Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ವೈಮಾನಿಕ ದಾಳಿಯಿಂದ ಗಾಝಾದಲ್ಲಿ...

ಇಸ್ರೇಲ್ ವೈಮಾನಿಕ ದಾಳಿಯಿಂದ ಗಾಝಾದಲ್ಲಿ 4 ಲಕ್ಷ ಜನರ ಸ್ಥಳಾಂತರ ; ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ13 Oct 2023 11:12 PM IST
share
ಇಸ್ರೇಲ್ ವೈಮಾನಿಕ ದಾಳಿಯಿಂದ ಗಾಝಾದಲ್ಲಿ 4 ಲಕ್ಷ ಜನರ ಸ್ಥಳಾಂತರ ; ವಿಶ್ವಸಂಸ್ಥೆ ವರದಿ

ಜಿನೆವಾ: ಹಮಾಸ್ ದಾಳಿಗೆ ಪ್ರತಿಯಾಗಿ ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸುತ್ತಿರುವ ಬಾಂಬ್ ಗಳ ಸುರಿಮಳೆಯಿಂದ 4,23,000ಕ್ಕೂ ಅಧಿಕ ಜನರು ತಮ್ಮ ಮನೆ ಬಿಟ್ಟು ಪಲಾಯನ ಮಾಡುವ ಅನಿವಾರ್ಯತೆಗೆ ಸಿಲುಕಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

‘ಆಗಸ, ಸಮುದ್ರ ಮತ್ತು ಭೂಮಿಯಿಂದ ಇಸ್ರೇಲ್ ನ ಭೀಕರ ಬಾಂಬ್ ದಾಳಿ ಬಹುತೇಕ ಅಡೆತಡೆಯಿಲ್ಲದೆ ಮುಂದುವರಿದಿದೆ. ಶುಕ್ರವಾರದ ಬೆಳಗ್ಗಿನವರೆಗಿನ ಕಳೆದ 24 ಗಂಟೆಯ ಅವಧಿಯಲ್ಲಿ ಜನನಿಬಿಡ ಪ್ರದೇಶದ ಜನವಸತಿ ಕಟ್ಟಡಗಳನ್ನು ಗುರಿಯಾಗಿಸಿ ನಾಶಗೊಳಿಸಲಾಗಿದೆ ’ ಎಂದು ಮಾನವೀಯ ವ್ಯವಹಾರಗಳ ಸಮನ್ವಯಕ್ಕಾಗಿ ವಿಶ್ವಸಂಸ್ಥೆಯ ಏಜೆನ್ಸಿ(ಒಸಿಎಚ್ಎ) ಹೇಳಿದೆ.

ಸ್ಥಳಾಂತರಗೊಂಡವರಲ್ಲಿ ಮೂರನೇ ಎರಡರಷ್ಟು ಮಂದಿ, ಅಂದರೆ 2,70,000ಕ್ಕೂ ಹೆಚ್ಚಿನವರು ಯುಎನ್ಆರ್ಡಬ್ಲ್ಯೂಎ(ಫೆಲೆಸ್ತೀನಿಯನ್ ನಿರಾಶ್ರಿತರಿಗೆ ನೆರವಾಗುವ ವಿಶ್ವಸಂಸ್ಥೆ ಏಜೆನ್ಸಿ) ನಿರ್ವಹಿಸುವ ಶಾಲೆಗಳಲ್ಲಿ ಆಶ್ರಯ ಪಡೆದಿದ್ದಾರೆ. ಇತರ 27,000 ಜನರು ಫೆಲೆಸ್ತೀನಿಯನ್ ಅಥಾರಿಟಿ(ಪಿಎ) ನಿರ್ವಹಿಸುವ ಶಾಲೆಗಳಲ್ಲಿ ಆಶ್ರಯ ಪಡೆದಿದ್ದರೆ 1,53,000ಕ್ಕೂ ಅಧಿಕ ಜನರು ಇತರ ಸಾರ್ವಜನಿಕ ಕಟ್ಟಡಗಳಲ್ಲಿ, ಬಂಧುಗಳ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಒಸಿಎಚ್ಎ ಮಾಹಿತಿ ನೀಡಿದೆ.

ಬಾಂಬ್ ದಾಳಿಯ ಕಾರ್ಯಾಚರಣೆಯಿಂದ ಗಾಝಾ ಪಟ್ಟಿಯ 2,835 ವಸತಿ ಘಟಕವನ್ನು ಒಳಗೊಂಡಿರುವ 752 ವಸತಿ ಮತ್ತು ವಸತಿಯೇತರ ಕಟ್ಟಡಗಳು ನಾಶಗೊಂಡಿವೆ. ಇತರ ಸುಮಾರು 1,800 ವಸತಿ ಘಟಕಗಳು ದುರಸ್ತಿ ಮಾಡಲಾಗದಷ್ಟು ಹಾನಿಗೊಂಡಿದೆ. ಅಲ್ಲದೆ ಭಾರೀ ಪ್ರಮಾಣದಲ್ಲಿ ನಾಗರಿಕ ಮೂಲಸೌಕರ್ಯ ವ್ಯವಸ್ಥೆಗಳು ಹಾನಿಗೊಳಗಾಗಿವೆ ಎಂದು ವಿಶ್ವಸಂಸ್ಥೆಯ ಏಜೆನ್ಸಿ ಹೇಳಿದೆ. ಯುಎನ್ಆರ್ಡಬ್ಲ್ಯೂಎ ನಿರ್ವಹಿಸುವ 20 ಶಾಲೆಗಳು, ಪಿಎ ನಿರ್ವಹಿಸುವ 70 ಶಾಲೆಗಳು ಸೇರಿದಂತೆ ಕನಿಷ್ಟ 90 ಶೈಕ್ಷಣಿಕ ಸೌಲಭ್ಯಗಳಿಗೆ ಹಾನಿಯಾಗಿದೆ ಮತ್ತು ಒಂದು ಶಾಲೆ ಸಂಪೂರ್ಣವಾಗಿ ನಾಶಗೊಂಡಿದೆ. 11 ಮಸೀದಿಗಳು ನಾಶಗೊಂಡಿದ್ದರೆ 7 ಚರ್ಚ್ಗಳು ಹಾಗೂ 1 ಮಸೀದಿಗೆ ಹಾನಿಯಾಗಿದೆ. ಗಾಝಾ ಪ್ರದೇಶದ ನೀರು ಪೂರೈಕೆ ಹಾಗೂ ನೈರ್ಮಲ್ಯ ಸೌಲಭ್ಯಗಳಿಗೂ ಹಾನಿಯಾಗಿದೆ. 6 ಬಾವಿಗಳು, 3 ನೀರು ಪಂಪ್ ಮಾಡುವ ಕೇಂದ್ರಗಳು, ಒಂದು ಜಲಾಶಯಕ್ಕೆ ಹಾನಿಯಾಗಿದೆ. 1,100,000ಕ್ಕೂ ಅಧಿಕ ಜನರಿಗೆ ಕುಡಿಯುವ ನೀರು ಒದಗಿಸುವ ನಿರ್ಲವಣೀಕರಣ(ನೀರಿನಿಂದ ಉಪ್ಪಿನ ಅಂಶ ಬೇರ್ಪಡಿಸುವ ಘಟಕ) ಘಟಕ ವಾಯುದಾಳಿಯಿಂದ ಹಾನಿಗೊಂಡಿದೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X