Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೆಂಗಳೂರಿನಲ್ಲಿ ತಮಿಳುನಾಡಿನ ತಾಳೆ...

ಬೆಂಗಳೂರಿನಲ್ಲಿ ತಮಿಳುನಾಡಿನ ತಾಳೆ ಹಣ್ಣಿಗೆ' ಭಾರೀ ಬೇಡಿಕೆ: ಖರೀದಿಗೆ ಮುಗಿಬಿದ್ದ ಜನರು

ಮಾಳಿಂಗರಾಯ ಕೆಂಭಾವಿಮಾಳಿಂಗರಾಯ ಕೆಂಭಾವಿ29 April 2024 1:22 PM IST
share
ಬೆಂಗಳೂರಿನಲ್ಲಿ ತಮಿಳುನಾಡಿನ ತಾಳೆ ಹಣ್ಣಿಗೆ ಭಾರೀ ಬೇಡಿಕೆ: ಖರೀದಿಗೆ ಮುಗಿಬಿದ್ದ ಜನರು

ಬೆಂಗಳೂರು: ಬೇಸಿಗೆ ಶುರವಾಗುತ್ತಿ ದ್ದಂತೆ ಬೆಂಗಳೂರಿನಾದ್ಯಂತ ತಾಳೆ ಹಣ್ಣು ಮಾರಾಟ ಮಾಡುವುದು ಸರ್ವೇ ಸಾಮಾನ್ಯ ವಾಗಿದ್ದು, ತಾಳೆ ಹಣ್ಣು ಖರೀದಿಗೆ ನಗರದ ಜನ ಮುಗಿಬಿದ್ದಿದ್ದಾರೆ. ಕೆ.ಆರ್.ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ತಾಳೆ ಹಣ್ಣಿನ ಬುಟ್ಟಿ ಬರುತ್ತಿದ್ದಂತೆ, ಖಾಲಿಯಾಗಿ ಉತ್ತಮ ವ್ಯಾಪಾರವಾಗುತ್ತಿದೆ.

ಬೇಸಿಗೆ ಕಾಲದಲ್ಲಿ ದಾಹವನ್ನು ತಣಿಸಲು ಎಳನೀರು, ನಿಂಬೆಹಣ್ಣು, ಕರಬೂಜ ಹಣ್ಣಿನಂತೆ ತಾಳೆಹಣ್ಣು ನಿಸರ್ಗದತ್ತವಾಗಿ ನಮಗೆ ಸಿಗುತ್ತದೆ. ಇವೆಲ್ಲವೂ ಬೇಸಿಗೆ ಕಾಲದಲ್ಲಿ ಜನರ ದೇಹವನ್ನು ತಂಪು ಮಾಡಲು ಉಪಯುಕ್ತವಾಗುತ್ತವೆ. ಹೀಗಾಗಿ ಬೆಂಗಳೂರಿನಲ್ಲಿ ಯಥೇಚ್ಚವಾಗಿ ತಾಳೆ ಹಣ್ಣನ್ನು ಮಾರಾಟ ಮಾಡಲಾಗುತ್ತಿದೆ. ನಗರದಲ್ಲಿ ಹಿಂದೆಂದೂ ಕಾಣದ ಬಿಸಿಲು ಇರುವ ಕಾರಣ ಗ್ರಾಹಕರು ತಾಳೆ ಹಣ್ಣನ್ನು ಹೆಚ್ಚಾಗಿ ಕೊಂಡುಕೊಳ್ಳುತ್ತಿದ್ದಾರೆ.

ತಾಳೆ ಹಣ್ಣು ವರ್ಷಕ್ಕೆ ಕೇವಲ ಒಂದು ಬಾರಿ ಬರುವ ಬೆಳೆಯಾ ಗಿದ್ದು, ಮಧ್ಯಾಹ್ನದ ಬಿಸಿಲಿನಲ್ಲಿ ತಾಳೆ ಹಣ್ಣಿನ ಜ್ಯೂಸ್ ಅಥವಾ ಹಣ್ಣಿನ ತೊಳೆಗಳನ್ನು ತಿನ್ನಬೇಕು ಎಂದು ಪ್ರತಿಯೊಬ್ಬರೂ ಅಂದುಕೊಳ್ಳುತ್ತಾರೆ.

ಬೆಂಗಳೂರಿನಲ್ಲಿ ತಾಳೆ ಹಣ್ಣನ್ನು ಸಿಯಾಳದಂತೆ ಗೊಂಚಲನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿರುತ್ತಾರೆ. ಕೆಲವು ಕಡೆಗಳಲ್ಲಿ ಸುಲಿದ ತೊಳೆಗಳನ್ನು ಮಾರಾಟ ಮಾಡುತ್ತಿರುತ್ತಾರೆ. ಬೆಂಗಳೂರಿಗೆ ಹೆಚ್ಚಾಗಿ ತಮಿಳುನಾಡಿನಿಂದ ತಾಳೆ ಹಣ್ಣು ಪೂರೈಕೆಯಾಗುತ್ತಿವೆ.

