀಯ ಕೊಡುಗೆಗಳನ್ನು ಪರಿಗಣಿಸಿ ಗೌರವಿಸಲಾಗಿದೆ.

ಗಲ್ಫ್‌ ಪ್ರಾಂತ್ಯದಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ಮೂಲದ ಉದ್ಯಮಿಗಳನ್ನು ಗುರುತಿಸಿ ಗೌರವಿಸಲು ಗಲ್ಫ್‌ ಕರ್ನಾಟಕೋತ್ಸವವನ್ನು ಆಚರಿಸಲಾಗುತ್ತದೆ.

ಡಾ. ತುಂಬೆ ಮೊಯ್ದಿನ್ ಅವರು 1997ರಲ್ಲಿ ತುಂಬೆ ಗ್ರೂಪ್‌ ಸ್ಥಾಪಿಸಿದ್ದರು. ಖಾಸಗಿ ವೈದ್ಯಕೀಯ ಕಾಲೇಜು ಆಗಿ ಆರಂಭಗೊಂಡ ಸಂಸ್ಥೆ ಇಂದು ಗಲ್ಫ್‌ ಮೆಡಿಕಲ್‌ ಯುನಿವರ್ಸಿಟಿಯಾಗಿ ಜಾಗತಿಕವಾಗಿ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ, ಸಂಶೋಧನೆ ಕ್ಷೇತ್ರಗಳಲ್ಲಿ ಅಪಾರ ಮನ್ನಣೆ ಪಡೆದುಕೊಂಡಿದೆ. ತುಂಬೆ ಗ್ರೂಪ್‌, ಏಳು ಎಮಿರೇಟ್‌ಗಳಾದ್ಯಂತ 110 ಸ್ಥಳಗಳಲ್ಲಿ 70ಕ್ಕೂ ಅಧಿಕ ಸಂಸ್ಥೆಗಳೊಂದಿಗೆ ಪಾಲುದಾರಿಕೆ ಹೊಂದಿದೆ.

ಗಲ್ಫ್‌ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಕುರಿತು ಮಾತನಾಡಿದ ಡಾ ತುಂಬೆ ಮೊಯ್ದೀನ್‌, “ಈ ಪ್ರಶಸ್ತಿ ಇನ್ನಷ್ಟು ಸಾಧನೆ ಮಾಡಲು ನನಗೆ ಸ್ಫೂರ್ತಿ ನೀಡಲಿದೆ,” ಎಂದು ಹೇಳಿದರಲ್ಲದೆ ದೇವರ ಅನುಗ್ರಹ, ಸರಕಾರ ಮತ್ತು ತಮ್ಮ ತಂಡದ ಸಹಕಾರವನ್ನು ಸ್ಮರಿಸಿದರು.




Tags

Dr. Thumbay Moideen
share
ವಾರ್ತಾಭಾರತಿ
ವಾರ್ತಾಭಾರತಿ
Next Story
X