Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹಾಸನ | ಡೆತ್ ನೋಟ್ ಬರೆದಿಟ್ಟು...

ಹಾಸನ | ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ26 Aug 2026 2:55 PM IST
share
ಹಾಸನ | ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಸಕಲೇಶಪುರ ತಾಲೂಕಿನ ನಾಡಹಳ್ಳಿ ಗ್ರಾಮದ ಮದನ್ ಎಂದು ಗುರುತಿಸಲಾಗಿದೆ. ಹಾಸನದಲ್ಲಿ ದ್ವಿತೀಯ ವರ್ಷದ ಪ್ಯಾರಾಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಮದನ್, ಗುಡ್ಡೇನಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ವಾಸವಾಗಿದ್ದರು.

ಮದನ್ ರಿಗೆ ಹಾಸ್ಟೆಲ್ ನ ಹೊರಗೆ ಪರಿಚಯವಾಗಿದ್ದ ಪವನ್, ಪ್ರೀತಂ ಹಾಗೂ ಇಬ್ಬರು ಅಪ್ರಾಪ್ತ ವಯಸ್ಸಿನವರು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವಿಚಾರವನ್ನು ಮದನ್ ತನ್ನ ತಾಯಿ ಶೋಭಾ ಅವರ ಗಮನಕ್ಕೆ ತಂದಿದ್ದರು. ಬಳಿಕ ತಾಯಿಯ ಸಲಹೆಯಂತೆ ಆ ನಾಲ್ವರ ಜೊತೆಗಿನ ಸಂಪರ್ಕವನ್ನು ಕಡಿತಗೊಳಿಸಿದ್ದರು ಎನ್ನಲಾಗಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮದನ್ ಮೇಲೆ ನಾಲ್ವರು ಹಲ್ಲೆ ನಡೆಸಿ, ಅವರ ಮೊಬೈಲ್ ಫೋನ್ ಗೂ ಹಾನಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದಿದ್ದ ಮದನ್ ಕೆಲಕಾಲ ಹಾಸ್ಟೆಲ್ ತೊರೆದು ಮನೆಗೆ ಮರಳಿದ್ದರು. ಸುಮಾರು ಮೂರು ತಿಂಗಳ ಬಳಿಕ ಮತ್ತೆ ಹಾಸ್ಟೆಲ್ ಗೆ ತೆರಳಿದ್ದರು ಎನ್ನಲಾಗಿದೆ.

ರವಿವಾರ ರಾತ್ರಿ ಹಾಸ್ಟೆಲ್ ಎದುರಿನ ಬೇಕರಿಯೊಂದರಲ್ಲಿ ಮದನ್ ಟೀ ಕುಡಿಯುತ್ತಿದ್ದ ವೇಳೆ ಆರೋಪಿತ ನಾಲ್ವರು ಅಲ್ಲಿಗೆ ಬಂದು ಹಣ ನೀಡುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವೇಳೆ ಮದನ್ ತಮ್ಮ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ತಾಯಿ ಹಣ ಕಳುಹಿಸಿದ್ದರು ಎನ್ನಲಾಗಿದೆ. ಬಳಿಕ ಪವನ್ ಎಂಬಾತ ಶೋಭಾರಿಗೆ ಕರೆ ಮಾಡಿ ಬೆದರಿಕೆಯ ರೀತಿಯಲ್ಲಿ ಮಾತನಾಡಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಇದರಿಂದ ಆತಂಕಗೊಂಡ ಶೋಭಾ ಮಧ್ಯರಾತ್ರಿಯೇ ನಾಡಹಳ್ಳಿಯಿಂದ ಹಾಸನಕ್ಕೆ ಬಂದು ಹಾಸ್ಟೆಲ್ನಲ್ಲಿ ಮದನ್ ಗಾಗಿ ಹುಡುಕಾಡಿದರೂ ಅವರು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಹಾಸ್ಟೆಲ್ ಮೇಲ್ಛಾವಣಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಆತ್ಮಹತ್ಯೆಗೂ ಮುನ್ನ ಮದನ್ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಪವನ್, ಪ್ರೀತಂ ಹಾಗೂ ಇಬ್ಬರು ಅಪ್ರಾಪ್ತ ವಯಸ್ಕರು ಕಾರಣ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ತಮ್ಮ ಮೇಲೆ ಹಲ್ಲೆ ನಡೆಸಿ ಮೊಬೈಲ್ ಒಡೆದಿರುವ ಬಗ್ಗೆಯೂ ಉಲ್ಲೇಖಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags

HassanParamedical StudentSuicideDeath Note
share
ವಾರ್ತಾಭಾರತಿ
ವಾರ್ತಾಭಾರತಿ
Next Story
X