Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ಮೇಲೆ ರಶ್ಯದಿಂದ ಡ್ರೋನ್,...

ಉಕ್ರೇನ್ ಮೇಲೆ ರಶ್ಯದಿಂದ ಡ್ರೋನ್, ಕ್ಷಿಪಣಿ ದಾಳಿ ; ಕನಿಷ್ಠ 14 ಸಾವು

ವಾರ್ತಾಭಾರತಿವಾರ್ತಾಭಾರತಿ8 March 2025 11:01 PM IST
share
ಉಕ್ರೇನ್ ಮೇಲೆ ರಶ್ಯದಿಂದ ಡ್ರೋನ್, ಕ್ಷಿಪಣಿ ದಾಳಿ ; ಕನಿಷ್ಠ 14 ಸಾವು

ಕೀವ್: ಉಕ್ರೇನ್‌ ನ ಪೂರ್ವದಲ್ಲಿರುವ ಡೊಬ್ರೊಪಿಲ್ಲಿಯ ನಗರದ ಮೇಲೆ ಶುಕ್ರವಾರ ರಾತ್ರಿಯಿಂದ ರಶ್ಯ ನಡೆಸಿದ ಸರಣಿ ಡ್ರೋನ್ ಮತ್ತು ಕ್ಷಿಪಣಿ ದಾಳಿಯಲ್ಲಿ ಐವರು ಮಕ್ಕಳ ಸಹಿತ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು ಇತರ 37 ಮಂದಿ ಗಾಯಗೊಂಡಿರುವುದಾಗಿ ಉಕ್ರೇನ್‌ ನ ಆಂತರಿಕ ಸಚಿವಾಲಯ ಶನಿವಾರ ಹೇಳಿದೆ.

ಡೊಬ್ರೊಪಿಲಿಯಾದ ಮೇಲೆ ಬ್ಲಾಲಿಸ್ಟಿಕ್ ಕ್ಷಿಪಣಿಗಳು, ರಾಕೆಟ್‍ಗಳು ಮತ್ತು ಡ್ರೋನ್‍ಗಳ ಮೂಲಕ ರಶ್ಯನ್ ಪಡೆಗಳು ದಾಳಿ ನಡೆಸಿದ್ದು 8 ಬಹುಮಹಡಿ ಕಟ್ಟಡಗಳು ಮತ್ತು 30 ವಾಹನಗಳಿಗೆ ಹಾನಿಯಾಗಿದೆ. ಐವರು ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದು 37 ಮಂದಿ ಗಾಯಗೊಂಡಿದ್ದಾರೆ. ಜನವಸತಿ ಕಟ್ಟಡಗಳಿಗೆ ಹರಡಿದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದಾಗ ಶತ್ರುಗಳು ಮತ್ತೆ ದಾಳಿ ನಡೆಸಿ ಅಗ್ನಿಶಾಮಕ ವಾಹನವನ್ನು ಜಖಂಗೊಳಿಸಿದ್ದಾರೆ' ಎಂದು ಸಚಿವಾಲಯದ ಹೇಳಿಕೆ ತಿಳಿಸಿದ್ದು ಕ್ಷಿಪಣಿ ದಾಳಿ ನಡೆದ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವ ಮತ್ತು ಧ್ವಂಸಗೊಂಡ ಕಟ್ಟಡಗಳ ವೀಡಿಯೊವನ್ನು ಪ್ರಸಾರ ಮಾಡಿದೆ.

ಎರಡು ಇಸ್ಕಾಂಡರ್-ಎಂ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಒಂದು ಇಸ್ಕಾಂಡರ್-ಕೆ ಕ್ರೂಸ್ ಕ್ಷಿಪಣಿ ಹಾಗೂ 145 ಡ್ರೋನ್‍ಗಳನ್ನು ರಶ್ಯ ಪ್ರಯೋಗಿಸಿದ್ದು ಇದರಲ್ಲಿ ಒಂದು ಕ್ರೂಸ್ ಕ್ಷಿಪಣಿ ಮತ್ತು 79 ಡ್ರೋನ್‍ಗಳನ್ನು ವಾಯುಪಡೆ ಹೊಡೆದುರುಳಿಸಿದೆ ಎಂದು ಉಕ್ರೇನ್ ಮಿಲಿಟರಿ ಹೇಳಿದೆ.

