Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ...

ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ.ಬಿ. ಶಶಿಧರ್ ನೇಮಕ

ವಾರ್ತಾಭಾರತಿವಾರ್ತಾಭಾರತಿ10 Sept 2026 3:48 PM IST
share
ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ.ಬಿ. ಶಶಿಧರ್ ನೇಮಕ

ಹಾಸನ: ಸೆ.10: ಜಿಲ್ಲಾ ಕಾಂಗ್ರೆಸ್ ಸಮಿತಿ(DCC)ಯ ನೂತನ ಅಧ್ಯಕ್ಷರಾಗಿ ಅರಸೀಕೆರೆ ಮೂಲದ ಪ್ರಮುಖ ಕಾಂಗ್ರೆಸ್ ಮುಖಂಡ ಜಿ.ಬಿ. ಶಶಿಧರ್ ನೇಮಕಗೊಂಡಿದ್ದಾರೆ.

ಅರಸೀಕೆರೆಯ ಹಿರಿಯ ರಾಜಕೀಯ ನಾಯಕ ದಿವಂಗತ ಜಿ.ಎಸ್. ಬಸವರಾಜು ಅವರ ಪುತ್ರರಾಗಿರುವ ಶಶಿಧರ್, ಹಾಸನದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಿಂದ (MCE) ಪದವಿ ಪಡೆದ ಶಿಕ್ಷಣ ತಜ್ಞ ಹಾಗೂ ಕೃಷಿ ಹಿನ್ನೆಲೆಯುಳ್ಳವರು.

ಕೇವಲ ಕುಟುಂಬದ ಹೆಸರನ್ನಷ್ಟೇ ನೆಚ್ಚಿಕೊಳ್ಳದೆ ತಳಮಟ್ಟದಲ್ಲಿ ಸ್ವಂತ ಕಾರ್ಯಕರ್ತರ ಪಡೆಯನ್ನು ಕಟ್ಟಿ ಬೆಳೆಸಿದ ಅವರು, ವಿದ್ಯಾವಂತ-ಸಂಯಮಿ ವ್ಯಕ್ತಿತ್ವದ ಮೂಲಕ ಜಿಲ್ಲಾ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

2018ರ ವಿಧಾನಸಭಾ ಕದನದಲ್ಲಿ ಅರಸೀಕೆರೆ ಕ್ಷೇತ್ರದಿಂದ ಜೆಡಿಎಸ್ ಭದ್ರಕೋಟೆಯ ವಿರುದ್ಧವೇ ಸೆಣಸಾಡಿ 50 ಸಾವಿರಕ್ಕೂ ಅಧಿಕ ಮತಗಳನ್ನು ಕಲೆಹಾಕುವ ಮೂಲಕ ಕಾಂಗ್ರೆಸ್ನ ನೆಲೆ ವಿಸ್ತರಿಸಿದ್ದರು. 2023ರಲ್ಲಿ ಪಕ್ಷದ ಟಿಕೆಟ್ ಕೈತಪ್ಪಿದರೂ ಅಸಮಾಧಾನ ಪ್ರದರ್ಶಿಸದೆ ಪಕ್ಷದ ಶಿಸ್ತಿಗೆ ಬದ್ಧರಾಗಿ ನಿಂತ ಶಶಿಧರ್, ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಗೆಲುವಿಗೆ ಹಗಲಿರುಳು ಶ್ರಮಿಸಿದ್ದರು. ಸಂಸದ ಶ್ರೇಯಸ್ ಪಟೇಲ್, ಸಚಿವ ಕೆ.ಎನ್. ರಾಜಣ್ಣ ಹಾಗೂ ಕೆಪಿಸಿಸಿ ಸಾರಥಿ ಡಿ.ಕೆ. ಶಿವಕುಮಾರ್ ಅವರ ವಿಶ್ವಾಸ ಗಳಿಸಿರುವುದರ ಜೊತೆಗೆ ಜಿಲ್ಲೆಯ ಲಿಂಗಾಯತ ಸಮುದಾಯದ ಪ್ರಾತಿನಿಧ್ಯದ ಸಮೀಕರಣವೂ ಇವರ ಈ ಮಹತ್ವದ ಆಯ್ಕೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

ನೂತನ ಜಿಲ್ಲಾಧ್ಯಕ್ಷರಿಗೆ ಈ ಹುದ್ದೆ ಕೇವಲ ಅಧಿಕಾರದ ಗದ್ದುಗೆಯಲ್ಲ, ಬದಲಾಗಿ ಕಠಿಣ ರಾಜಕೀಯ ಸವಾಲುಗಳ ಮುಳ್ಳಿನ ಹಾದಿ. ಜಿಲ್ಲೆಯ ಪ್ರತಿಯೊಂದು ತಾಲೂಕಿನ ಭಿನ್ನ ರಾಜಕೀಯ ವಾತಾವರಣ, ಹಿರಿಯ ಮುಖಂಡರ ಅಸಮಾಧಾನಗಳನ್ನು ತಣಿಸುವುದು ಮತ್ತು ಎಲ್ಲ ಬಣಗಳನ್ನೂ ಬದಿಗೊತ್ತಿ ಪಕ್ಷವನ್ನು ಒಂದೇ ವೇದಿಕೆಗೆ ತರುವುದು ಇವರ ಮೊದಲ ಆದ್ಯತೆಯಾಗಬೇಕಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕೆ ಸೀಮಿತಗೊಳಿಸದೆ, ಹಳ್ಳಿಹಳ್ಳಿಗಳಲ್ಲಿ ಮತಬ್ಯಾಂಕ್ ಆಗಿ ಪರಿವರ್ತಿಸುವ ಹೊಣೆಗಾರಿಕೆಯೂ ಇವರ ಹೆಗಲೇರಿದೆ.

ಅಂತಿಮವಾಗಿ, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳೇ ಶಶಿಧರ್ ಅವರ ನಾಯಕತ್ವಕ್ಕೆ ಅಸಲಿ ಅಗ್ನಿಪರೀಕ್ಷೆ. ಲೋಕಸಭಾ ಚುನಾವಣೆಯಲ್ಲಿ ದೊರೆತ ಐತಿಹಾಸಿಕ ಜಯದ ಹುಮ್ಮಸ್ಸನ್ನು ಕಾರ್ಯಕರ್ತರಲ್ಲಿ ಕೊನೆವರೆಗೂ ಕಾಪಾಡಿಕೊಂಡು, ಬೂತ್ ಮಟ್ಟದಲ್ಲಿ ವಿಜಯಶಾಲೀ ಕಾಂಗ್ರೆಸ್ ಸಂಘಟನೆಯನ್ನು ಕಟ್ಟುವುದು ಇವರ ಮುಂದಿರುವ ಬಹುಮುಖ್ಯ ಸವಾಲು. ಒಬ್ಬ ಕ್ಷೇತ್ರದ ನಾಯಕನ ಗಡಿ ದಾಟಿ ಇಡೀ ಜಿಲ್ಲೆಯ ಸಾರಥ್ಯವನ್ನು ಹೇಗೆ ನಿಭಾಯಿಸಲಿದ್ದಾರೆ ಎಂಬುದರ ಮೇಲೆ ಹಾಸನ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ನಿಂತಿದೆ.

Tags

G.B. ShashidharHassan District Congress President
share
ವಾರ್ತಾಭಾರತಿ
ವಾರ್ತಾಭಾರತಿ
Next Story
X