ಬೇಸಿಗೆ ಕಾಲದಲ್ಲಿ ಕೆಲವರಿಗೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗುತ್ತದೆ. ಇದರಿಂದ ಆರೋಗ್ಯದಲ್ಲಿ ಸುಸ್ತು, ಆಯಾಸ ಜೊತೆಗೆ ಹೃದಯದ ತೊಂದರೆಗಳೂ ಕಾಣಿಸಿಕೊಳ್ಳುತ್ತವೆ. ಈ ಎಲ್ಲ ಸಮಸ್ಯೆಗಳಿಂದ ಮುಕ್ತಿ ಪಡೆಯಲು ತಾಳೆ ಹಣ್ಣಿನ ಸೇವನೆ ಮಾಡಬಹುದು.

ಬೇಸಿಗೆ ಕಾಲದಲ್ಲಿ ಈ ದೇಹದಿಂದ ನೀರಿನ ಅಂಶ ಸಾಕಷ್ಟು ಪ್ರಮಾಣದಲ್ಲಿ ಬೆವರಿನ ರೂಪದಲ್ಲಿ ಹರಿದು ಹೊರಬರುತ್ತದೆ. ತಾಳೆ ಹಣ್ಣು ತಿನ್ನುವುದರಿಂದ ದೇಹದ ನೀರಿನ ಅಂಶದಲ್ಲಿ ಸಮತೋಲನ ಕಾಯುತ್ತದೆ.

ತಾಪಮಾನ ಕಡಿಮೆ ಮಾಡುವ ಗುಣ

ತಾಳೆ ಹಣ್ಣಿನಲ್ಲಿ ದೇಹದ ತಾಪಮಾನವನ್ನು ತಂಪು ಮಾಡುವ ಗುಣ ಲಕ್ಷಣಗಳು ಹೆಚ್ಚಾಗಿವೆ. ಈ ಹಣ್ಣಿನಲ್ಲಿ ಕಾರ್ಬೋ ಹೈಡ್ರೇಟ್, ಫೈಟೊನ್ಯೂಟ್ರಿ ಯೆಂಟ್ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಇದು ಕಡಿಮೆ ಕ್ಯಾಲರಿಗಳನ್ನು ಹೊಂದಿರುತ್ತದೆ, ಆದರೆ ಫೈಬರ್, ಪ್ರೋಟೀನ್ ಮತ್ತು ವಿಟಮಿನ್-ಸಿ,ಎ,ಇ ಮತ್ತು ಕೆಯಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ. ಇದಲ್ಲದೇ, ಇದು ಕಬ್ಬಿಣ, ಪೊಟ್ಯಾಸಿಯಮ್, ಸತು ಮತ್ತು ರಂಜಕದಂತಹ ಖನಿಜಗಳನ್ನು ಹೊಂದಿರುತ್ತದೆ ಎಂದು ವೈದ್ಯರೊಬ್ಬರು ತಿಳಿಸಿದರು.

ಪ್ರತೀ ಬೇಸಿಗೆಯಲ್ಲಿ ತಮಿಳುನಾಡಿನಿಂದ ತಾಳೆ ಹಣ್ಣನ್ನು ತಂದು ಬೆಂಗಳೂರಿನಲ್ಲಿ ಮಾರುತ್ತೇವೆ. ಸುಲಿದಿರುವ ತಾಳೆ ಹಣ್ಣಿನ 5 ತೊಳೆಗಳನ್ನು 50 ರೂ.ಗೆ ಮಾರಾಟ ಮಾಡುತ್ತಿದ್ದೇವೆ. ಅರ್ಧ ಗಂಟೆಯಲ್ಲೇ ಒಂದು ಬುಟ್ಟಿ ತೊಳೆಗಳು ಮಾರಾಟವಾಗುತ್ತಿವೆ. ದಿನಕ್ಕೆ 1ಸಾವಿರ ರೂ.ನಿಂದ 1,500ರೂ.ಗಳ ವರೆಗೆ ಹಣ ಸಂಪಾದನೆ ಮಾಡುತ್ತಿದ್ದೇನೆ. ಹೆಚ್ಚು ಬಿಸಿಲು ಇರುವ ಕಾರಣ ತಾಳೆ ಹಣ್ಣಿಗೆ ಹೆಚ್ಚು ಬೇಡಿಕೆ ಇದೆ. ಜನರು ದೂರದಿಂದ ಹುಡುಕಿಕೊಂಡು ಬರುತ್ತಾರೆ.

-ರಾಜೇಶ್, ತಾಳೆ ಹಣ್ಣಿನ ಮಾರಾಟಗಾರ

share
ಮಾಳಿಂಗರಾಯ ಕೆಂಭಾವಿ
ಮಾಳಿಂಗರಾಯ ಕೆಂಭಾವಿ
Next Story
X