Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಹಲ್ಮಿಡಿ ಶಾಸನದಿಂದ ಬೂಕರ್‌ವರೆಗೆ ಹಾಸನದ...

ಹಲ್ಮಿಡಿ ಶಾಸನದಿಂದ ಬೂಕರ್‌ವರೆಗೆ ಹಾಸನದ ಕೊಡುಗೆ: ಬರಗೂರು

ಬಾನು ಮುಷ್ತಾಕ್, ದೀಪಾ ಭಾಸ್ತಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ9 Jun 2025 11:18 PM IST
share
ಹಲ್ಮಿಡಿ ಶಾಸನದಿಂದ ಬೂಕರ್‌ವರೆಗೆ ಹಾಸನದ ಕೊಡುಗೆ: ಬರಗೂರು

ಹಾಸನ : ಕನ್ನಡದ ಪ್ರಥಮ ಶಾಸನ ಹಲ್ಮಿಡಿಯಿಂದ ಇಂದು ಬೂಕರ್ ಪ್ರಶಸ್ತಿವರೆಗೂ ಕೊಡುಗೆ ನೀಡಿರುವ ವಿಶಿಷ್ಟ ಸಾಂಸ್ಕೃತಿಕ ಜಿಲ್ಲೆಯಾಗಿದೆ ಹಾಸನ. ಇಂದು ನಾನು ತುಂಬಾ ಸಂತೋಷದಿಂದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಅಭಿನಂದಿಸುತ್ತಿದ್ದೇನೆ ಎಂದು ಸಂಸ್ಕೃತಿ ಚಿಂತಕ, ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಬಾನು ಮುಷ್ತಾಕ್ ಅವರಿಗೆ ಹಮ್ಮಿಕೊಳ್ಳಲಾಗಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

1973ರಲ್ಲಿ ಬಂಡಾಯ ಸಾಹಿತ್ಯ ಕಟ್ಟಿದಾಗ ಅದೇ ಸಾಹಿತ್ಯದಲ್ಲಿ ಬಾನು ಮುಷ್ತಾಕ್ ಬೆಳೆದಿದ್ದಾರೆ. ಅದನ್ನು ಅವರು ಈಗಲೂ ಸ್ಮರಿಸುತ್ತಿದ್ದಾರೆ ಎಂದರು.

ಇಲ್ಲಿ ಇಬ್ಬರೂ ಲೇಖಕಿಯರು ಮುಖ್ಯ. ಮೂಲ ಲೇಖಕರು ಬಹುಮುಖ್ಯ. ಎದೆಯ ಹಣತೆ ಕೃತಿ ಕನ್ನಡಕ್ಕೆ ಹೊಸ ಆಯಾಮ ಒದಗಿಸಿಕೊಟ್ಟಿದ್ದು ಬಹಳ ವಿಶೇಷ. ಇದನ್ನು ಭಾಸ್ತಿ ಜಗತ್ತಿಗೆ ಪರಿಚಯ ಮಾಡಿಕೊಟ್ಟಿದ್ದಾರೆ. ಇಬ್ಬರನ್ನು ಅಭಿನಂದಿಸಲು ಉದ್ದೇಶಿಸಿದ್ದು ಜನಪರ ಮಾದರಿಯಾಗಿದೆ. ಬಾನು ಅವರು ಬದುಕಿನ ವಾಸ್ತವ ಚಿತ್ರಣವನ್ನು ಕಟ್ಟಿಕೊಟ್ಟಿದ್ದಾರೆ. ಅನುಭವ ದ್ರವ್ಯವನ್ನು ಕೊಟ್ಟಿದ್ದಾರೆ. ಅದೇ ಕನ್ನಡದ ಸೊಗಡನ್ನು ದೀಪಾ ಭಾಸ್ತಿಯವರು ಮೂಲ ಲೇಖಕಿಯ ಆಶಯ ಅರಿತು ಭಾಷಾಂತರ ಅಷ್ಟೇ ಅಲ್ಲದೇ ಭಾವಾಂತರವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದರು.

