Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವರ್ಣಭೇದ ನೀತಿ ಸಮಸ್ಯೆ ಪರಿಹರಿಸಲು ಸೂಕ್ತ...

ವರ್ಣಭೇದ ನೀತಿ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ: ಫ್ರಾನ್ಸ್ ಗೆ ವಿಶ್ವಸಂಸ್ಥೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 July 2023 11:13 PM IST
share
ವರ್ಣಭೇದ ನೀತಿ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ: ಫ್ರಾನ್ಸ್ ಗೆ  ವಿಶ್ವಸಂಸ್ಥೆ ಆಗ್ರಹ

ಜಿನೀವಾ: ಫ್ರಾನ್ಸ್ನಲ್ಲಿ ಸತತ 4 ದಿನಗಳಿಂದ ಮುಂದುವರಿದಿರುವ ಹಿಂಸಾತ್ಮಕ ಪ್ರತಿಭಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ, ಫ್ರಾನ್ಸ್ ತನ್ನ ಪೊಲೀಸ್ ವ್ಯವಸ್ಥೆಯಲ್ಲಿರುವ ಆಳವಾದ ಜನಾಂಗೀಯ ತಾರತಮ್ಯ ಸಮಸ್ಯೆ ನಿವಾರಣೆಗೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಆಗ್ರಹಿಸಿದೆ.

ಟ್ರಾಫಿಕ್ ಪೊಲೀಸರ ಗುಂಡೇಟಿನಿಂದ 17 ವರ್ಷದ ಯುವಕ ಮೃತಪಟ್ಟಿರುವ ಘಟನೆ ಫ್ರಾನ್ಸ್ನ ಕಡಿಮೆ ಆದಾಯದ ಮತ್ತು ಬಹುಜನಾಂಗೀಯ ಉಪನಗರಗಳಲ್ಲಿ ಪೊಲೀಸರು ವರ್ಣಭೇದ ನೀತಿ ತೋರುತ್ತಿದ್ದಾರೆ ಎಂಬ ಆರೋಪವನ್ನು ಮತ್ತೆ ಮುನ್ನೆಲೆಗೆ ತಂದಿದೆ.

‘ಮಂಗಳವಾರ ಪೊಲೀಸರಿಂದ ಉತ್ತರ ಆಫ್ರಿಕನ್ ಮೂಲದ 17 ವರ್ಷದ ಯುವಕನ ಹತ್ಯೆಯಿಂದ ನಾವು ಕಳವಳಗೊಂಡಿದ್ದೇವೆ. ಪೊಲೀಸರಿಂದ ಹತ್ಯೆಯಾಗಿರುವುದು ಕಳವಳಕಾರಿಯಾಗಿದೆ.

ಸ್ವಯಂಪ್ರೇರಿತ ನರಹತ್ಯೆಯ ಆರೋಪದ ಕುರಿತು ತನಿಖೆ ಪ್ರಾರಂಭವಾಗಿರುವುದನ್ನು ಗಮನಿಸಿದ್ದೇವೆ. ಕಾನೂನು ಜಾರಿಯಲ್ಲಿನ ಜನಾಂಗೀಯತೆ ಮತ್ತು ತಾರತಮ್ಯದ ಆಳವಾದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಇದು ಸಕಾಲವಾಗಿದೆ’ ಎಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಂಸ್ಥೆಯ ವಕ್ತಾರೆ ರವೀನಾ ಶಾಂದಾಸಾನಿ ಜಿನೀವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

‘ಶಾಂತರೀತಿಯಲ್ಲಿ ಸಭೆ ಸೇರುವ, ಪ್ರತಿಭಟನೆ ನಡೆಸುವ ಮಹತ್ವವನ್ನೂ ಒತ್ತಿಹೇಳುತ್ತಿದ್ದೇವೆ. ಹಿಂಸಾತ್ಮಕ ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಅಧಿಕ ಶಕ್ತಿ ಬಳಸಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಕರೆ ನೀಡುತ್ತೇವೆ. ಕಾನೂನುಬದ್ಧತೆ, ಅಗತ್ಯತೆ, ಪ್ರಮಾಣಾನುಗುಣತೆ, ತಾರತಮ್ಯರಹಿತ, ಮುನ್ನೆಚ್ಚರಿಕೆ ಮತ್ತು ಹೊಣೆಗಾರಿಕೆಯ ತತ್ವಗಳನ್ನು ಅಧಿಕಾರಿಗಳು ಗೌರವಿಸಬೇಕು. ಪೊಲೀಸರು ಅಧಿಕ ಬಲಪ್ರಯೋಗಿಸಿದ್ದಾರೆ ಎಂಬ ದೂರಿನ ಬಗ್ಗೆ ತ್ವರಿತ ವಿಚಾರಣೆ ನಡೆಸಬೇಕು’ ಎಂದವರು ಹೇಳಿದ್ದಾರೆ.

ಫ್ರಾನ್ಸ್ನಲ್ಲಿ ಭುಗಿಲೆದ್ದ ಗಲಭೆಯ ಬಗ್ಗೆ, ಹಿಂಸಾಚಾರದಲ್ಲಿ ಹಲವು ಪೊಲೀಸರು ಗಾಯಗೊಂಡಿರುವ ಬಗ್ಗೆ ವಿಶ್ವಸಂಸ್ಥೆಗೆ ಕಳವಳವಿದೆ. ಪ್ರತಿಭಟನೆಯ ಸಂದರ್ಭವನ್ನು ಸಮಾಜ ವಿರೋಧಿ ಶಕ್ತಿಗಳು ಲೂಟಿ ಮತ್ತು ಹಿಂಸಾಚಾರಕ್ಕೆ ಬಳಸಿಕೊಳ್ಳುವ ಸಂದರ್ಭಗಳಿವೆ ಎಂದು ರವೀನಾ ಶಾಂದಾಸಾನಿ ಹೇಳಿದ್ದಾರೆ.

ಸ್ವತಂತ್ರ ತಜ್ಞರ ಸಂಘಟನೆಯಾಗಿರುವ ‘ಜನಾಂಗೀಯ ತಾರತಮ್ಯ ನಿರ್ಮೂಲನೆಗೆ ವಿಶ್ವಸಂಸ್ಥೆ ಸಮಿತಿ’ಯು ಎಲ್ಲಾ ರೀತಿಯ ಜನಾಂಗೀಯ ತಾರತಮ್ಯದ ಪ್ರಕರಣಗಳನ್ನು ತೊಡೆದುಹಾಕುವ ಕಾನೂನುಗಳನ್ನು ದೇಶಗಳು ಯಾವ ರೀತಿ ಜಾರಿಗೊಳಿಸಿವೆ ಎಂಬ ಬಗ್ಗೆ ಮೇಲ್ವಿಚಾರಣೆ ನಡೆಸುತ್ತದೆ. ಫ್ರಾನ್ಸ್ನಲ್ಲಿ ಕೆಲವು ಅಲ್ಪಸಂಖ್ಯಾತ ಗುಂಪುಗಳ ಸದಸ್ಯರನ್ನು ಅಸಮಾನವಾಗಿ ಗುರಿಯಾಗಿಸಿಕೊಂಡು ಆಗಾಗ ಗುರುತಿನ ಪರಿಶೀಲನೆ, ದಂಡ ಇತ್ಯಾದಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಳೆದ ಡಿಸೆಂಬರ್ನಲ್ಲಿ ಸಮಿತಿಯು ಕಳವಳ ವ್ಯಕ್ತಪಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X