Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾದಿಂದ ಯುರೋಪ್ ಗೆ 1000 ಮಹಿಳೆ,...

ಗಾಝಾದಿಂದ ಯುರೋಪ್ ಗೆ 1000 ಮಹಿಳೆ, ಮಕ್ಕಳ ಸ್ಥಳಾಂತರ!

ತುರ್ತು ವೈದ್ಯಕೀಯ ಆರೈಕೆಯ ಉದ್ದೇಶ ; ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ21 Oct 2024 9:25 PM IST
share
ಗಾಝಾದಿಂದ ಯುರೋಪ್ ಗೆ 1000 ಮಹಿಳೆ, ಮಕ್ಕಳ ಸ್ಥಳಾಂತರ!

ಕೋಪನ್ ಹ್ಯಾಗನ್ : ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿರುವ ಸುಮಾರು 1,000 ಮಹಿಳೆಯರು ಮತ್ತು ಮಕ್ಕಳನ್ನು ಶೀಘ್ರವೇ ಗಾಝಾದಿಂದ ಯುರೋಪ್ ಗೆ ಸ್ಥಳಾಂತರಿಸಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್ ಶಾಖೆಯ ಮುಖ್ಯಸ್ಥ ಹ್ಯಾನ್ಸ್ ಕ್ಲೂಗ್ ಸೋಮವಾರ ಹೇಳಿದ್ದಾರೆ.

ಯುದ್ಧದಿಂದ ಜರ್ಜರಿತಗೊಂಡಿರುವ ಫೆಲೆಸ್ತೀನ್ ಪ್ರದೇಶವನ್ನು ಮುತ್ತಿಗೆ ಹಾಕಿರುವ ಇಸ್ರೇಲ್ `ಮುಂದಿನ ತಿಂಗಳೊಳಗೆ ಗಾಝಾದಿಂದ ಯುರೋಪಿಯನ್ ಯೂನಿಯನ್ಗೆ 1000 ವೈದ್ಯಕೀಯ ಸ್ಥಳಾಂತರಕ್ಕೆ ಬದ್ಧವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಸಂಬಂಧಿಸಿದ ಯುರೋಪಿಯನ್ ಯೂನಿಯನ್ ದೇಶಗಳು ಸ್ಥಳಾಂತರಿಸುವಿಕೆಗೆ ಬೇಕಾದ ಏರ್ಪಾಡು ಮಾಡಲಿದೆ. 2023ರ ಅಕ್ಟೋಬರ್ನಲ್ಲಿ ಯುದ್ಧ ಆರಂಭಗೊಂಡಂದಿನಿಂದ ಗಾಝಾದಿಂದ 7 ಯುರೋಪಿಯನ್ ದೇಶಗಳಿಗೆ 600 ವೈದ್ಯಕೀಯ ಸ್ಥಳಾಂತರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ವ್ಯವಸ್ಥೆ ಮಾಡಿದೆ. ನಮ್ಮ ನಿರಂತರ ಸಂವಾದದಿಂದ ಇದು ಸಾಧ್ಯವಾಗಿದೆ ' ಎಂದು ಹ್ಯಾನ್ಸ್ ಕ್ಲೂಗ್ ಹೇಳಿರುವುದಾಗಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಇಸ್ರೇಲ್ ಗಾಝಾದಲ್ಲಿನ ಆರೋಗ್ಯ ವ್ಯವಸ್ಥೆಗಳನ್ನು ಉದ್ದೇಶ ಪೂರ್ವಕವಾಗಿ ಗುರಿಯಾಗಿಸಿಕೊಂಡಿದ್ದು ಅಲ್ಲಿನ ವೈದ್ಯಕೀಯ ಸಿಬ್ಬಂದಿಗಳಿಗೆ ಚಿತ್ರಹಿಂಸೆ ನೀಡುತ್ತಿದೆ ಮತ್ತು ಅವರ ಹತ್ಯೆ ಮಾಡುತ್ತಿದೆ. ಇದು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ ಎಂದು ವಿಶ್ವಸಂಸ್ಥೆಯ ತನಿಖಾಧಿಕಾರಿಗಳು ಹೇಳಿದ್ದಾರೆ. ತುರ್ತು ವೈದ್ಯಕೀಯ ಆರೈಕೆಗಾಗಿ ಗಾಝಾದಿಂದ ಸುಮಾರು 10,000 ಜನರನ್ನು ತುರ್ತಾಗಿ ಸ್ಥಳಾಂತರಿಸುವ ಅಗತ್ಯವಿದೆ ಎಂದು ಇಸ್ರೇಲ್ ಆಕ್ರಮಿತ ಫೆಲೆಸ್ತೀನ್ ಪ್ರದೇಶಗಳಿಗೆ ಸಂಬಂಧಿಸಿ ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ರಿಕ್ ಪೀಪರ್ಕಾರ್ನ್ ಇತ್ತೀಚೆಗೆ ಹೇಳಿದ್ದರು.

