Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಮೆರಿಕದ ‘ಅಕ್ಕ’ ರಜತಮಹೋತ್ಸವಕ್ಕೆ ಭರದ...

ಅಮೆರಿಕದ ‘ಅಕ್ಕ’ ರಜತಮಹೋತ್ಸವಕ್ಕೆ ಭರದ ಸಿದ್ಧತೆ; ಅತಿಥಿಗಳ ಆಗಮನ

ಕೆ.ಆರ್. ಶ್ರೀನಾಥ್, ಅಟ್ಲಾಂಟಕೆ.ಆರ್. ಶ್ರೀನಾಥ್, ಅಟ್ಲಾಂಟ4 Sept 2026 12:54 PM IST
share
ಅಮೆರಿಕದ ‘ಅಕ್ಕ’ ರಜತಮಹೋತ್ಸವಕ್ಕೆ ಭರದ ಸಿದ್ಧತೆ; ಅತಿಥಿಗಳ ಆಗಮನ

ಹ್ಯಾರಿಸ್‌ಬರ್ಗ್ : ಪೆನ್ಸಿಲ್ವೇನಿಯ ರಾಜ್ಯದ ಫಿಲಡೆಲ್ಫಿಯ ನಗರದಲ್ಲಿ ಸೆಪ್ಟೆಂಬರ್ 4 ರಿಂದ 6 ರವರೆಗೆ ಆಯೋಜಿಸಿರುವ ‘ಅಕ್ಕ’ ರಜತಮಹೋತ್ಸವದ ಅಧಿಕೃತ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಅಮೆರಿಕನ್ನಡಿಗರ ಉತ್ಸಾಹ ಹಾಗೂ ಸಡಗರದ ಆಗಮನ ಮತ್ತು ಸಿದ್ಧತೆ ಭರದಿಂದ ಸಾಗಿದೆ.

ಭಾರತದಿಂದ ಕಲಾವಿದರು, ಗಣ್ಯರು ಆಗಮಿಸುತ್ತಿದ್ದು ಅಕ್ಕ ಸ್ವಾಗತ ಸಮಿತಿಯ ಪರವಾಗಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಸಮ್ಮೇಳನದ ಸಭಾಂಗಣಕ್ಕೆ ಕರೆದೊಯ್ಯಲಾಗುತ್ತಿದೆ.

ಸಭಾಂಗಣದ ಅಲಂಕಾರ, ಭೋಜನದ ವ್ಯವಸ್ಥೆ, ನೋಂದಣಿ, ಅತಿಥಿಗಳ ವಸತಿ ಎಲ್ಲವೂ ಸಾಂಗವಾಗಿ ನಡೆಯುತ್ತಿದೆ.

ಈಗಾಗಲೇ ಭಾರತದಿಂದ ಆದಿಚುಂಚನಗಿರಿ ಮಠಾಧಿಪತಿ ಶ್ರೀ ಶ್ರೀ ನಿರ್ಮಲನಾಂದ ಸ್ವಾಮಿ, ಮೈಸೂರು ರಾಜ ವಂಶಸ್ಥರು ಮತ್ತು ಮೈಸೂರಿನ ಲೋಕಸಭಾ ಸದಸ್ಯರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕೇಂದ್ರ ಬೃಹತ್ ಕೈಗಾರಿಕಾ ಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಚಲನಚಿತ್ರ ನಟ, ನಿರ್ಮಾಪಕ ಮತ್ತು ನಿರ್ದೇಶಕ ಬಿ. ಸುರೇಶ, ಇತಿಹಾಸ ಆಸಕ್ತಿಕಾರ ಧರ್ಮೇಂದ್ರ ಕುಮಾರ್, ವಚನ ಸಾಹಿತ್ಯಕಾರ ಜಿ.ಬಿ ಪಾಟೀಲ್, ಪ್ರಸಿದ್ಧ ಪತ್ರಕರ್ತ ಮುರಳೀಧರ ಖಜಾನೆ, ಗಾಯಕ ರಾಜೇಶ್ ಕೃಷ್ಣನ್ ಮತ್ತು ನವೀನ್ ಸಜ್ಜು ಹಾಗೂ ಇನ್ನಿತರ ಗಣ್ಯರು ಸಮ್ಮೇಳನಕ್ಕೆ ಆಗಮಿಸಿದ್ದಾರೆ.

ಹಲವು ಕನ್ನಡಿಗರು ಸಮ್ಮೇಳನದಲ್ಲಿ ಭಾಗವಹಿಸಲು ನೊಂದಾಯಿಸಿಕೊಂಡು ಆಗಮಿಸುತ್ತಿದ್ದಾರೆ. ಉತ್ತಮ ಹವಾಮಾನವು ಅತಿಥಿಗಳಿಗೆ ಆಹ್ಲಾದವನ್ನು ನೀಡುತ್ತಿದೆ. ಅಧಿಕೃತವಾಗಿ ಶುಕ್ರವಾರ ಸಂಜೆ 4 ಗಂಟೆಗೆ ಸಮ್ಮೇಳನ ಪ್ರಾರಂಭವಾಗಲಿದ್ದು, ಶನಿವಾರ ಬೆಳಿಗ್ಗೆ 7.30ಕ್ಕೆ ಅಮೆರಿಕದ ವಿವಿಧ ಕನ್ನಡ ಕೂಟಗಳು ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ವೀರಗಾಸೆ, ಡೊಳ್ಳುಗಳೊಂದಿಗೆ ಕನ್ನಡಿಗರು ಕರ್ನಾಟಕದ ಸಾಂಪ್ರಾದಾಯಿಕ ಉಡುಪು ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಮೆರಿಕದಲ್ಲಿ ಲೇಬರ್ ಡೇ ರಜೆಯ ವಾರಾಂತ್ಯವಾಗಿದ್ದು, ವಿವಿಧ ನಗರಗಳಿಂದ ಕನ್ನಡಿಗರು ಸಂತೋಷ, ಸಂಭ್ರಮದಿಂದ ಮೂರು ದಿನಗಳ ಅಕ್ಕ ಸಮ್ಮೇಳನವನ್ನು ಆಚರಿಸಲು ಸಿದ್ಧರಾಗುತ್ತಿದ್ದಾರೆ.

Tags

AmericaAKKASilver Jubilee
share
ಕೆ.ಆರ್. ಶ್ರೀನಾಥ್, ಅಟ್ಲಾಂಟ
ಕೆ.ಆರ್. ಶ್ರೀನಾಥ್, ಅಟ್ಲಾಂಟ
Next Story
X