ದುಬೈ ಕನ್ನಡಿಗರ ಕೂಟದಿಂದ ಕರ್ನಾಟಕದ ಪ್ರವಾಸಿಗರಿಗೆ ನೆರವು

ದುಬೈ: ದುಬೈ ಕನ್ನಡಿಗರ ಕೂಟದ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ಅವರ ತಂಡವು ಪ್ರಸ್ತುತ ದುಬೈನಲ್ಲಿ ಸಿಲುಕಿಕೊಂಡಿದ್ದ ಬಳ್ಳಾರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಂದ ಬಂದ ಸುಮಾರು 50 ಮಂದಿ ಪ್ರವಾಸಿಗರನ್ನು ಭೇಟಿ ಮಾಡಿ, ಅವರ ವಸತಿ ವಿಸ್ತರಣೆ, ಆಹಾರ ವ್ಯವಸ್ಥೆ ಹಾಗೂ ಇತರ ಅಗತ್ಯ ನೆರವುಗಳನ್ನು ಒದಗಿಸಿದರು.
ಈ ಕಾರ್ಯದಲ್ಲಿ ಸಹಕಾರ ನೀಡಿದ ಉದ್ಯಮಿ ಮಾಧವ್ ಸಿರಾನ್ ಮತ್ತು ಬೆಂಗಳೂರಿನ ಟಿಫನಿ ಸಂಸ್ಥೆಯ ಅಶ್ರಿತ್ ಅವರಿಗೆ ವಿಶೇಷ ಧನ್ಯವಾದ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅರುಣ್ ಕುಮಾರ್, ದುಬೈ ಇನ್ನೂ ಸುರಕ್ಷಿತ ಸ್ಥಳವಾಗಿದ್ದು, ಪರಿಸ್ಥಿತಿ ಸಾಮಾನ್ಯಗೊಂಡ ನಂತರ ಎಲ್ಲಾ ಪ್ರವಾಸಿಗರು ಸುರಕ್ಷಿತವಾಗಿ ಕರ್ನಾಟಕಕ್ಕೆ ಮರಳುವಂತೆ ಕನ್ನಡಿಗರ ಕೂಟ ಹಾಗೂ ಬೆಂಬಲಿಗರು ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ಯುಎಇ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿ ಅಗತ್ಯ ಸಹಕಾರ ನೀಡುತ್ತಿದೆ ಎಂದು ಅವರು ತಿಳಿಸಿದರು.
ಪ್ರಸ್ತುತ ಯುಎಇಯಲ್ಲಿ ಪರಿಸ್ಥಿತಿ ಸ್ವಲ್ಪ ಉದ್ವಿಗ್ನವಾಗಿದ್ದರೂ, ಸರಕಾರವು ಅದನ್ನು ಕಾರ್ಯಕ್ಷಮವಾಗಿ ಮತ್ತು ಪರಿಣಾಮಕಾರಿಯಾಗಿ ನಿಭಾಯಿಸುತ್ತಿದೆ ಎಂದರು.