ಉಕ್ರೇನ್ನಲ್ಲಿಯೂ ಸಂಬಂಧಿಸಿದ ಎಲ್ಲಾ ಪಕ್ಷಗಳ ಜತೆ ಸಂವಾದ ಮುಂದುವರಿದಿದೆ. ಈಗ ರಶ್ಯ ಆಕ್ರಮಿತ ಉಕ್ರೇನ್ ಪ್ರದೇಶವಾದ ಡೊನ್ಬಾಸ್ನಲ್ಲಿ 15,000 ಎಚ್ಐವಿ-ಏಡ್ಸ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದ ವಿಚಾರದಲ್ಲಿ ರಾಜಕೀಯ ತರದೇ ಕಾರ್ಯನಿರ್ವಹಿಸುವ ಪ್ರಾಮುಖ್ಯತೆಯನ್ನು ಇದು ಒತ್ತಿಹೇಳುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

2022ರ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ರಶ್ಯದ ಆಕ್ರಮಣದ ನಂತರ ಉಕ್ರೇನ್ನಲ್ಲಿನ ಆರೋಗ್ಯ ಕೇಂದ್ರಗಳ ಮೇಲೆ ಸುಮಾರು 2,000 ದಾಳಿಗಳು ನಡೆದಿದೆ. ಇಂತಹ ಘಟನೆಗಳನ್ನು ಯಾವತ್ತೂ ಅತ್ಯಂತ ಬಲವಾಗಿ ಖಂಡಿಸುತ್ತಾ ಬಂದಿದ್ದೇವೆ. ಆದರೆ ಯುದ್ಧದ ಬಳಿಕ ಉಕ್ರೇನ್ಗೆ ಎದುರಾಗಿರುವ ಮೂರನೇ ಚಳಿಗಾಲದ ಸಿದ್ಧತೆಗಳ ಬಗ್ಗೆ ಕಳವಳವಿದೆ. ನಾಗರಿಕರು ಬಳಸುವ 80%ದಷ್ಟು ವಿದ್ಯುತ್ ಗ್ರಿಡ್ ನಾಶವಾಗಿದೆ ಅಥವಾ ಹಾನಿಗೊಂಡಿದೆ. ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡುವ ತಜ್ಞ ವೈದ್ಯರು ತಮ್ಮ ತಲೆಯ ಮೇಲೆ ಲ್ಯಾಂಪ್ ಸಿಕ್ಕಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಚಳಿಗಾಲ ಅತ್ಯಂತ ಕಠಿಣವಾಗಿರಲಿದೆ ಎಂದು ಹ್ಯಾನ್ಸ್ ಕ್ಲೂಗ್ ಹೇಳಿದ್ದಾರೆ.

ಯುರೋಪ್ನ ಆರೋಗ್ಯ ರಕ್ಷಣಾ ವ್ಯವಸ್ಥೆಗಳ ಮೇಲಿನ ಒತ್ತಡದ ಹೊರತಾಗಿಯೂ ವಿಶ್ವ ಆರೋಗ್ಯ ಸಂಸ್ಥೆ ಯುರೋಪ್ ವಲಯವನ್ನು ಪ್ರತಿನಿಧಿಸುವ 53 ದೇಶಗಳು ಭವಿಷ್ಯದ ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ಒಟ್ಟುಗೂಡಲು ಸಾಧ್ಯವಾಗಿದೆ. ರಾಷ್ಟ್ರೀಯ ಆರೋಗ್ಯ ರಕ್ಷಣಾ ವ್ಯವಸ್ಥೆಗಳ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ನಿರ್ಣಾಯಕ ಮತ್ತು ಆದ್ಯತೆಯಾಗಿರಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

Tags

Gaza to Europe
share
ವಾರ್ತಾಭಾರತಿ
ವಾರ್ತಾಭಾರತಿ
Next Story
X