Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕಾ: ಭಾರತ ಮತ್ತು ಏಷ್ಯಾ ಚಿನ್ನಾಭರಣ...

ಅಮೆರಿಕಾ: ಭಾರತ ಮತ್ತು ಏಷ್ಯಾ ಚಿನ್ನಾಭರಣ ಅಂಗಡಿಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ 16 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ1 Sept 2023 10:04 PM IST
share
ಅಮೆರಿಕಾ: ಭಾರತ ಮತ್ತು ಏಷ್ಯಾ ಚಿನ್ನಾಭರಣ ಅಂಗಡಿಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ 16 ಮಂದಿಯ ಬಂಧನ
ಕಳೆದ ಒಂದು ವರ್ಷದ ಅವಧಿಯಲ್ಲಿ ಅಮೆರಿಕಾದ ಪೂರ್ವ ಕರಾವಳಿಯಾದ್ಯಂತ ಇರುವ ಭಾರತೀಯ ಹಾಗೂ ಏಷ್ಯನ್ನರ ಚಿನ್ನಾಭರಣ ಅಂಗಡಿಗಳನ್ನೇ ಗುರಿಯಾಗಿಸಿಕೊಂಡು ಹಲವಾರು ಹಿಂಸಾತ್ಮಕ ಸಶಸ್ತ್ರ ದರೋಡೆ ಕೃತ್ಯ ಎಸಗಿದ್ದ ಕುಖ್ಯಾತ ಅಪರಾಧ ತಂಡವೊಂದರ 16 ಮಂದಿಯನ್ನು ಬಂಧಿಸಲಾಗಿದೆ

ವಾಶಿಂಗ್ಟನ್: ಕಳೆದ ಒಂದು ವರ್ಷದ ಅವಧಿಯಲ್ಲಿ ಅಮೆರಿಕಾದ ಪೂರ್ವ ಕರಾವಳಿಯಾದ್ಯಂತ ಇರುವ ಭಾರತೀಯ ಹಾಗೂ ಏಷ್ಯನ್ನರ ಚಿನ್ನಾಭರಣ ಅಂಗಡಿಗಳನ್ನೇ ಗುರಿಯಾಗಿಸಿಕೊಂಡು ಹಲವಾರು ಹಿಂಸಾತ್ಮಕ ಸಶಸ್ತ್ರ ದರೋಡೆ ಕೃತ್ಯ ಎಸಗಿದ್ದ ಕುಖ್ಯಾತ ಅಪರಾಧ ತಂಡವೊಂದರ 16 ಮಂದಿಯನ್ನು ಬಂಧಿಸಲಾಗಿದೆ ಎಂದು ndtv.com ವರದಿ ಮಾಡಿದೆ.

ಕೊಲಂಬಿಯಾ ಜಿಲ್ಲೆಯ ಅಮೆರಿಕಾ ಅಟಾರ್ನಿ ಜನರಲ್ ಕಚೇರಿಯು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಪ್ರಕಾರ, ಬುಧವಾರ ಆರು ಮಂದಿ ಶಂಕಿತರನ್ನು ಫೆಡರಲ್ ಲಾ ಎನ್‍ ಫೋರ್ಸ್ ಮೆಂಟ್ ತನಿಖಾ ಸಂಸ್ಥೆಯು ಬಂಧಿಸಿದ್ದು, ಇದಕ್ಕೂ ಮುನ್ನ, ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿತ್ತು ಎಂದು ಹೇಳಲಾಗಿದೆ.

ಏಷ್ಯನ್ ಅಮೆರಿಕನ್ನರ ಮಾಲಕತ್ವದ ಚಿನ್ನಾಭರಣ ಅಂಗಡಿಗಳನ್ನು ಗುರಿಯಾಗಿಸಿಕೊಂಡು ನ್ಯೂ ಜೆರ್ಸಿ, ಪೆನ್ನಿಸಿಲ್ವೇನಿಯಾ, ವರ್ಜಿನಿಯಾ ಹಾಗೂ ಫ್ಲೋರಿಡಾಗಳಲ್ಲಿ ದರೋಡೆ ನಡೆಸಲು ಕೊಲಂಬಿಯಾ ಜಿಲ್ಲೆಯಲ್ಲಿ ಆರೋಪಿಗಳು ಜನವರಿ 7, 2022ರಿಂದ ಜನವರಿ 27, 2023ರ ನಡುವೆ ಪಿತೂರಿ ನಡೆಸಿದ್ದರು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಆರೋಪಿಗಳ ಗುಂಪು ಗುರಿಯಾಗಿಸಿಕೊಂಡಿದ್ದ ದಕ್ಷಿಣ ಏಷ್ಯನ್ನರ ಒಂಬತ್ತು ಚಿನ್ನಾಭರಣ ಅಂಗಡಿಗಳ ಹೆಸರನ್ನು ದೋಷಾರೋಪ ಪಟ್ಟಿಯಲ್ಲಿ ಪಟ್ಟಿ ಮಾಡಲಾಗಿದೆ. ಇವುಗಳ ಪೈಕಿ ಕನಿಷ್ಠ ನಾಲ್ಕು ಚಿನ್ನಾಭರಣ ಅಂಗಡಿಗಳು ಭಾರತೀಯ ಮೂಲದ ಮಾಲಕರಿಗೆ ಸೇರಿವೆ ಎಂದು ಗುರುತಿಸಲಾಗಿದೆ.

ದರೋಡೆ ನಡೆಸಿ ಪಾರಾಗಲು ಕಳವು ಮಾಡಿದ ವಾಹನಗಳನ್ನು ಬಳಸುತ್ತಿದ್ದ ಆರೋಪಿಗಳ ಗುಂಪು, ಗಾಢ ಬಣ್ಣದ ವಸ್ತ್ರಗಳು, ಮುಸುಕುಗಳು ಹಾಗೂ ಕೈಗವಸುಗಳನ್ನು ಧರಿಸಿ, ಶಸ್ತ್ರಸಜ್ಜಿತವಾಗಿ ದಾಳಿ ನಡೆಸುತ್ತಿತ್ತು ಎಂದು ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.

ಹಾಬ್ಸ್ ಕಾಯ್ದೆ ಎಂದು ಕರೆಯಲಾಗುವ ಕಾಯ್ದೆಯಡಿ ಅಂತರರಾಜ್ಯ ವಾಣಿಜ್ಯ ದರೋಡೆ ನಡೆಸಲು ಪಿತೂರಿ ನಡೆಸಿದ ಆರೋಪದಡಿ ಬಂಧಿತರ ವಿರುದ್ಧ 19 ದೋಷಾರೋಪವನ್ನು ಹೊರಿಸಲಾಗಿದೆ.

ತೀರ್ಪಿನ ಮಾರ್ಗಸೂಚಿ ಹಾಗೂ ಮತ್ತಿತರ ಅಂಶಗಳನ್ನು ಪರಿಗಣಿಸಿದ ನಂತರ ಫೆಡರಲ್ ನ್ಯಾಯಾಧೀಶರು ಸೂಕ್ತ ತೀರ್ಪು ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X