Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಹಾಸನ
  4. ಕರಾವಳಿಯಲ್ಲಿ ಕೋಮು ಹಿಂಸಾಚಾರ | ಸೌಹಾರ್ದ...

ಕರಾವಳಿಯಲ್ಲಿ ಕೋಮು ಹಿಂಸಾಚಾರ | ಸೌಹಾರ್ದ ಕರ್ನಾಟಕದಿಂದ ಸಮಾಲೋಚನಾ ಸಭೆ

ವಾರ್ತಾಭಾರತಿವಾರ್ತಾಭಾರತಿ21 Jun 2025 12:06 AM IST
share
ಕರಾವಳಿಯಲ್ಲಿ ಕೋಮು ಹಿಂಸಾಚಾರ | ಸೌಹಾರ್ದ ಕರ್ನಾಟಕದಿಂದ ಸಮಾಲೋಚನಾ ಸಭೆ

ಹಾಸನ : ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಇತ್ತೀಚೆಗೆ ವ್ಯಾಪಕವಾದ ಕೋಮು ಹಿಂಸಾಚಾರಗಳ ಬಗ್ಗೆ ಆತಂಕ ವ್ಯಕ್ತಪಡಿಸಿ, ಸೌಹಾರ್ದ ಕರ್ನಾಟಕ ಸಂಸ್ಥೆಯ ಹಾಸನ ಜಿಲ್ಲಾ ಘಟಕದ ವತಿಯಿಂದ ನಗರದ ಆರ್.ಸಿ. ರಸ್ತೆಯ ಮಿಷನ್ ಆಸ್ಪತ್ರೆ ಎದುರಿನ ಶ್ರಮ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಸಿಪಿಐ(ಎಂ) ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ಧರ್ಮಾಧಾರಿತ ರಾಜಕೀಯ ದಾಳಿಗಳು ಹಾಗೂ ಸಂಘಟಿತ ಕೋಮು ಹಿಂಸಾಚಾರಗಳು ಕರಾವಳಿಯಲ್ಲಿ ಭಯದ ವಾತಾವರಣವನ್ನು ರೂಪಿಸುತ್ತಿವೆ ಎಂದು ಹೇಳಿದರು.

ಕರಾವಳಿಯಲ್ಲಿ ನಡೆಯುತ್ತಿರುವ ಅಶಾಂತಿಯ ವಾತಾವರಣವು ಅಲ್ಲಿಗೆ ಸೀಮಿತವಾದ ಸಮಸ್ಯೆಯಲ್ಲ, ಇದು ದೇಶದ ಸಮಸ್ಯೆಯಾಗಿದೆ. ಇಲ್ಲಿನ ಶಾಂತಿಯ ವಾತಾವರಣಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.

ಕರಾವಳಿಯಲ್ಲಿ ಶಾಂತಿ ನೆಲೆಸಲಿ, ನಾವು ಸಹ ನೆಮ್ಮದಿಯಿಂದ ಬದುಕುವ ವಾತಾವರಣ ಮೂಡಲಿ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಜನಪರ ಹೋರಾಟಗಾರ ಧರ್ಮೇಶ್ ಮಾತನಾಡಿ, ಕರಾವಳಿಯಲ್ಲಿ ನೆಮ್ಮದಿ ಮರುಸ್ಥಾಪನೆಗೆ ಪ್ರಯತ್ನಿಸುವ ಜವಾಬ್ದಾರಿ ಪ್ರತಿಯೊಬ್ಬರಿಗೂ ಇದೆ. ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳ ಪ್ರತಿನಿಧಿಗಳು ಕೈಜೋಡಿಸಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಹಿರಿಯ ಪತ್ರಕರ್ತ ಆರ್.ಪಿ.ವೆಂಕಟೇಶಮೂರ್ತಿ ಮಾತನಾಡಿ, ಸರ್ವಧರ್ಮೀಯರು ರಚನಾತ್ಮಕ ಕೆಲಸಗಳಲ್ಲಿ ತೊಡಗಬೇಕು. ಪರಿಸರ ಸಂರಕ್ಷಣೆಯಂತಹ ಪ್ರಗತಿಪರ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಕರಾವಳಿಯಲ್ಲಿ ಕೈ ಕೈ ಜೋಡಿಸಿ ಸಮಾಜವನ್ನು ಕಟ್ಟುವ ಕಾರ್ಯವಾಗಬೇಕು ಎಂದರು

