Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 500 ದಿನದ ಗಡಿದಾಟಿದ ಸಂಘರ್ಷ: ಉಕ್ರೇನ್...

500 ದಿನದ ಗಡಿದಾಟಿದ ಸಂಘರ್ಷ: ಉಕ್ರೇನ್ ಯುದ್ಧದಲ್ಲಿ 9000 ನಾಗರಿಕರ ಮೃತ್ಯು; ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ8 July 2023 8:21 PM IST
share
500 ದಿನದ ಗಡಿದಾಟಿದ ಸಂಘರ್ಷ: ಉಕ್ರೇನ್ ಯುದ್ಧದಲ್ಲಿ 9000 ನಾಗರಿಕರ ಮೃತ್ಯು; ವಿಶ್ವಸಂಸ್ಥೆ

ಜಿನೆವಾ: ಉಕ್ರೇನ್ನಲ್ಲಿ ರಶ್ಯ ಆರಂಭಿಸಿರುವ ಯುದ್ಧದಲ್ಲಿ ಉಂಟಾದ ನಾಗರಿಕರ ಸಾವನ್ನು ಖಂಡಿಸಿರುವ ವಿಶ್ವಸಂಸ್ಥೆ, ಸಂಘರ್ಷವು 500ನೇ ದಿನಕ್ಕೆ ಮುಂದುವರಿದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

2022ರ ಫೆಬ್ರವರಿ 24ರಂದು ಉಕ್ರೇನ್ ಮೇಲಿನ ರಶ್ಯ ಆಕ್ರಮಣ ಆರಂಭಗೊಂಡಿದ್ದು ಇದುವರೆಗೆ ಸುಮಾರು 500 ಮಕ್ಕಳ ಸಹಿತ 9 ಸಾವಿರಕ್ಕೂ ಅಧಿಕ ನಾಗರಿಕರು ಮೃತರಾಗಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಿರುವ ಸಾಧ್ಯತೆಯಿದೆ. ಇಂದು ಯುದ್ಧದಲ್ಲಿನ ಮತ್ತೊಂದು ಕಠೋರ ಮೈಲುಗಲ್ಲನ್ನು ಗುರುತಿಸಲಾಗಿದೆ’ ಎಂದು ಉಕ್ರೇನ್ನಲ್ಲಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ಕಣ್ಗಾವಲು ನಿಯೋಗ(ಎಚ್ಆರ್ಎಂಎಂಯು)ದ ಉಪಮುಖ್ಯಸ್ಥ ನೋಯೆಲ್ ಕಲ್ಹೂನ್ ಹೇಳಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆರಂಭದ ಕೆಲ ತಿಂಗಳು ಸಾವು-ನೋವು, ನಾಶ-ನಷ್ಟದ ಪ್ರಮಾಣ ಕಡಿಮೆಯಾಗಿತ್ತು. ಆದರೆ ಮೇ ಮತ್ತು ಜೂನ್ನಲ್ಲಿ ಮತ್ತೆ ಏರಿಕೆಯಾಗುತ್ತಾ ಸಾಗಿದೆ. ಜೂನ್ 27ರಂದು ಪೂರ್ವ ಉಕ್ರೇನ್ ನ ಕ್ರಮಟೊರೊಸ್ಕ್ ನಗರದ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ 4 ಮಕ್ಕಳ ಸಹಿತ 13 ನಾಗರಿಕರು ಮೃತಪಟ್ಟಿದ್ದರು.

ಜತೆಗೆ, ಪಶ್ಚಿಮದ ಲಿವಿವ್ ನಗರದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 10 ನಾಗರಿಕರು ಮೃತಪಟ್ಟಿದ್ದು ಕನಿಷ್ಟ 37 ನಾಗರಿಕರು ಗಾಯಗೊಂಡಿದ್ದಾರೆ. ಲಿವಿವ್ ಪಾಲಿಟೆಕ್ನಿಕ್ ವಿವಿ ಸೇರಿದಂತೆ 50ಕ್ಕೂ ಅಧಿಕ ಕಟ್ಟಡ, ಅಪಾರ್ಟ್ಮೆಂಟ್ಗಳಿಗೆ ಹಾನಿಯಾಗಿದೆ ಎಂದು ನಗರದ ಮೇಯರ್ ಹೇಳಿದ್ದಾರೆ. ವಿಶ್ವ ಪಾರಂಪರಿಕ ತಾಣದ ಪಟ್ಟಿಯಲ್ಲಿರುವ ಸಂರಕ್ಷಿತ ಪ್ರದೇಶದಲ್ಲಿ ನಡೆದಿರುವ ಪ್ರಥಮ ದಾಳಿ ಇದಾಗಿದ್ದು ಐತಿಹಾಸಿಕ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಯುನೆಸ್ಕೋ ವರದಿ ಮಾಡಿದೆ.

