Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಭೀಮಾ ಕೋರೆಗಾಂವ್ ಶೋಷಣೆ, ಅಸ್ಪೃಶ್ಯತೆ...

ಭೀಮಾ ಕೋರೆಗಾಂವ್ ಶೋಷಣೆ, ಅಸ್ಪೃಶ್ಯತೆ ವಿರುದ್ಧದ ಹೋರಾಟ : ಭೀಮ್ ರಾವ್ ವೈ.ಅಂಬೇಡ್ಕರ್

ವಾರ್ತಾಭಾರತಿವಾರ್ತಾಭಾರತಿ21 Jan 2026 12:16 AM IST
share
ಭೀಮಾ ಕೋರೆಗಾಂವ್ ಶೋಷಣೆ, ಅಸ್ಪೃಶ್ಯತೆ ವಿರುದ್ಧದ ಹೋರಾಟ : ಭೀಮ್ ರಾವ್ ವೈ.ಅಂಬೇಡ್ಕರ್

ಹಾಸನ : ಭೀಮಾ ಕೋರೆಗಾಂವ್ ಯುದ್ಧವಲ್ಲ, ಅದು ಶೋಷಣೆ, ಅಸ್ಪೃಶ್ಯತೆ ಮತ್ತು ಅನ್ಯಾಯದ ವಿರುದ್ಧ ನಡೆದ ಶಾಶ್ವತ ಆತ್ಮಗೌರವದ ಹೋರಾಟ ಎಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ, ಭಾರತೀಯ ಬೌದ್ಧ ಮಹಾ ಸಭಾ (ಮುಂಬೈ)ದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಭೀಮ್ ರಾವ್ ವೈ.ಅಂಬೇಡ್ಕರ್ ಹೇಳಿದ್ದಾರೆ.

ಹಾಸನ ನಗರದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾದ 208ನೇ ಭೀಮಾ ಕೋರೆಗಾವ್ ವಿಜಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಕೇವಲ ಯುದ್ಧದ ವಿಜಯೋತ್ಸವವಾಗಿ ನೋಡಬಾರದು. ಅದು ಶೋಷಣೆ, ಅಸ್ಪೃಶ್ಯತೆ ಮತ್ತು ಅನ್ಯಾಯದ ವಿರುದ್ಧ ನಡೆದ ಆತ್ಮಗೌರವದ ಹೋರಾಟದ ಸಂಕೇತವಾಗಿದೆ. ಗೌರವಕ್ಕಾಗಿ, ಹಕ್ಕುಗಳಿಗಾಗಿ, ಸಂವಿಧಾನದ ಅನುಷ್ಠಾನಕ್ಕಾಗಿ ನಡೆಯುತ್ತಿರುವ ಹೋರಾಟ ಇದಾಗಿದೆ. ಡಾ.ಅಂಬೇಡ್ಕರ್ ನಮಗೆ ಕೊಟ್ಟ ಮಹಾಮಂತ್ರವೇ ‘ಶಿಕ್ಷಣ ಪಡೆಯಿರಿ, ಸಂಘಟಿತರಾಗಿರಿ, ಹೋರಾಡಿರಿ’. 2020ರ ನಂತರ ಕೇಂದ್ರ ಹಾಗೂ ಕೆಲವು ರಾಜ್ಯ ಸರಕಾರಗಳ ನೀತಿಗಳಿಂದಾಗಿ ಸಂವಿಧಾನಾತ್ಮಕ ಹಕ್ಕುಗಳು ದುರ್ಬಲಗೊಳ್ಳುತ್ತಿವೆ ಎಂದರು.

ಮೀಸಲಾತಿ ನೀತಿಯ ಸರಿಯಾದ ಅನುಷ್ಠಾನವಾಗುತ್ತಿಲ್ಲ. ಸರಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಉದ್ಯೋಗಾವಕಾಶಗಳು ಕಡಿಮೆಯಾಗಿವೆ ಎಂದು ಹೇಳಿದರು.

ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈಗ ಜನರಿಗೆ ಭೀಮಾ ಕೋರೆಗಾಂವ್ ಇತಿಹಾಸ ತಿಳಿಯತೊಡಗಿದೆ. ಇದು ನಮ್ಮ ಸಮುದಾಯದ ಇತಿಹಾಸ ಮಾತ್ರವಲ್ಲ, ಸಮಾನತೆ, ನ್ಯಾಯ ಮತ್ತುಮಾನವೀಯ ಗೌರವಕ್ಕಾಗಿ ನಡೆದ ಹೋರಾಟದ ಇತಿಹಾಸ. ಈ ಸತ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ನಮ್ಮದು ಎಂದು ಹೇಳಿದರು.

ನಿವೃತ್ತ ಡಿಸಿಪಿ ಎಸ್.ಸಿದ್ದರಾಜು, ಸಂಸದ ಶ್ರೇಯಸ್ ಪಟೇಲ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ದಲಿತ ಮುಖಂಡ ಸಂದೇಶ್ ವಹಿಸಿದ್ದರು, ಪ್ರಾಸ್ತಾವಿಕ ಭಾಷಣ ದಲಿತ ಮುಖಂಡ ಅಂಬುಗ ಮಲ್ಲೇಶ್ ನೆರವೇರಿಸಿದರು. ಪತ್ರಕರ್ತ ಹೆತ್ತೂರು ನಾಗರಾಜ್ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

ನಗರದ ರೈಲು ನಿಲ್ದಾಣದಿಂದ ಡಿಸಿ ಕಚೇರಿಯವರೆಗೆ ಭೀಮಾ ಕೋರೆಗಾಂವ್ ವಿಜಯ ಸ್ತಂಭದ ಬೃಹತ್ ಮೆರವಣಿಗೆ ನಡೆಯಿತು. ಡಿಸಿ ಕಚೇರಿ ಮುಂಭಾಗದ ಡಬಲ್ ರೋಡ್ (ಪ್ರಜಾಸೌಧಹತ್ತಿರ)ದಲ್ಲಿ ಸಾರ್ವಜನಿಕ ಸಮಾವೇಶ ನಡೆಯಿತು.

ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಕಾರ್ಮಿಕ ಹಾಗೂ ಮಹಿಳಾ ಸಂಘಟನೆಗಳ ಒಗ್ಗೂಡಿಕೆ ಈ ಕಾರ್ಯಕ್ರಮದ ವಿಶೇಷವಾಗಿತ್ತು. ಕಾರ್ಯಕ್ರಮವನ್ನು ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ, ಭಾರತೀಯ ಭೌದ್ಧ ಮಹಾಸಭಾ (ರಿ.) ಹಾಗೂ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣಾ ಸಮಿತಿ, ಹಾಸನ ಸಂಯುಕ್ತವಾಗಿ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಸಮಿತಿಯ ಉಪಾಧ್ಯಕ್ಷೆ ಡಿ. ಶಿವಮ್ಮ, ಪ್ರಧಾನ ಕಾರ್ಯದರ್ಶಿ ಮಂಜು ತೇಜೂರು, ಹಣಕಾಸು ಸಮಿತಿ ಸದಸ್ಯ ಮಲ್ಲೇಶ್ ಅಂಬುಗ, ಸಮಿತಿ ಸದಸ್ಯರಾದ ಎಚ್.ಜೆ. ಉಮೇಶ್ ಹಾಚಗೋಡನಹಳ್ಳಿ, ಭಾಗ್ಯ ಕಲಿವೀರ್, ತೋಟೇಶ್ ನಿಟ್ಟೂರು, ರಾಮು ನರಸಿನಕುಪ್ಪೆ, ಕೃಷ್ಣದಾಸ್ , ರಾಜಶೇಖರ್ ಹುಲಿಕಲ್, ವೈಚಾರಿಕ ಪತ್ರಿಕೆಯ ಸಂಪಾದಕ ವೆಂಕಟೇಶ್ ಬ್ಯಾಕರವಳ್ಳಿ, ರಾಜು ಗೊರೂರು ಅನೇಕರು ಕಾರ್ಯಕ್ರಮದಲ್ಲಿ ಇದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X