Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮುಂದಿನ ಅಧಿವೇಶನದಲ್ಲಿ ಎನ್ನಾರೈಗಳ...

ಮುಂದಿನ ಅಧಿವೇಶನದಲ್ಲಿ ಎನ್ನಾರೈಗಳ ಸಮಸ್ಯೆ ಚರ್ಚಿಸಲು ಸಮಯ ನಿಗದಿ : ಸ್ಪೀಕರ್ ಯು ಟಿ ಖಾದರ್

► ಹೊರ ರಾಜ್ಯಗಳಲ್ಲಿ, ಹೊರ ದೇಶಗಳಲ್ಲಿ ತುಳುವರು ಕನ್ನಡವನ್ನು ಕಟ್ಟಿದ್ದಾರೆ : ಎಸ್ ಜಿ ಸಿದ್ದರಾಮಯ್ಯ ► ದಮ್ಮಾಮ್‌ನಲ್ಲಿ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ9 Feb 2024 12:14 AM IST
share
ಮುಂದಿನ ಅಧಿವೇಶನದಲ್ಲಿ ಎನ್ನಾರೈಗಳ ಸಮಸ್ಯೆ ಚರ್ಚಿಸಲು ಸಮಯ ನಿಗದಿ : ಸ್ಪೀಕರ್ ಯು ಟಿ ಖಾದರ್

ಸೌದಿ ಅರೇಬಿಯಾ, ಫೆ.8: ಅನಿವಾಸಿ ಕನ್ನಡಿಗರು ಎದುರಿಸುವ ನಾನಾ ಸಮಸ್ಯೆಗಳ ಬಗ್ಗೆ ಚರ್ಚಿಸಲು ರಾಜ್ಯ ವಿಧಾನ ಸಭೆಯ ಮುಂದಿನ ಅಧಿವೇಶನದಲ್ಲಿ ಅವಕಾಶ ಕಲ್ಪಿಸಲಾಗುವುದು. ಅದಕ್ಕಾಗಿ ಅನಿವಾಸಿಗರಿಗಾಗಿ ಒಂದು ದಿನವನ್ನು ‘ಎನ್ನಾರೈ ದಿನ’ ಎಂದು ಘೋಷಿಸಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಕನ್ನಡ ಸಂಸ್ಕೃತಿಯ ವೈಭವವನ್ನು ಹರಡುವ ಮತ್ತು ಅನಿವಾಸಿ ಕನ್ನಡಿಗರನ್ನು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯೆಡೆಗೆ ಕರೆದೊಯ್ಯುವ ಉದ್ದೇಶದಿಂದ ಹೃದಯವಾಣಿ ಪತ್ರಿಕೆ ಮತ್ತು ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿಯ ಜಂಟಿ ಆಶ್ರಯದಲ್ಲಿ ಸೌದಿ ಅರೇಬಿಯಾದ ದಮ್ಮಾಮ್‌ನ ಸಫ್ವಾದಲ್ಲಿ ಗುರುವಾರ ಆಯೋಜಿಸಿದ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ, ಸಂಸ್ಕೃತಿಯನ್ನು ಮುಂದಿನ ಯುವ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಸಮ್ಮೇಳನದ ಆಯೋಜಕರು ಇಲ್ಲಿ ಮಾಡಿರುವುದು ಶ್ಲಾಘನೀಯ. ಇದಕ್ಕೆ ಈ ನೆಲದ ಮಣ್ಣಿನಲ್ಲಿ ಅವಕಾಶ ಮಾಡಿಕೊಟ್ಟ ಸೌದಿ ಅರೇಬಿಯಾದ ರಾಜ ಮತ್ತು ರಾಜ ಮನೆತನಕ್ಕೆ ಕನ್ನಡಿಗರು ಅಭಾರಿಯಾಗಬೇಕಿದೆ ಎಂದು ಖಾದರ್ ಹೇಳಿದರು.