ಖಂಡಿತ ಗೆಲುವು ನಮ್ಮದೇ: ಝೆಲೆನ್ಸ್ಕಿ

ಆಕ್ರಮಣಕಾರರ ಪ್ರಯತ್ನವನ್ನು 500 ದಿನದವರೆಗೂ ಯಶಸ್ವಿಯಾಗಿ ವಿಫಲಗೊಳಿಸಿದ್ದೇವೆ. ಈ ನಿರ್ಣಾಯಕ ಯುದ್ಧದಲ್ಲಿ ಖಂಡಿತ ಗೆಲುವು ನಮ್ಮದೇ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಶನಿವಾರ ಹೇಳಿದ್ದಾರೆ.

ಉಕ್ರೇನ್ ಸಂಘರ್ಷ 500ನೇ ದಿನದ ಗಡಿ ತಲುಪಿದ ಸಂದರ್ಭ ಕಪ್ಪು ಸಮುದ್ರದಲ್ಲಿರುವ ಅತ್ಯಂತ ಆಯಕಟ್ಟಿನ ಬಂದರು, ಸ್ನೇಕ್ ಐಲ್ಯಾಂಡ್ಗೆ ಶನಿವಾರ ಭೇಟಿ ನೀಡಿ ಭದ್ರತಾ ಪಡೆಗಳನ್ನು ಅಭಿನಂದಿಸಿದ ಬಳಿಕ ದೇಶದ ಜನತೆಗೆ ನೀಡಿದ ಸಂದೇಶದಲ್ಲಿ ಝೆಲೆನ್ಸ್ಕಿ ಉಕ್ರೇನ್ ಯೋಧರ ಶೌರ್ಯವನ್ನು ಶ್ಲಾಘಿಸಿದರು.

ನಾವಿಂದು ಸ್ನೇಕ್ ಐಲ್ಯಾಂಡ್ನಲ್ಲಿದ್ದೇವೆ. ಇದನ್ನು ಆಕ್ರಮಣಕಾರರು ಎಂದಿಗೂ ವಶಕ್ಕೆ ಪಡೆಯಲು ಸಾಧ್ಯವಾಗದು. ಯಾಕೆಂದರೆ ನಾವು ಧೈರ್ಯಶಾಲಿಗಳ ದೇಶ. ನಾವೀಗ ಮುನ್ನಡೆ ಸಾಧಿಸುತ್ತಿದ್ದೇವೆ. ಖಂಡಿತಾ ಗುರಿ ತಲುಪುವ ವಿಶ್ವಾಸವಿದೆ’ ಎಂದು ಝೆಲೆನ್ಸ್ಕಿ ಹೇಳಿದ್ದಾರೆ. ಯುದ್ಧ ಆರಂಭವಾಗಿ 500 ದಿನಗಳಾಗಿದ್ದು ಝೆಲೆನ್ಸ್ಕಿ ಯುದ್ಧದ ಮುಂಚೂಣಿ ನೆಲೆಗಳಿಗೆ ನಿರಂತರ ಭೇಟಿ ನೀಡಿ ಯೋಧರನ್ನು ಹುರಿದುಂಬಿಸಿದ್ದಾರೆ. ಆದರೆ ಪುಟಿನ್ ಅಪಾಯದ ಪ್ರದೇಶದ ಹತ್ತಿರ ಸುಳಿಯುವುದೂ ಅಪರೂಪವಾಗಿದೆ.

ಉಕ್ರೇನ್ ಗೆ ಕ್ಲಸ್ಟರ್ ಬಾಂಬ್ ಪೂರೈಕೆ: ಬೈಡನ್

ಅಮೆರಿಕವು ಉಕ್ರೇನ್ಗೆ ಒದಗಿಸಲಿರುವ ನೆರವಿನ ಪ್ಯಾಕೇಜ್ನಲ್ಲಿ ವಿವಾದಾತ್ಮಕ ಕ್ಲಸ್ಟರ್ ಬಾಂಬ್ಗಳನ್ನು ಸೇರಿಸಲು ಬೈಡನ್ ಆಡಳಿತ ಸಮ್ಮತಿಸಿದೆ.

ಉಕ್ರೇನ್ಗೆ ಕ್ಲಸ್ಟರ್ ಬಾಂಬ್ಗಳನ್ನು ಪೂರೈಸುವುದು ಕಷ್ಟದ ನಿರ್ಧಾರವಾಗಿತ್ತು. ಆದರೆ ರಶ್ಯದ ವಿರುದ್ಧದ ಯುದ್ಧದಲ್ಲಿ ಉಕ್ರೇನ್ಗೆ ಶಸ್ತ್ರಾಸ್ತ್ರದ ಕೊರತೆ ಎದುರಾಗಿರುವುದರಿಂದ ಉಕ್ರೇನ್ಗೆ ಈ ಅಸ್ತ್ರದ ಅಗತ್ಯ ಹೆಚ್ಚಿದೆ. ಇದರ ಬಗ್ಗೆ ನಮ್ಮ ಮಿತ್ರರೊಂದಿಗೆ ಚರ್ಚಿಸಲಾಗಿದೆ ಎಂದು ಬೈಡನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X