Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹಾಸನ | ಕೌಟಂಬಿಕ ಕಲಹ: ಇಂಜಿನಿಯರ್...

ಹಾಸನ | ಕೌಟಂಬಿಕ ಕಲಹ: ಇಂಜಿನಿಯರ್ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ1 Jan 2025 10:56 PM IST
share
ಹಾಸನ | ಕೌಟಂಬಿಕ ಕಲಹ: ಇಂಜಿನಿಯರ್ ಆತ್ಮಹತ್ಯೆ

ಹಾಸನ: ಕುಟುಂಬದಲ್ಲಿ ನಡೆಯುತ್ತಿದ್ದ ಕಲಹ ಹಿನ್ನಲೆಯಲ್ಲಿ ಬೇಸೆತ್ತ ಇಂಜಿನಿಯರ್ ಓರ್ವರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶೆಟ್ಟಿಹಳ್ಳಿ ಬಳಿ ಮೂರು ದಿಗಳ ಹಿಂದೆ ನಡೆದು ಬುಧವಾರದಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ನನ್ನ ಮಗನಿಗೆ ಹಿಂಸೆ ನೀಡಿ ನದಿಗೆ ಎಸೆಯಲಾಗಿದೆ ಎಂದು ಮೃತರ ತಂದೆ ಮತ್ತು ಸಂಬಂಧಿಕರು ಇದೆ ವೇಳೆ ಆರೋಪಿಸಿದ್ದಾರೆ.

ನಗರದ ಇಂದಿರಾನಗರ ಬಡಾವಣೆ ನಿವಾಸಿ ಜಿ.ಜೆ. ಪ್ರಮೋದ್ (35) ಎಂಬವರೇ ಶೆಟ್ಟಿಹಳ್ಳಿ ಬಳಿಯ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಡಿ. 29 ರಂದು ಪ್ರಮೋದ್ ಮನೆಯಲ್ಲಿಯೇ ಮೊಬೈಲ್ ಫೋನ್ ಬಿಟ್ಟು ಹೊರ ಹೋಗಿದ್ದರು. ತಡ ರಾತ್ರಿಯಾದರೂ ಮನೆಗೆ ವಾಪಸು ಬಾರದ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಕರೆ ಮಾಡಿ ವಿಚಾರಿಸಿ ಹುಡುಕಾಟ ನಡೆಸಿದರೂ ಮಾಹಿತಿ ಸಿಗದ ಕಾರಣ ಕಾಣೆಯಾಗಿದ್ದ ಹುಡುಗನ ಪೋಷಕರು ಗಾಬರಿಯಿಂದ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯ ದೂರು ದಾಖಲು ಮಾಡಿದ್ದು, ಮೂರು ದಿನದ ನಂತರ ಹೇಮಾವತಿ ನದಿಯ ಸೇತುವೆ ಬಳಿ ಪ್ರಮೋದ್ ಅವರ ಟಿವಿಎಸ್ ಜ್ಯುಪಿಟರ್ (3. ಏಂ-13-ಇಅ-3791) ವಾಹನ ಕಂಡು ಬಂದಿದ್ದು, ಸ್ಥಳೀಯರು ಇದನ್ನು ನೋಡಿ ಡ್ಯಾಶ್ ಬೋರ್ಡ್ ನಲ್ಲಿದ್ದ ಪಾಸ್‌ಬುಕ್‌ಗಳ ವಿವರ ಪರಿಶೀಲಿಸಿ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಕಾಣೆಯಾದ ಪ್ರಮೋದ್ ಗಾಗಿ ಹುಡುಕಾಟಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಡಿಸೆಂಬರ್ 30 ರಿಂದಲೇ ಹುಡುಕಾಟ ನಡೆಸಿದ್ದರು. ಜನವರಿ 1 ರಂದು ಬೆಳಿಗ್ಗಿನ ಸಮಯದಲ್ಲಿ ಪ್ರಮೋದ್ ಅವರ ಮೃತದೇಹ ನದಿಯಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ವಿಷಯ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವಿಚಾರವಾಗಿ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದೇ ವೇಳೆ ಶವಗಾರದ ಬಳಿ ಬಂದ ಪ್ರಮೋದ್ ಪತ್ನಿ ನಂದಿನಿಯನ್ನು ಕಂಡ ಯುವಕನ ಸಂಬಂಧಿಕರ ಜೊತೆ ವಾಗ್ವಾದ ಉಂಟಾಗಿ ಎಳೆದಾಡುವ ವೇಳೆ ಪೊಲೀಸರು ತಡೆದು ಆಕೆಯನ್ನು ಆಟೋದಲ್ಲಿ ಸುರಕ್ಷಿತವಾಗಿ ಕಳುಹಿಸಿಕೊಟ್ಟ ಘಟನೆ ನಡೆಯಿತು. ಈ ವೇಳೆ ನನಗೆ ನನ್ನ ಗಂಡ ಪ್ರಮೋದ್ ಕಿರುಕುಳ ನೀಡುತ್ತಿದ್ದ ಎಂದು ಪತ್ನಿ ಹೇಳುತ್ತಿದ್ದುದು ಕೇಳಿ ಬಂದಿತು.

