Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಜೆಡಿಎಸ್ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ...

ಜೆಡಿಎಸ್ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬಲು ರೇವಣ್ಣ ನೇತೃತ್ವದಲ್ಲಿ ಶೀಘ್ರದಲ್ಲೇ ಬೃಹತ್ ಸಮಾವೇಶ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ22 July 2024 12:04 AM IST
share
ಜೆಡಿಎಸ್ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬಲು ರೇವಣ್ಣ ನೇತೃತ್ವದಲ್ಲಿ ಶೀಘ್ರದಲ್ಲೇ ಬೃಹತ್ ಸಮಾವೇಶ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಹಾಸನ: ಲೋಕಸಭೆ ಚುನಾವಣೆ ವೇಳೆ ಮತ್ತು ನಂತರ ಅದ ಬೆಳವಣಿಗೆ ಬಗ್ಗೆ ಕಾರ್ಯಕರ್ತರಲ್ಲಿ ನಿರಾಸೆ ಮೂಡಿದ್ದು, ಜಿಲ್ಲೆಯ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ನೈತಿಕ ಸ್ಥೆರ್ಯ ತುಂಬಲು ಹೆಚ್.ಡಿ. ರೇವಣ್ಣ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ನಗರದ ರಿಂಗ್ ರಸ್ತೆ ಬಳಿ ಇರುವ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕುಮಾರಣ್ಣ ಹಾಸನ ಜಿಲ್ಲೆಗೆ ಬರಬೇಕೆಂದು ಕಾರ್ಯಕರ್ತರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಲಾಪ ಮುಗಿದ ನಂತರ ಹಾಸನದಲ್ಲಿ ರೇವಣ್ಣ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡಲು ಯೋಚಿಸಿದ್ದೇನೆ. ಕಳೆದ ಲೋಕಸಭಾ ಚುನಾವಣೆ ನಂತರ ಪ್ರಥಮ ಬಾರಿಗೆ ಹಾಸನ ಜಿಲ್ಲೆಯಲ್ಲಿ ಆಗಿರುವ ಅನಾಹುತ ನೋಡಲು ಬಂದಿದ್ದೇನೆ. ಚುನಾವಣೆ ಫಲಿತಾಂಶ ನಂತರ, ಚುನಾವಣೆ ಆಸುಪಾಸಿನಲ್ಲಿ ಕೆಲವು ಅಹಿತರಕರ ಘಟನೆಗಳು ಪಕ್ಷದ ಕಾರ್ಯಕರ್ತರಲ್ಲಿ, ಮುಖಂಡರಲ್ಲಿ ನಿರಾಸೆ ಮೂಡಿಸಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದೆ ಹಾಸನ ಜಿಲ್ಲೆಯ ಕಾರ್ಯಕರ್ತರಿಗೆ ನೈತಿಕ ಸ್ಥೆರ್ಯ ತುಂಬಲು ಬರುತ್ತೇನೆ. ಹಾಸನದಲ್ಲಿ ಬೃಹತ್ ಸಮಾವೇಶ ಮಾಡುವಂತೆ ಶಾಸಕರ ಒತ್ತಾಯ ಇದೆ. ರೇವಣ್ಣ ಅವರ ನೇತೃತ್ವದಲ್ಲಿ ಶಾಸಕರುಗಳನ್ನೊಳಗೊಂಡು ನಾನು ಸೇರಿ ಪಕ್ಷ ಸಂಘಟನೆ ಮಾಡುತ್ತೇವೆ. ಈ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇವೆ. ಈಗ ರೇವಣ್ಣ ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಯಾರೂ ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ.ಇಲ್ಲಿನ ರೈತರಿಗೆ ಆರ್ಥಿಕ ಶಕ್ತಿ ತುಂಬಲು ಅದನ್ನು ಮಾಡುತ್ತಿದ್ದಾರೆ ಎಂದರು.

ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಲವಾರು ಯೋಜನೆಗಳನ್ನ ತರುವ ವ್ಯವಸ್ಥೆ ಆಗುತ್ತಿದೆ. ಕೇಂದ್ರದಲ್ಲಿ ನನಗೂ ಎರಡು ಜವಾಬ್ದಾರಿ ನೀಡಿದ್ದಾರೆ. ಆರ್ಥಿಕ ಸಮಿತಿ, ನೀತಿ ಆಯೋಗದ ಸದಸ್ಯನಾಗಿ ನೇಮಿಸಿದ್ದಾರೆ. ಇದೆಲ್ಲದರ ಜೊತೆ ನಾನು ಪ್ರಾಮಾಣಿಕವಾಗಿ ಜನರಿಗೆ ಕೆಲಸ ಮಾಡುತ್ತೇನೆ. ದೇವೇಗೌಡರ ಮೇಲಿನ ವಿಶ್ವಾಸ ಮತ್ತು ನಾನು ಮುಖ್ಯಮಂತ್ರಿ ಆಗಿ ಮಾಡಿದ ಕೆಲಸ ಗಮನಿಸಿ ಅಧಿಕಾರ ನೀಡಿದ್ದಾರೆ. ದೇವೇಗೌಡರ ನಿರೀಕ್ಷೆ ಮತ್ತು ರಾಜ್ಯದ ಜನರ ಒಳಿತಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಎ. ಮಂಜು, ಮಾಜಿ ಶಾಸಕ ಕೆ.ಎಸ್. ಲಿಂಗೇಶ್, ಲಕ್ಷ್ಮಣ್, ಮಾಧ್ಯಮ ವಕ್ತಾರ ಹೊಂಗೆರೆ ರಘು, ಸ್ವಾಮಿಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X