ಈಶಾನ್ಯದ ಖಾರ್ಕಿವ್ ಪ್ರದೇಶದ ಮೇಲೆ ನಡೆದ ಪ್ರತ್ಯೇಕ ಡ್ರೋನ್ ದಾಳಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ. ರಶ್ಯದ ಉದ್ದೇಶಗಳು ಬದಲಾಗಿಲ್ಲ ಎಂಬುದಕ್ಕೆ ಇಂತಹ ದಾಳಿಗಳು ನಿದರ್ಶನವಾಗಿದೆ. ಆದ್ದರಿಂದ ಜೀವಗಳನ್ನು ರಕ್ಷಿಸಲು, ನಮ್ಮ ವಾಯು ರಕ್ಷಣೆಯನ್ನು ಬಲಪಡಿಸಲು ಮತ್ತು ರಶ್ಯ ವಿರುದ್ಧ ನಿರ್ಬಂಧಗಳನ್ನು ಹೆಚ್ಚಿಸಲು ನಮ್ಮಿಂದ ಸಾಧ್ಯವಿರುವಷ್ಟು ಪ್ರಯತ್ನ ಮುಂದುವರಿಸುವುದು ಬಹಳ ಮುಖ್ಯವಾಗಿದೆ. ಪುಟಿನ್‍ಗೆ ಯುದ್ಧಕ್ಕೆ ನೆರವಾಗುವ ಎಲ್ಲಾ ಆರ್ಥಿಕ ನೆರವಿನ ಮೂಲಗಳನ್ನೂ ಕತ್ತರಿಸಬೇಕಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್‍ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಉಕ್ರೇನ್‍ಗೆ ಯುದ್ಧಕ್ಕೆ ಸಂಬಂಧಿಸಿದ ಗುಪ್ತಚರ ಮಾಹಿತಿ ಹಂಚಿಕೆಯನ್ನು ಅಮೆರಿಕ ಸ್ಥಗಿತಗೊಳಿಸಿದ ಬಳಿಕ ಶುಕ್ರವಾರ ರಶ್ಯದ ಪಡೆಗಳ ದಾಳಿಯಲ್ಲಿ ಉಕ್ರೇನ್‌ ನ ಇಂಧನ ಮತ್ತು ಅನಿಲ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದೆ. ಅಮೆರಿಕದ ಮಿಲಿಟರಿ ನೆರವು ಮತ್ತು ಗುಪ್ತಚರ ಮಾಹಿತಿ ಹಂಚಿಕೆ ಸ್ಥಗಿತವು ಉಕ್ರೇನ್‌ ನ ವಾಯುರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸಲಿದೆ. ಪೂರ್ವ ಉಕ್ರೇನ್‌ ನ ಡೊನೆಟ್ಸ್ಕ್ ಪ್ರಾಂತದಲ್ಲಿರುವ ಡೊಬ್ರೊಪಿಲ್ಲಿಯ ನಗರವು ಅತ್ಯಂತ ಆಯಕಟ್ಟಿನ ಪ್ರದೇಶ ಪೊಕ್ರೋವ್ಸ್ಕ್‍ನಿಂದ ಸುಮಾರು 22 ಕಿ.ಮೀ ದೂರದಲ್ಲಿದ್ದು ಇದನ್ನು ವಶಪಡಿಸಿಕೊಳ್ಳುವುದು ರಶ್ಯದ ಯೋಜನೆಯಾಗಿದೆ ಎಂದು ಮಿಲಿಟರಿ ವಿಶ್ಲೇಷಕರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X