Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾಕ್ಕೆ ಆಂಟನಿ ಬ್ಲಿಂಕೆನ್ ಭೇಟಿ |...

ಚೀನಾಕ್ಕೆ ಆಂಟನಿ ಬ್ಲಿಂಕೆನ್ ಭೇಟಿ | ಅಮೆರಿಕ-ಚೀನಾ ಪಾಲುದಾರರಾಗಬೇಕು, ಸ್ಪರ್ಧಿಗಳಲ್ಲ: ಕ್ಸಿ ಜಿಂಪಿಂಗ್

ವಾರ್ತಾಭಾರತಿವಾರ್ತಾಭಾರತಿ26 April 2024 10:32 PM IST
share
ಚೀನಾಕ್ಕೆ ಆಂಟನಿ ಬ್ಲಿಂಕೆನ್ ಭೇಟಿ | ಅಮೆರಿಕ-ಚೀನಾ ಪಾಲುದಾರರಾಗಬೇಕು, ಸ್ಪರ್ಧಿಗಳಲ್ಲ: ಕ್ಸಿ ಜಿಂಪಿಂಗ್

ಬೀಜಿಂಗ್: ವಿಶ್ವದ ಎರಡು ಬೃಹತ್ ಆರ್ಥಿಕತೆಗಳಾದ ಅಮೆರಿಕ ಮತ್ತು ಚೀನಾಗಳು ಪಾಲುದಾರರಾಗಬೇಕು, ಸ್ಪರ್ಧಿಗಳಲ್ಲ ಎಂದು ಚೀನಾ ಅಧ್ಯಕ್ಷ ಕ್ಸಿಜಿಂಪಿಂಗ್ ಶುಕ್ರವಾರ ಹೇಳಿದ್ದಾರೆ.

ಚೀನಾಕ್ಕೆ ಭೇಟಿ ನೀಡಿರುವ ಅಮೆರಿಕದ ವಿದೇಶಾಂಗ ಸಚಿವ ಆಂಟನಿ ಬ್ಲಿಂಕೆನ್‍ರನ್ನು ಬೀಜಿಂಗ್‍ನ `ಗ್ರೇಟ್ ಹಾಲ್ ಆಫ್ ದಿ ಪೀಪಲ್'ನಲ್ಲಿ ಭೇಟಿಯಾದ ಕ್ಸಿಜಿಂಪಿಂಗ್, ಕಳೆದ ನವೆಂಬರ್‍ನಲ್ಲಿ ತಾನು ಸ್ಯಾನ್‍ಪ್ರಾನ್ಸಿಸ್ಕೋದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‍ರನ್ನು ಭೇಟಿಯಾದ ಬಳಿಕ ಎರಡೂ ದೇಶಗಳು ಕೆಲವು ಧನಾತ್ಮಕ ಪ್ರಗತಿ ಸಾಧಿಸಿವೆ. ಆದರೂ ಉಭಯ ದೇಶಗಳ ನಡುವಿನ ಸಂಬಂಧದ ಕುರಿತ ಹಲವು ಸಮಸ್ಯೆಗಳು ಪರಿಹಾರವಾಗಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲು ಈಗಲೂ ಅವಕಾಶವಿದೆ ಎಂದರು.

ಚೀನಾದ ಅಭಿವೃದ್ಧಿ, ಬೆಳವಣಿಗೆಯ ಬಗ್ಗೆ ಅಮೆರಿಕ ಧನಾತ್ಮಕ ಧೋರಣೆ ವಹಿಸುವುದಾಗಿ ತಾನು ನಿರೀಕ್ಷಿಸುತ್ತೇನೆ. ಮೂಲಭೂತ ಸಮಸ್ಯೆ ಪರಿಹಾರವಾದರೆ ಆಗ ಸಂಬಂಧಗಳು ದೃಢಗೊಳ್ಳಬಹುದು ಮತ್ತು ಉತ್ತಮವಾಗಬಹುದು ಹಾಗೂ ಪ್ರಗತಿ ಸಾಧಿಸಬಹುದು ಎಂದು ಕ್ಸಿಜಿಂಪಿಂಗ್ ಇದೇ ಸಂದರ್ಭ ಒತ್ತಿಹೇಳಿರುವುದಾಗಿ ಉನ್ನತ ಮೂಲಗಳನ್ನು ಉಲ್ಲೇಖಿಸಿ ಸರಕಾರಿ ಸ್ವಾಮ್ಯದ ಸಿಸಿಟಿವಿ ವರದಿ ಮಾಡಿದೆ.

ಒಂದು ವರ್ಷದೊಳಗೆ ಎರಡನೇ ಬಾರಿಗೆ ಚೀನಾಕ್ಕೆ ಭೇಟಿ ನೀಡಿರುವ ಬ್ಲಿಂಕೆನ್ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಜತೆ ಸಭೆ ನಡೆಸಿದರು. ಈ ಸಭೆ ರಚನಾತ್ಮಕವಾಗಿತ್ತು . ರಶ್ಯ, ತೈವಾನ್ ಹಾಗೂ ವ್ಯಾಪಾರ ಸಂಬಂಧಗಳ ಬಗ್ಗೆ ಉಭಯ ಮುಖಂಡರು ವಿಸ್ತøತ ಚರ್ಚೆ ನಡೆಸಿರುವುದಾಗಿ ವರದಿಯಾಗಿದೆ. ಸಭೆಯ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಕಳೆದ ವರ್ಷ ಬೈಡನ್ ಮತ್ತು ಜಿಂಪಿಂಗ್ ನಡುವೆ ನಡೆದ ಸಭೆಯ ಬಳಿಕ ಎರಡೂ ದೇಶಗಳ ಸಂಬಂಧ ಸ್ಥಿರಗೊಳ್ಳಲು ಆರಂಭಿಸಿದೆ. ಆದರೆ ಇದೇ ವೇಳೆ, ದ್ವಿಪಕ್ಷೀಯ ಸಂಬಂಧಗಳಲ್ಲಿ ಕೆಲವು ನಕಾರಾತ್ಮಕ ವಿಷಯಗಳು ಈಗಲೂ ಹೆಚ್ಚುತ್ತಿವೆ. ಅಭಿವೃದ್ಧಿ ಹೊಂದುವ ಚೀನಾದ ನ್ಯಾಯಸಮ್ಮತ ಹಕ್ಕುಗಳನ್ನು ಕಾರಣವಿಲ್ಲದೆ ನಿಗ್ರಹಿಸಲು ಪ್ರಯತ್ನಿಸಲಾಗುತ್ತಿದೆ ಮತ್ತು ನಮ್ಮ ಪ್ರಮುಖ ಹಿತಾಸಕ್ತಿಗಳಿಗೆ ಸವಾಲು ಹೆಚ್ಚಿದೆ ಎಂದರು. ಉಭಯ ದೇಶಗಳೂ ಪರಸ್ಪರರ ಪ್ರಮುಖ ಹಿತಾಸಕ್ತಿಗಳನ್ನು ಗೌರವಿಸಲು ಆದ್ಯತೆ ನೀಡಬೇಕು ಎಂದು ಇದೇ ಸಂದರ್ಭ ವಾಂಗ್ ಯಿ ಆಗ್ರಹಿಸಿದರು ಎಂದು ವರದಿಯಾಗಿದೆ.

Tags

Anthony BlinkenJinpingChina
share
ವಾರ್ತಾಭಾರತಿ
ವಾರ್ತಾಭಾರತಿ
Next Story
X