ಆತ್ಮಹತ್ಯೆ ಮಾಡಿಕೊಂಡ ಪ್ರಮೋದ್ ಅವರ ತಂದೆ ಜಗದೀಶ್ ಮಾಧ್ಯಮದೊಂದಿಗೆ ಮಾತನಾಡಿ, ನನ್ನ ಮಗ ಬಿಇ ಮಾಡಿ ಬೆಂಗಳೂರಿನಲ್ಲಿ ಇಂಜಿನಿಯರ್ ಕೆಲಸ ಮಾಡುತ್ತಿದ್ದರು. ಮಗನಿಗೆ ಮದುವೆ ಮಾಡಿ ಏಳು ವರ್ಷಗಳಾಗಿದ್ದು, ಅಂದಿನಿಂದ ನಮ್ಮ ಮನೆಗೆ ಸೊಸೆ ಬಂದಿರುವುದಿಲ್ಲ. ಆದರೂ ಕೂಡ ನನ್ನ ಮಗ ಮರ್ಯಾದಿಗೆ ಅಂಜುಕೊಂಡು ಮನೆಯಲ್ಲಿ ನಡೆಯುವ ಕಲಹದ ಬಗ್ಗೆ ಏನು ಹೇಳಲಿಲ್ಲ. ಮದುವೆಯಾದ ಎರಡನೇ ವರ್ಷಕ್ಕೆ ಮಗನಿಗೆ ಹೊಡೆದು ಖಾಲಿ ಪೇಪರ್ ಗೆ ಸಹಿ ಹಾಕಿಸಿಕೊಂಡು ಬಂದಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ಕೊಟ್ಟಾಗ ಖಾಲಿ ಪೇಪರ್ ತಂದುಕೊಡುವಂತೆ ಪೊಲೀಸರು ಹೇಳಿದರೂ ಕೂಡ ಕೊಡಲಿಲ್ಲ. ನಂತರ ತಂದುಕೊಡಲಾಯಿತು. ನಂತರ ರಾಜೀ ಮಾತುಕತೆ ನಡೆಸಿ ಹೊಂದಾಣಿಕೆಯಿಂದ ಹೋಗಲು ಬುದ್ದಿವಾದ ಹೇಳಿ ಕಳುಹಿಸಲಾಯಿತು. 8 ತಿಂಗಳ ಹಿಂದೆ ನನ್ನ ಮಗನಿಗೆ ಆತನ ಪತ್ನಿ ಕಡೆಯವರು ಥಳಿಸಿದ್ದಾರೆ ಎಂದು ಮೊಬೈಲ್ ನಲ್ಲಿ ಇದ್ದ ಪೋಟೊ ಪ್ರದರ್ಶಿಸಿ ದೂರಿದರು.

ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಇಲ್ಲವೇ ಹೊಡೆದು ನದಿಗೆ ಎಸೆದಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ನಮಗೆ ನ್ಯಾಯ ಬೇಕು ಎಂದು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X