ಇಂದು ನಮಗಿಲ್ಲಿ ಐತಿಹಾಸಿಕ ದಿನವಾಗಿದೆ. ಭವಿಷ್ಯದ ದಿನಗಳಲ್ಲಿ ಜನಸಾಮಾನ್ಯರು ಇದನ್ನು ನೆನಪಿನಲ್ಲಿಟ್ಟು ಕೊಳ್ಳಲಿದ್ದಾರೆ. ಭಾಷೆ ಅಂದರೆ ಜನಜೀವನ, ಜನಸಮೂಹವಾಗಿದೆ. ಕನ್ನಡಕ್ಕೆ ಭವ್ಯ ಇತಿಹಾಸ, ಪರಂಪರೆ ಇದೆ. ಈ ಅರಬ್ ನಾಡಿನಲ್ಲಿ ಕನ್ನಡದ ಕಂಪು ಹರಡುವ ಕೆಲಸ ಆಗಿದೆ. ಸೌದಿಯಲ್ಲಿ ಒಂದು ಕನ್ನಡ ನಾಡೇ ಸೃಷ್ಟಿಯಾಗಿದೆ ಎಂಬ ಭಾವ ಮೂಡುತ್ತಿವೆ. ಕನ್ನಡ ಭಾಷೆ, ಸಂಸ್ಕೃತಿ ಜಗತ್ತಿನ ವಿವಿಧ ದೇಶಗಳಲ್ಲಿ ಹರಡಿದೆ ಎಂದು ಯು.ಟಿ.ಖಾದರ್ ಹೇಳಿದರು.

ಯಾವುದೇ ಭಾಷೆಯಾಗಲಿ, ಅದು ಕೇವಲ ಭಾಷೆಗೆ ಸೀಮಿತವಲ್ಲ. ಆ ಭಾಷೆಯನ್ನಾಡುವ ಜನರ ಆಚಾರ-ವಿಚಾರ, ಸಂಸ್ಕೃತಿಯೂ ಆಗಿದೆ. ಸೌದಿ ಅರೇಬಿಯಾದ ನೆಲದಲ್ಲಿ ಅನಿವಾಸಿ ಕನ್ನಡಿಗರು ಭಾಷೆ, ಸಾಂಸ್ಕೃತಿಕ ಚಟುವಟಿಕೆಗೆ ದೊಡ್ಡ ಮಟ್ಟದ ಪೋತ್ಸಾಹವನ್ನು ನೀಡುತ್ತಿರುವುದು ಅಭಿನಂದನೀಯ ಎಂದು ಯು.ಟಿ.ಖಾದರ್ ಹೇಳಿದರು.

ಸಮ್ಮೇಳನದಿಂದ ಕನ್ನಡ, ಸಂಸ್ಕೃತಿಗೆ ಬಹಳ ದೊಡ್ಡ ಉತ್ತೇಜನ ನೀಡಿದಂತಾಗುತ್ತದೆ. ಈ ಸಮ್ಮೇಳನದ ಹಿಂದಿರುವ ರೂವಾರಿಗಳಾದ ಝಕರಿಯಾ ಜೋಕಟ್ಟೆ, ಶೇಖ್ ಕರ್ನಿರೆ, ಸತೀಶ್ ಬಜಾಲ್ ಮತ್ತಿತರರು ಅಭಿನಂದನೆಗೆ ಅರ್ಹರಾಗಿದ್ದಾರೆ ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಸಾಹಿತಿ ಪ್ರೊ.ಎಸ್‌ಜಿ ಸಿದ್ದರಾಮಯ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ಹೊರ ರಾಜ್ಯಗಳಲ್ಲಿ, ಹೊರ ದೇಶಗಳಲ್ಲಿ ತುಳುವರು ಕನ್ನಡವನ್ನು ಕಟ್ಟಿದ್ದಾರೆ : ಎಸ್ ಜಿ ಸಿದ್ದರಾಮಯ್ಯ

ಕನ್ನಡ ಇವತ್ತು ವಿಶ್ವ ಕನ್ನಡವಾಗಿದೆ. ಹೊರದೇಶಗಳಿಗೆ ಕನ್ನಡ ತೆಗೆದು ಕೊಂಡು ಹೋದವರು ತುಳುವರು. ಹೊರ ರಾಜ್ಯ ಗಳಲ್ಲಿ, ಹೊರ ದೇಶಗಳಲ್ಲಿ ಕನ್ನಡ ಕಟ್ಟಿದವರು ತುಳುವರು. ತುಳು ಕನ್ನಡದ ಸೋದರ ಭಾಷೆ. ತುಳುವರ ಎಲ್ಲಿ ಹೋದರೂ ಮೊದಲು ಕನ್ನಡ ಸಂಘಟನೆ ಕಟ್ಟುತ್ತಾರೆ ಎಂದು ಸಾಹಿತಿ ಪ್ರೊ.ಎಸ್‌ಜಿ ಸಿದ್ದರಾಮಯ್ಯ ಹೇಳಿದರು.

