Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ...

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ | ಸುನಾಮಿ ಎಚ್ಚರಿಕೆ; ನೂರಾರು ಮಂದಿ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ15 Aug 2026 7:13 AM IST
share
ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ | ಸುನಾಮಿ ಎಚ್ಚರಿಕೆ; ನೂರಾರು ಮಂದಿ ಸ್ಥಳಾಂತರ

ಜಕಾರ್ತ, ಆ. 15: ಪೂರ್ವ ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ ನೀಡಲಾಗಿದ್ದು, ನೂರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (USGS) ಮತ್ತು ಇಂಡೋನೇಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಕೇಂದ್ರಬಿಂದು ಫ್ಲೋರ್ಸ್ ದ್ವೀಪದ ಉತ್ತರ ಕರಾವಳಿಯ ಸಮುದ್ರ ಪ್ರದೇಶದಲ್ಲಿತ್ತು. ಇದು ಎಂಡೆ ಪಟ್ಟಣದಿಂದ ವಾಯವ್ಯಕ್ಕೆ ಸುಮಾರು 68 ಕಿ.ಮೀ. ದೂರದಲ್ಲಿತ್ತು ಎಂದು USGS ತಿಳಿಸಿದೆ.

ಭೂಕಂಪದ ಬಳಿಕ ಅದೇ ಪ್ರದೇಶದಲ್ಲಿ ಹಲವು ಪ್ರಬಲ ನಂತರದ ಕಂಪನಗಳು ಸಂಭವಿಸಿವೆ. ಈ ಪೈಕಿ 6.1 ತೀವ್ರತೆಯ ಕಂಪನವೂ ಸೇರಿದೆ.

ಭೂಕಂಪದ ತೀವ್ರತೆ ಹೇಗಿತ್ತು ಎಂಬುದನ್ನು ವಿವರಿಸಿದ 31 ವರ್ಷದ ಆಸ್ಪತ್ರೆಯ ಗ್ರಾಹಕ ಸೇವಾ ಅಧಿಕಾರಿ ಲುಕಾಸ್ ಲೋಟರ್, ‘ಇದ್ದಕ್ಕಿದ್ದಂತೆ ಎಲ್ಲವೂ ನಡುಗಲು ಆರಂಭಿಸಿತು. ನಾನು ಭಯಭೀತನಾದೆ’ ಎಂದು AFPಗೆ ತಿಳಿಸಿದ್ದಾರೆ.

‘ರೋಗಿಗಳೂ ಆಸ್ಪತ್ರೆಯಿಂದ ಹೊರಗೆ ಓಡಿದರು. ಕಂಪನ ಬಹಳ ಪ್ರಬಲವಾಗಿತ್ತು. ಕೆಲವು ಗೋಡೆಗಳಲ್ಲಿ ಬಿರುಕು ಬಿದ್ದಿರುವುದನ್ನು ನೋಡಿದೆ’ ಎಂದು ಅವರು ಹೇಳಿದ್ದಾರೆ.

ಮೂರು ಪ್ರಾಂತ್ಯಗಳಿಗೆ ಸುನಾಮಿ ಎಚ್ಚರಿಕೆ

ಭೂಕಂಪದಿಂದ ಸುನಾಮಿ ಅಲೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ಇಂಡೋನೇಷ್ಯಾದ ಹವಾಮಾನ ಮತ್ತು ಭೂವೈಜ್ಞಾನಿಕ ಸಂಸ್ಥೆ (BMKG) ಎಚ್ಚರಿಸಿದೆ.

‘ಈ ಭೂಕಂಪದಿಂದ ಪೂರ್ವ ನುಸಾ ತೆಂಗಾರ, ದಕ್ಷಿಣ ಸುಲವೇಸಿ ಮತ್ತು ಪಶ್ಚಿಮ ನುಸಾ ತೆಂಗಾರ ಪ್ರಾಂತ್ಯಗಳಲ್ಲಿ ಸುನಾಮಿ ಉಂಟಾಗುವ ಸಾಧ್ಯತೆ ಇದೆ’ ಎಂದು BMKGಯ ಭೂಕಂಪ ಮತ್ತು ಸುನಾಮಿ ವಿಭಾಗದ ನಿರ್ದೇಶಕ ವಿಜಯಾಂಟೊ ತಿಳಿಸಿದ್ದಾರೆ.

ಈ ಪ್ರದೇಶಗಳಲ್ಲಿ 0.5 ಮೀಟರ್‌ ನಿಂದ ಮೂರು ಮೀಟರ್‌ ವರೆಗೆ ಎತ್ತರದ ಸುನಾಮಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.

ಜನರ ಸ್ಥಳಾಂತರ

ಫ್ಲೋರ್ಸ್ ದ್ವೀಪದ ಮೌಮೆರೆ ಪಟ್ಟಣದ ನಿವಾಸಿಗಳು ಎತ್ತರದ ಪ್ರದೇಶಗಳಿಗೆ ತೆರಳುತ್ತಿದ್ದಾರೆ ಎಂದು AFP ವರದಿ ಮಾಡಿದೆ. ಮೌಮೆರೆ ಭೂಕಂಪದ ಕೇಂದ್ರಬಿಂದುವಿನಿಂದ ಸುಮಾರು 2,400 ಕಿ.ಮೀ. ದೂರದಲ್ಲಿದೆ.