ಹಿರಿಯ ಸಾಹಿತಿ ಎಚ್.ಎಸ್. ಅನುಪಮಾ ಮಾತನಾಡಿ, ಕಳೆದ ವರ್ಷ ಜಿಲ್ಲೆಗೆ ಕವಿದಿದ್ದ ಕರಾಳ ಕತ್ತಲಿಗೆ ಬಾನು ಮುಷ್ತಾಕ್ ಅವರು ಹಚ್ಚಿದ ಎದೆಯ ಹಣತೆಯಿಂದ ಕತ್ತಲು ಕರಗಿ ಜಿಲ್ಲೆ ಪ್ರಕಾಶಿಸುತ್ತಿದೆ. ಬಾನು ಮುಷ್ತಾಕ್ ನಿರ್ವಾತದಿಂದ ಬಂದವರಲ್ಲ. ಕುಟುಂಬ, ಸಮುದಾಯ, ಒತ್ತಡ, ದುಗುಡು, ಚಳವಳಿ, ಪ್ರಕೃತಿಯಿಂದ ಬಂದವರು. ಇಂದು ಅಕ್ಷರಕ್ಕೆ ಸಿಕ್ಕ ಬಹುದೊಡ್ಡ ಗೌರವವನ್ನು ಸಂಭ್ರಮಿಸುವ ಸುವರ್ಣ ಕ್ಷಣ ನಮ್ಮದಾಗಿದೆ. ಒಳ್ಳೆಯ ಎಲ್ಲವನ್ನೂ ಸ್ವೀಕರಿಸುವ ಗುಣ ಎಲ್ಲರಲ್ಲೂ ಬೆಳೆಯಬೇಕು ಎಂಬುದನ್ನು ಉಪನಿಷತ್‌ಗಳು ಹೇಳಿವೆ. ಬೂಕರ್ ಪ್ರಶಸ್ತಿಯ ಆಶಯ ಮತ್ತು ಸಂಕೇತ ಕೂಡ ಅದೆ ಎಂದು ಹೇಳಿದರು.

ಸಂಸದ ಶ್ರೇಯಸ್ ಎಂ. ಪಟೇಲ್, ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್, ಜಿಲ್ಲಾಧಿಕಾರಿ ಸತ್ಯಭಾಮ, ಮಹಾನಗರ ಪಾಲಿಕೆಯ ಅಧ್ಯಕ್ಷ ಎಂ. ಚಂದ್ರೇಗೌಡ, ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಹಮ್ಮದ್ ಸುಜೀತಾ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ, ಮಾಜಿ ಅಧ್ಯಕ್ಷ ಎಚ್.ಬಿ. ಮದನ್ ಗೌಡ, ಮಾಜಿ ಗೌರವಾಧ್ಯಕ್ಷ ರವಿನಾಕಲಗೂಡು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್. ವೇಣುಕುಮಾರ್, ತೌಫೀಕ್ ಅಹ್ಮದ್, ನಾರಾಯಣದಾಸ್, ಧರ್ಮೇಶ್, ರಾಜು ಗೊರೂರು, ಎಂ.ಜಿ. ಪೃಥ್ವಿ, ರಮೇಶ್, ಕೆ.ಪಿ.ಆರ್.ಎಸ್. ಜಿಲ್ಲಾಧ್ಯಕ್ಷ ಎಚ್.ಆರ್. ನವೀನ್ ಕುಮಾರ್, ವಿಜಯಕುಮಾರ್, ಎಚ್.ಕೆ. ಸಂದೇಶ್ ಮತ್ತಿತರರು ಉಪಸ್ಥಿತರಿದ್ದರು.

ಬೂಕರ್ ಪ್ರಶಸ್ತಿ ವಿಜೇತರಾದ ಬಾನುಮುಷ್ತಾಕ್ ಅವರನ್ನು ಸನ್ಮಾನಿಸಲು ವಿವಿಧ ಸಂಘ ಸಂಸ್ಥೆಯ ನಾಗರಿಕರು ಮುಗಿ ಬಿದ್ದರು. ಎದೆಯ ಹಣತೆ ಪುಸ್ತಕವನ್ನು ಖರೀದಿಸಲು ಸಾಕಷ್ಟು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಕಲಾಭವನದ ಹೊರಭಾಗದಲ್ಲಿ ಪುಸ್ತಕ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಯಿತು.

ನನ್ನ ಬರಹ ನಿಮ್ಮ ಮನಸನ್ನು ಕದಡಿದ್ದರೇ ನನ್ನ ಉದ್ದೇಶ ಸಫಲವಾಯಿತು ಎಂದರ್ಥ. ಬೂಕರ್ ಪ್ರಶಸ್ತಿಯ ಶ್ರೇಯಸ್ಸು ನಿಮಗೆ ಸಿಗಬೇಕು. ನಮ್ಮ ಮನಸ್ಸುಗಳನ್ನು ಮತ್ತೆ ಗಟ್ಟಿಗೊಳಿಸಿ ಸೌಹಾರ್ದವಾಗಿ ಬಾಳುವ.

-ಬಾನು ಮುಷ್ತಾಕ್, ಬೂಕರ್ ಪ್ರಶಸ್ತಿ ವಿಜೇತೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X