ತಮಿಳುನಾಡಿನಲ್ಲಿ ಯಾವ ಸಿಲೆಬಸ್ ಆಗಿದ್ರೂ ಹತ್ತನೇ ತರಗತಿಯವರೆಗೆ ಪ್ರಥಮ ಭಾಷೆಯಾಗಿ ತಮಿಳು ಭಾಷೆ ಕಲಿಯಬೇಕು. ಬೇರೆ ಯಾವುದೇ ದ್ರಾವಿಡ ಭಾಷೆ ಆ ರೀತಿ ನಿಯಮ ಮಾಡಿಲ್ಲ. ಬೆಂಗಳೂರಿನಲ್ಲಿ ಕೇವಲ 20% ಮಕ್ಕಳು ಕನ್ನಡ ಕಲಿಯುತ್ತಿದ್ದಾರೆ. ಕನ್ನಡ ಮಾತಾಡುವವರು ಬಗ್ಗೆ ಕೀಳರಿಮೆ ಇದೆ. ಇಂತಹ ಸಂದರ್ಭದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈಗ ಮೊದಲ ಬಾರಿ ಸೌದಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೀತಿದೆ. ಇದರ ಹಿಂದೆ ಸತೀಶ್ ಅವರು ಬಹಳಷ್ಟು ಕೆಲಸ ಮಾಡಿದ್ದಾರೆ. ಏನಾದರೂ ಆಗು ಮೊದಲು ಕನ್ನಡವಾಗು ಎಂಬುದನ್ನು ನಾವು ತಿಳಿಯಬೇಕು ಎಂದು ಅವರು ಹೇಳಿದರು.

ಪೌರಾಡಳಿತ ಮತ್ತು ಹಚ್ ಖಾತೆ ಸಚಿವ ರಹೀಂ ಖಾನ್, ಅನಿವಾಸಿ ಕನ್ನಡಿಗರ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ, ಶಾಸಕರಾದ ಅಶೋಕ್ ಕುಮಾರ್ ರೈ, ರಾಜೀವ್ ಗಾಂಧಿ ಆರೋಗ್ಯ ವಿವಿ ಸಿಂಡಿಕೇಟ್ ಸದಸ್ಯ ಡಾ. ಯು.ಟಿ. ಇಫ್ತಿಕಾರ್ ಅಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಉದ್ಯಮಿಗಳಾದ ಝಕರಿಯಾ ಜೋಕಟ್ಟೆ, ಎಕ್ಸ್‌ಪರ್ಟೈಸ್ ಶೇಖ್ ಕರ್ನಿರೆ, ಮುಹಮ್ಮದ್ ಅಶ್ರಫ್ ಕರ್ನಿರೆ, ಇಬ್ರಾಹೀಂ ಹುಸೇನ್ ಪಡುಬಿದ್ರೆ, ಯೂನುಸ್ ಕಾಝಿಯಾ, ಯೋಗೀಶ್ ಡಿ. ಪೂಜಾರಿ, ಅಬ್ದುಲ್ ನಿಶಾನ್, ವೈಟ್‌ಸ್ಟೋನ್ ಮುಹಮ್ಮದ್ ಶರೀಫ್ ಬೋಳಾರ, ಸುದೇಶ್ ಹೆಗ್ಡೆ, ರಾಜ್‌ ಕುಮಾರ್ ಬಹರೈನ್, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ರಫೀಕ್ ಸೂರಿಂಜೆ ಮತ್ತಿತರರು ಪಾಲ್ಗೊಂಡಿದ್ದರು.

ಸ್ವಾಗತ ಸಮಿತಿಯ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್ ಸ್ವಾಗತಿಸಿದರು. ಸಮ್ಮೇಳನ ಸಮಿತಿಯ ಸ್ಥಾಪಕಾಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಹಿಲ್ ಜಹೀರ್, ನಾಗರಾಜ್ ಬಜಾಲ್, ಡಾ. ಭವಾನಿ ಕಾರ್ಯಕ್ರಮ ನಿರೂಪಿಸಿದರು.














share
ವಾರ್ತಾಭಾರತಿ
ವಾರ್ತಾಭಾರತಿ
Next Story
X