Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ರೇವಣ್ಣ ಕುಟುಂಬವನ್ನು ಮುಗಿಸಲು ನಡೆದ...

ರೇವಣ್ಣ ಕುಟುಂಬವನ್ನು ಮುಗಿಸಲು ನಡೆದ ಎಲ್ಲಾ ಕುತಂತ್ರಗಳನ್ನು ರಾಜ್ಯದ ಜನರು ನೋಡಿದ್ದಾರೆ: ಎಚ್.ಡಿ. ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ24 Jan 2026 11:06 PM IST
share
ರೇವಣ್ಣ ಕುಟುಂಬವನ್ನು ಮುಗಿಸಲು ನಡೆದ ಎಲ್ಲಾ ಕುತಂತ್ರಗಳನ್ನು ರಾಜ್ಯದ ಜನರು ನೋಡಿದ್ದಾರೆ: ಎಚ್.ಡಿ. ದೇವೇಗೌಡ
"ಇಂದು ದೇಶದಲ್ಲಿ ಕಾಂಗ್ರೆಸ್ ಯಾವ ಸ್ಥಿತಿಯಲ್ಲಿದೆ ಎಂಬುದು ಜನರಿಗೆ ತಿಳಿದಿದೆ"

ಹಾಸನ: ʼಜೆಡಿಎಸ್ ಮುಗಿದಿದೆʼ ಎನ್ನುವವರಿಗೆ ಇಲ್ಲಿ ಸೇರಿರುವ ಜನಸ್ತೋಮವೇ ತಕ್ಕ ಉತ್ತರ ನೀಡಿದೆ. ಕಾಂಗ್ರೆಸ್‌ ಪಕ್ಷಕ್ಕೆ ಇದೇ ನಮ್ಮ ಉತ್ತರ. ಇದೇ ನಮ್ಮ ಸಂದೇಶ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

ನಗರದ ಬೂವನಹಳ್ಳಿ ಸಮೀಪ ನಡೆದ ಜೆಡಿಎಸ್ ಬೆಳ್ಳಿ ಹಬ್ಬದ ಸಂಭ್ರಮ ಬೃಹತ್ ಜನತಾ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ರೇವಣ್ಣ ಕುಟುಂಬವನ್ನು ಮುಗಿಸಲು ನಡೆದ ಎಲ್ಲಾ ಕುತಂತ್ರಗಳನ್ನು ರಾಜ್ಯದ ಜನರು ನೋಡಿದ್ದಾರೆ. ಎಸ್‌ಐಟಿ ತನಿಖೆ, ಬಂಧನಗಳು ಮತ್ತು ಇದೀಗ ಅದೇ ಅಧಿಕಾರಿಗಳಿಗೆ ಬಹುಮಾನ ಇವೆಲ್ಲವೂ ಆತ್ಮವಿಮರ್ಶೆಗೆ ಒಳಪಡಬೇಕು ಎಂದು ಹೇಳಿದರು.

ಒಬ್ಬ ರೈತನ ಮಗನಿಗೆ ದೇಶ ಆಳುವ ಅವಕಾಶ ಕೊಟ್ಟ ಜನರು ಜೆಡಿಎಸ್ ಜೊತೆ ಇಂದಿಗೂ ನಿಂತಿದ್ದಾರೆ. ಇಂದಿನ ಸಮಾವೇಶವೇ ನಮ್ಮ ಉತ್ತರ ಎಂದರು.

ಇಂದು ದೇಶದಲ್ಲಿ ಕಾಂಗ್ರೆಸ್ ಯಾವ ಸ್ಥಿತಿಯಲ್ಲಿದೆ ಎಂಬುದು ಜನರಿಗೆ ತಿಳಿದಿದೆ ಎಂದು ವಾಗ್ದಾಳಿ ನಡೆಸಿದ ದೇವೇಗೌಡ ಅವರು, ತಮ್ಮ ಆಡಳಿತದಲ್ಲಿ ಒಂದೇ ಒಂದು ಕಪ್ಪು ಚುಕ್ಕಿಯಿಲ್ಲ ಎಂದು ಹೇಳಿದರು. ಮಹಿಳಾ ಮೀಸಲಾತಿ, ನೀರಾವರಿ ಯೋಜನೆಗಳು ತಮ್ಮ ಆಡಳಿತದ ಹೆಮ್ಮೆಯ ನಿರ್ಧಾರಗಳು ಎಂದರು.

ಜೆಡಿಎಸ್ ಎಲ್ಲಿದೆ ಎಂದವರಿಗೆ ಇದೇ ಉತ್ತರ: ಎಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಎಲ್ಲಿದೆ ಎಂದು ಕೇಳುವವರಿಗೆ ಇಂದಿನ ಜನಸ್ತೋಮವೇ ಉತ್ತರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಕಾಂಗ್ರೆಸ್ ಸರ್ಕಾರವನ್ನು ‌ʼಭ್ರಷ್ಟ ಮತ್ತು ಲೂಟಿಕೋರ ಸರ್ಕಾರʼ ಎಂದು ಟೀಕಿಸಿದರು.

