Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ಭಾರತೀಯರಿಗಾಗಿ ಐದು ವರ್ಷಗಳ...

ದುಬೈ: ಭಾರತೀಯರಿಗಾಗಿ ಐದು ವರ್ಷಗಳ ಮಲ್ಟಿ-ಎಂಟ್ರಿ ಪ್ರವಾಸಿ ವೀಸಾ

ವಾರ್ತಾಭಾರತಿವಾರ್ತಾಭಾರತಿ27 Feb 2024 5:31 PM IST
share
ದುಬೈ: ಭಾರತೀಯರಿಗಾಗಿ ಐದು ವರ್ಷಗಳ ಮಲ್ಟಿ-ಎಂಟ್ರಿ ಪ್ರವಾಸಿ ವೀಸಾ

ಹೊಸದಿಲ್ಲಿ: ಉಭಯ ದೇಶಗಳ ನಡುವೆ ಪ್ರಯಾಣವನ್ನು ಉತ್ತೇಜಿಸಲು ಭಾರತೀಯರಿಗಾಗಿ ದುಬೈ ಐದು ವರ್ಷಗಳ ಬಹು-ಪ್ರವೇಶ (ಮಲ್ಟಿ-ಎಂಟ್ರಿ) ಪ್ರವಾಸಿ ವೀಸಾವನ್ನು ಪರಿಚಯಿಸಿದೆ ಎಂದು ದುಬೈ ಆರ್ಥಿಕ ಮತ್ತು ಪ್ರವಾಸೋದ್ಯಮ ಇಲಾಖೆ (ಡಿಇಟಿ)ಯನ್ನು ಉಲ್ಲೇಖಿಸಿ PTI ವರದಿ ಮಾಡಿದೆ.

2023ರಲ್ಲಿ 24.6 ಲಕ್ಷ ಭಾರತೀಯರು ದುಬೈಗೆ ಭೇಟಿ ನೀಡಿದ್ದು,ಕೋವಿಡ್ ಪೂರ್ವದ ಸಮಯಕ್ಕೆ ಹೋಲಿಸಿದರೆ ಇದು ಶೇ.25ರಷ್ಟು ಅಧಿಕವಾಗಿತ್ತು. ಫೆ.22ರ ಡಿಇಟಿಯ ಇತ್ತೀಚಿನ ದತ್ತಾಂಶಗಳ ಪ್ರಕಾರ ವರ್ಷದಿಂದ ವರ್ಷಕ್ಕೆ ಶೇ.34ರಷ್ಟು ಅಸಾಧಾರಣ ಬೆಳವಣಿಗೆಯೊಂದಿಗೆ ದುಬೈ ಪ್ರವಾಸೋದ್ಯಮದ ಪಾಲಿಗೆ ಭಾರತವು ನಂ.1 ಮಾರುಕಟ್ಟೆಯಾಗಿದೆ. 2022ರಲ್ಲಿ 18.4 ಲಕ್ಷ ಭಾರತೀಯರು ದುಬೈಗೆ ಭೇಟಿ ನೀಡಿದ್ದರೆ,ಈ ಸಂಖ್ಯೆ 2019ರಲ್ಲಿ 19.7 ಲಕ್ಷ ಆಗಿತ್ತು ಎಂದು ಅದು ತಿಳಿಸಿದೆ.

ಅರ್ಹ ಭಾರತೀಯ ಪ್ರಜೆಗಳು ಈಗ ಐದು ವರ್ಷಗಳ ಅವಧಿಗೆ ದುಬೈಗೆ ಮಲ್ಟಿ-ಎಂಟ್ರಿ ಸೌಲಭ್ಯವನ್ನು ಪಡೆಯಬಹುದು ಮತ್ತು ಪ್ರತಿ ಬಾರಿ ಭೇಟಿ ನೀಡಿದಾಗಲೂ 90 ದಿನಗಳ ವಾಸ್ತವ್ಯಕ್ಕೆ ಅವಕಾಶವಿರಲಿದೆ. ವರ್ಷವೊಂದರಲ್ಲಿ ಒಟ್ಟು ವಾಸ್ತವ್ಯ 180 ದಿನಗಳನ್ನು ಮೀರದಿದ್ದರೆ ಮತ್ತೆ ಐದು ವರ್ಷಗಳ ಅವಧಿಗೆ ವೀಸಾವನ್ನು ವಿಸ್ತರಿಸಲಾಗುತ್ತದೆ. ವೀಸಾಕ್ಕಾಗಿ ಅರ್ಜಿಗಳನ್ನು ಸ್ವೀಕರಿಸಿದ 2ರಿಂದ 5 ದಿನಗಳಲ್ಲಿ ಅವುಗಳನ್ನು ಸಂಸ್ಕರಿಸಲಾಗುತ್ತದೆ.

ವೀಸಾಕ್ಕೆ ಅರ್ಹರಾಗಲು ಅರ್ಜಿದಾರರು ಕೆಲವು ನಿರ್ದಿಷ್ಟ ಅಗತ್ಯಗಳನ್ನು ಪೂರೈಸಬೇಕಾಗುತ್ತದೆ. ಕಳೆದ ಆರು ತಿಂಗಳುಗಳಲ್ಲಿ 4,000 ಡಾಲರ್ ಅಥವಾ ಅದಕ್ಕೆ ಸಮನಾದ ವಿದೇಶಿ ಕರೆನ್ಸಿಗಳ ಬ್ಯಾಂಕ್ ಬ್ಯಾಲೆನ್ಸ್ ಮತ್ತು ಯುಎಇಯಲ್ಲಿ ಮಾನ್ಯತೆ ಹೊಂದಿರುವ ಆರೋಗ್ಯ ವಿಮೆ ರಕ್ಷಣೆ ಇವುಗಳಲ್ಲಿ ಸೇರಿವೆ.

ಈ ಉಪಕ್ರಮವು ದುಬೈಗೆ ಭೇಟಿ ನೀಡಲು ಅವಕಾಶ ಒದಗಿಸುವ ಜೊತೆಗೆ ಹೆಚ್ಚಿನ ಆರ್ಥಿಕ ಸಹಯೋಗಕ್ಕೆ ವೇದಿಕೆಯನ್ನೂ ಒದಗಿಸಲಿದೆ ಎಂದು ಡಿಇಟಿಯಲ್ಲಿ ಪ್ರಾಕ್ಸಿಮಿಟಿ ಮಾರ್ಕೆಟ್ಸ್‌ನ ಪ್ರಾದೇಶಿಕ ಮುಖ್ಯಸ್ಥರಾಗಿರುವ ಬದೇರ್ ಅಲಿ ಹಬೀಬ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X