Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶೇಖ್ ಹಸೀನಾಗೆ ರಾಜಕೀಯ ಆಶ್ರಯ ನೀಡಲು...

ಶೇಖ್ ಹಸೀನಾಗೆ ರಾಜಕೀಯ ಆಶ್ರಯ ನೀಡಲು ಬ್ರಿಟನ್ ಹಿಂದೇಟು | ಎಲ್ಲಿದ್ದಾರೆ ಬಾಂಗ್ಲಾದ ಮಾಜಿ ಪ್ರಧಾನಿ?

ವಾರ್ತಾಭಾರತಿವಾರ್ತಾಭಾರತಿ6 Aug 2024 7:10 PM IST
share
ಶೇಖ್ ಹಸೀನಾಗೆ ರಾಜಕೀಯ ಆಶ್ರಯ ನೀಡಲು ಬ್ರಿಟನ್ ಹಿಂದೇಟು | ಎಲ್ಲಿದ್ದಾರೆ ಬಾಂಗ್ಲಾದ ಮಾಜಿ ಪ್ರಧಾನಿ?

ಹೊಸದಿಲ್ಲಿ : ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ಒಂದು ದಿನದ ನಂತರ, ಅವರನ್ನು ಕರೆತಂದಿದ್ದ ಬಾಂಗ್ಲಾ ಸೇನೆಯ ಹೆಲಿಕಾಪ್ಟರ್ ಗಾಝಿಯಾಬಾದ್‌ನ ಹಿಂಡನ್ ವಾಯುನೆಲೆಯಿಂದ ಅವರನ್ನು ಬಿಟ್ಟು ಬಾಂಗ್ಲಾದೇಶಕ್ಕೆ ಹಾರಿದೆ.

ಶೇಖ್ ಹಸೀನಾ ಲಂಡನ್‌ಗೆ ತೆರಳಿ ರಾಜಕೀಯ ಆಶ್ರಯ ಪಡೆಯುವ ನಿರೀಕ್ಷೆಯಿದೆ. ಭಾರತದಿಂದ ಲಂಡನ್‌ಗೆ ತೆರಳುವ ಯೋಜನೆಯನ್ನು ಶೇಖ್ ಹಸೀನಾ ಹೊಂದಿದ್ದರು. ಆದರೆ, ಅವರ ಮುಂದಿನ ಪ್ರಯಾಣಕ್ಕೆ ಅನಿರೀಕ್ಷಿತ ತಡೆಯುಂಟಾಗಿದೆ. ಹೀಗಾಗಿ ಮುಂದಿನ ಒಂದೆರೆಡು ದಿನ ಭಾರತದಲ್ಲೇ ಅವರು ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಸೀನಾ ಅವರು ರಾಜಕೀಯ ಆಶ್ರಯಕ್ಕೆ ಸಂಬಂಧಿಸಿದಂತೆ ಬ್ರಿಟನ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರ ಸಂಜೆ ದಿಲ್ಲಿಗೆ ಸಮೀಪದ ಉತ್ತರ ಪ್ರದೇಶದ ಗಾಝಿಯಾಬಾದ್ ಬಳಿಯ ಹಿಂಡನ್ ವಾಯುನೆಲೆಗೆ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹಸೀನಾ ಅವರನ್ನು ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದೆ. ಭಾರತ ಸರಕಾರದಿಂದ ಬಿಗಿಭದ್ರತೆಯನ್ನೂ ನೀಡಲಾಗಿದೆ.

ಹಸೀನಾ ಅವರಿಗೆ ಯಾವುದೇ ತನಿಖೆ ಎದುರಿಸಬೇಕಾಗಿ ಬಂದರೆ ಅದಕ್ಕೆ ಬ್ರಿಟನ್ ಸರಕಾರದಿಂದ ಯಾವುದೇ ಕಾನೂನಾತ್ಮಕ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟ ಸಂದೇಶ ರವಾನಿಸಿದ ನಂತರ, ತಮ್ಮ ಯೋಜನೆಯನ್ನು ಒಂದೆರಡು ದಿನಗಳ ಮಟ್ಟಿಗೆ ಅವರು ಮುಂದೂಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದು ವರದಿಯ ಪ್ರಕಾರ ಅವರು ಫಿನ್ಲ್ಯಾಂಡ್ ಗೆ ಪ್ರಯಾಣ ಬೆಳೆಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಶೇಖ್‌ ಹಸೀನಾ ಅವರು ಹೊಸದಿಲ್ಲಿಯಲ್ಲಿ ವಿಶ್ವಸಂಸ್ಥೆಗಾಗಿ ಕೆಲಸ ಮಾಡುತ್ತಿರುವ ಮಗಳು ಸೈಮಾ ವಾಝೇದ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಲಂಡನ್‌ಗೆ ಪ್ರಯಣಿಸುವ ತಮ್ಮ ಯೋಜನೆಯನ್ನು ಭಾರತಕ್ಕೆ ತಿಳಿಸಿಯೇ ಅವಾಮಿ ಲೀಗ್‌ನ ನಾಯಕಿ ಶೇಖ್ ಹಸೀನಾ ಭಾರತ ಪ್ರವೇಶಿಸಿದ್ದರು. ತುರ್ತಾಗಿ ಭಾರತೀಯ ವಾಯು ಪ್ರದೇಶ ಪ್ರವೇಶಿಸಲು ಬಾಂಗ್ಲಾ ಸೇನೆಯ ಹೆಲಿಕಾಪ್ಟರ್‌ ಅನುಮತಿಯನ್ನೂ ಕೇಳಿತ್ತು. ಅದರಂತೆ ವಿದೇಶಾಂಗ ಸಚಿವಾಲಯವು ಅನುಮತಿ ನೀಡಿತು. ಆ ಬಳಿಕ ಶೇಖ್‌ ಹಸೀನಾ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದರು.

ಈ ಮಧ್ಯೆ ಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮ್ಮಿ ಅವರು, “ಬಾಂಗ್ಲಾದೇಶದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಹಿಂಸಾಚಾರಕ್ಕೆ ಹಲವು ಜೀವಗಳು ಬಲಿಯಾಗಿವೆ. ಈ ಕುರಿತು ವಿಶ್ವಸಂಸ್ಥೆ ನೇತೃತ್ವದಲ್ಲಿ ಸ್ವತಂತ್ರ ಮತ್ತು ಸವಿಸ್ತಾರವಾದ ತನಿಖೆ ನಡೆಯಬೇಕಾದ ಅನಿವಾರ್ಯತೆ ಇದೆ’ ಎಂದು ಹೇಳಿಕೆ ನೀಡಿದ್ದಾರೆ.

ಬ್ರಿಟನ್ ಸರಕಾರದ ಈ ನಡೆಯಿಂದಾಗಿ ಹಸೀನಾ ಅವರ ಮುಂದಿನ ಪ್ರಯಾಣದ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ. ಮುಂದಿನ ಒಂದೆರೆಡು ದಿನ ಭಾರತದಲ್ಲೇ ಆಶ್ರಯ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X