ನಮ್ಮ ತಪ್ಪಿನಿಂದ ಗೆದ್ದ ಸಂಸದರೊಬ್ಬರು ನಮ್ಮ ಬಗ್ಗೆ ಟೀಕಿಸಿ ಮಾತನಾಡುತ್ತಾರೆ ಎಂದು ಪರೋಕ್ಷವಾಗಿ ಸಂಸದ ಶ್ರೇಯಸ್ ಪಟೇಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ, ಈ ಹಿಂದೆ ದೇವೇಗೌಡರನ್ನು ಪುಟ್ಟಸ್ವಾಮಿಗೌಡ ಹೊಳೆನರಸೀಪುರದಲ್ಲಿ ಸೋಲಿಸಿದ್ದನ್ನು ನೆನಪಿಸಿಕೊಂಡು ಅದೊಂದು ಕಾವೇರಿ ತೀರದ ಜನರಿಗೆ ಆದ ಸೋಲು ಎಂದು ಬಣ್ಣಿಸಿದರು.

ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ಜೆಡಿಎಸ್ ಕಾರ್ಯಕರ್ತರನ್ನು ಭಯಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ಸಂಘಟನೆ ನಮ್ಮ ಬಲ. ಹಳ್ಳಿಹಳ್ಳಿಗಳಲ್ಲೂ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲಾಗುತ್ತದೆ” ಎಂದರು.

ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಸಭೆಗಳು ನಡೆಯಲಿವೆ ಎಂದು ಅವರು ಘೋಷಿಸಿದರು.

ವಿಧಾನಸಭಾ ಸದಸ್ಯ ಸೂರಜ್ ರೇವಣ್ಣ ಮಾತನಾಡಿ, ಯುವಕರು ಜೆಡಿಎಸ್ ಕಡೆಗೆ ಮತ್ತೆ ನೋಡುತ್ತಿದ್ದಾರೆ. ಅಭಿವೃದ್ಧಿ ರಾಜಕಾರಣವೇ ನಮ್ಮ ಗುರಿ ಎಂದು ಹೇಳಿದರು.

ತಪ್ಪು ಮಾಡಿದವರು ಯಾರೇ ಆಗಿರಲಿ ಕಾನೂನಿನ ಮುಂದೆ ಉತ್ತರಿಸಬೇಕು, ಆದರೆ ರಾಜಕೀಯ ದ್ವೇಷಕ್ಕಾಗಿ ಕುಟುಂಬವನ್ನೇ ಗುರಿಯಾಗಿಸುವುದು ತಪ್ಪು ಎಂದರು.

ಸಮಾವೇಶದಲ್ಲಿ ಅರಕಲಗೂಡು ಶಾಸಕ ಎ.ಮಂಜು, ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಹಲವು ನಾಯಕರು ಮಾತನಾಡಿದರು,

ಈ ಸಂದರ್ಭದಲ್ಲಿ ಶಾಸಕರಾದ ಶಾರದಾ ಪುರಿ ನಾಯಕ್, ಕರಿಯಮ್ಮ ಹರೀಶ್ ಗೌಡ, ಮಾಜಿ ಸಂಸದ ಮಲ್ಲೇಶ್ ಬಾಬು, ಎಚ್.ಟಿ.ಮಂಜು, ಮಾಜಿ ಸಚಿವ ರಾದ ಡಿ.ಸಿ.ತಮ್ಮಣ್ಣ, ಸಾರಾ ಮಹೇಶ್, ಕೃಷ್ಣಪ್ಪ, ವೈ. ಎಸ್.ವಿ.ದತ್ತ, ಬೋಜೇಗೌಡ, ಸುರೇಶ್ ಗೌಡ, ರಮೇಶ್ ಗೌಡ, ಎಚ್.ಕೆ.ಕುಮಾರಸ್ವಾಮಿ, ಪುಟ್ಟರಾಜು, ಶಿವಶಂಕರ್ ಸೇರಿದಂತೆ ಹಲವಾರು ನಾಯಕರು ಹಾಗೂ ಕಾರ್ಯಕರ್ತರು ಇದ್ದರು.

ಸಹಸ್ರಾರು ಜನರು ಭಾಗಿ

ಜೆಡಿಎಸ್ ಜನತಾ ಸಮಾವೇಶಕ್ಕೆ ಸಾರಿಗೆ ಬಸ್‌ಗಳು, ಖಾಸಗಿ ವಾಹನಗಳ ಮೂಲಕ ಕಾರ್ಯಕರ್ತರು ಆಗಮಿಸಿದ್ದರು. ನೂಕುನುಗ್ಗಲು ನಿಯಂತ್ರಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Tags

HassanJDSJanata Samavesha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X