ಸಭೆಯಲ್ಲಿ ಆರ್.ಪಿ.ಐ. ಮುಖಂಡ ಸತೀಶ್, ರೂಪಾ ಹಾಸನ ಮಾತನಾಡಿದರು. ಈ ಸಂದರ್ಭದಲ್ಲಿ ನಾಗರಾಜ್ ಹೆತ್ತೂರು, ತೌಫೀಕ್ ಅಹಮದ್, ಪೃಥ್ವಿ, ಸಮೀರ್, ಮಲ್ನಾಡ್ ಮೆಹಬೂಬ್, ಮುಬಶ್ಶಿರ್ ಅಹ್ಮದ್, ಮಹೇಶ್, ಅರವಿಂದ್, ರಮೇಶ್, ಪ್ರೇಮದೇಶ್ ಸಹಿತ ಹಲವರು ಭಾಗವಹಿಸಿದ್ದರು.

ನವೀನ್ ಕುಮಾರ್ ಹಾಗೂ ಪೃಥ್ವಿ ಎಂ.ಜಿ. ಸಭೆಯನ್ನು ಆಯೋಜಿಸಿ ಆತಿಥ್ಯ ವಹಿಸಿದ್ದರು.

ಸಮಾರಂಭದಲ್ಲಿ ಹಲವು ನಾಗರಿಕ ಹೋರಾಟಗಾರರು, ಪ್ರಜಾಪ್ರತಿನಿಧಿಗಳು, ವಿವಿಧ ಸಂಘಟನೆಗಳ ಸದಸ್ಯರು ಪಾಲ್ಗೊಂಡು, ಸಮಾಜದಲ್ಲಿ ಧಾರ್ಮಿಕ ಸಹಿಷ್ಣುತೆ, ಸಹಬಾಳ್ವೆ ಹಾಗೂ ಸಂವಾದದ ಸಂಸ್ಕೃತಿಯನ್ನು ಬೆಳೆಸುವ ಕುರಿತು ಚರ್ಚಿಸಿದರು.

ನಿರ್ಣಯಗಳು

ಜೂ.30 ರಂದು ಹಾಸನದ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಕರಾವಳಿಯಲ್ಲಿ ಶಾಂತಿಯ ಸಮಾಜ ನಿರ್ಮಾಣಕ್ಕಾಗಿ ಸರಕಾರ ಮುಂದಾಗಲಿ ಎಂಬ ನಾಮಫಲಕದೊಂದಿಗೆ ಮನವಿ ಸಲ್ಲಿಸಲಾಗುವುದು.

ಮಂಗಳೂರಿನಲ್ಲಿ ಸೌಹಾರ್ದವನ್ನು ಉತ್ತೇಜಿಸುವ ಕಾವ್ಯ-ಸಾಹಿತ್ಯ, ಪರಿಸರ ಹಾಗೂ ಜಾತಿಗೆ ಸಂಬಂಧಿಸಿದ ಚಿಂತನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ದ್ವೇಷ ಭಾಷಣಗಳನ್ನು ಮಾಡುವ ಹಾಗೂ ಸೌಹಾರ್ದವನ್ನು ಹಾಳುಮಾಡುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರಕಾರಕ್ಕೆ ಒತ್ತಾಯಿಸಲಾಯಿತು.

ಮುಂದಿನ ದಿನಗಳಲ್ಲಿ ಜನಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುವ ನಿರ್ಧಾರ ಕೈಗೊಳ್ಳಲಾಯಿತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X