ಮೌಮೆರೆ ಕರಾವಳಿಯಲ್ಲಿ ಸಮುದ್ರದ ನೀರು ಹಿಂದಕ್ಕೆ ಸರಿದಿರುವುದು ಕಂಡುಬಂದಿದೆ. ಇದು ಸುನಾಮಿ ಮುನ್ನೆಚ್ಚರಿಕೆಯ ಸೂಚನೆಯಾಗಿರಬಹುದು ಎಂದು AFP ತಿಳಿಸಿದೆ.

ಇಂಡೋನೇಷ್ಯಾದ ಟಿವಿಯಲ್ಲಿ ಪ್ರಸಾರವಾದ ದೃಶ್ಯಗಳಲ್ಲಿ ಸಮೀಪದ ನಾಗೆಕಿಯೊ ರೀಜೆನ್ಸಿಯ ನೂರಾರು ಜನರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವುದು ಕಂಡುಬಂದಿದೆ. ಕೆಲವು ಕಟ್ಟಡಗಳು ಹಾನಿಗೊಳಗಾಗಿರುವ ದೃಶ್ಯಗಳೂ ಪ್ರಸಾರವಾಗಿವೆ.

ಈವರೆಗೆ ಯಾವುದೇ ಸಾವು-ನೋವು ವರದಿಯಾಗಿಲ್ಲ. ಆದರೆ 19ರಿಂದ 30 ಸೆಂ.ಮೀ. ಎತ್ತರದ ಸುನಾಮಿ ಅಲೆಗಳು ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ರಿಂಗ್ ಆಫ್ ಫೈರ್’ ವಲಯ

ಇಂಡೋನೇಷ್ಯಾ ಮತ್ತು ನೆರೆಯ ದೇಶಗಳು ಪೆಸಿಫಿಕ್ ‘ರಿಂಗ್ ಆಫ್ ಫೈರ್’ ವಲಯದಲ್ಲಿವೆ. ಜಪಾನ್‌ ನಿಂದ ಆಗ್ನೇಯ ಏಷ್ಯಾ ಮತ್ತು ಪೆಸಿಫಿಕ್ ಜಲಾನಯನ ಪ್ರದೇಶದವರೆಗೆ ಈ ವಲಯ ಹರಡಿದೆ. ಇಲ್ಲಿ ಭೂಕಂಪನ ಹೆಚ್ಚಿರುವುದರಿಂದ ಆಗಾಗ್ಗೆ ಭೂಕಂಪಗಳು ಸಂಭವಿಸುತ್ತವೆ.

2004ರಲ್ಲಿ ಸುಮಾತ್ರಾ ಕರಾವಳಿಯಲ್ಲಿ 9.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದರಿಂದ ಭೀಕರ ಸುನಾಮಿ ಉಂಟಾಗಿತ್ತು. ಇಂಡೋನೇಷ್ಯಾದಲ್ಲಿ ಸುಮಾರು 1.70 ಲಕ್ಷ ಮಂದಿ ಸೇರಿದಂತೆ ಇಡೀ ಪ್ರದೇಶದಲ್ಲಿ ಸುಮಾರು 2.20 ಲಕ್ಷ ಜನರು ಮೃತಪಟ್ಟಿದ್ದರು. ‘ಬಾಕ್ಸಿಂಗ್ ಡೇ ದುರಂತ’ ಎಂದು ಕರೆಯಲಾಗುವ ಈ ಘಟನೆ ದಾಖಲಾದ ಇತಿಹಾಸದಲ್ಲೇ ಅತ್ಯಂತ ಮಾರಕ ನೈಸರ್ಗಿಕ ವಿಕೋಪಗಳ ಪೈಕಿ ಒಂದಾಗಿದೆ.

2018ರಲ್ಲಿ ಲೊಂಬೋಕ್ ದ್ವೀಪದಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ನಂತರದ ಎರಡು ವಾರಗಳಲ್ಲಿ ಹಲವು ಕಂಪನಗಳು ಸಂಭವಿಸಿದವು. ಈ ಭೂಕಂಪ ಸರಣಿಯಲ್ಲಿ ಲೊಂಬೋಕ್ ಮತ್ತು ನೆರೆಯ ಸುಂಬಾವಾ ದ್ವೀಪಗಳಲ್ಲಿ 550ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಅದೇ ವರ್ಷದ ಕೊನೆಯಲ್ಲಿ ಸುಲಾವೇಸಿ ದ್ವೀಪದ ಪಾಲು ನಗರದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಂತರ ಸುನಾಮಿ ಅಪ್ಪಳಿಸಿತ್ತು. ಈ ದುರಂತದಲ್ಲಿ 4,300ಕ್ಕೂ ಹೆಚ್ಚು ಮಂದಿ ಮೃತಪಟ್ಟರು ಅಥವಾ ನಾಪತ್ತೆಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X