ಚನ್ನಪಟ್ಟಣ | ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಎದುರೇ ಯುವಕರಿಬ್ಬರ ಹೊಡೆದಾಟ

ಹಾಸನ: ಕುಡಿದ ಮತ್ತಿನಲ್ಲಿ ಯುವಕರಿಬ್ಬರು ಹಿಗ್ಗಾಮುಗ್ಗಾ ಹೊಡೆದಾಡಿಕೊಂಡ ಘಟನೆ ಹಾಸನ ನಗರದ ಚನ್ನಪಟ್ಟಣದಲ್ಲಿರುವ ಸಾರಿಗೆ ಬಸ್ ನಿಲ್ದಾಣದಲ್ಲಿ ತಡರಾತ್ರಿ ನಡೆದಿದೆ.
ಪ್ರಯಾಣಿಕರು ಹಾಗೂ ಸಾರ್ವಜನಿಕರು ನೋಡುತ್ತಿದ್ದಂತೆಯೇ ಇಬ್ಬರು ಅಪರಿಚಿತ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದು, ಅವರ ಹುಚ್ಚಾಟಕ್ಕೆ ಕೆಲಕಾಲ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ.
ಯುವಕರು ಕುಡಿದ ಮತ್ತಿನಲ್ಲಿದ್ದ ಕಾರಣ ಹೊಡೆದಾಟ ಬಿಡಿಸಲು ಚಾಲಕರು ಹಾಗೂ ನಿರ್ವಾಹಕರು ಕೂಡ ಮುಂದಾಗಲಿಲ್ಲ ಎನ್ನಲಾಗಿದೆ. ಹೊಡೆದಾಟದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಘಟನೆ ಹಾಸನದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Next Story




