Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಐಸಿಸಿ ಬಂಧನ ವಾರಂಟ್ ಹಿನ್ನೆಲೆ : ಬಳಸು...

ಐಸಿಸಿ ಬಂಧನ ವಾರಂಟ್ ಹಿನ್ನೆಲೆ : ಬಳಸು ದಾರಿ ಮೂಲಕ ನ್ಯೂಯಾರ್ಕ್‌ಗೆ ತೆರಳಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

ವಾರ್ತಾಭಾರತಿವಾರ್ತಾಭಾರತಿ25 Sept 2025 8:24 PM IST
share
ಐಸಿಸಿ ಬಂಧನ ವಾರಂಟ್ ಹಿನ್ನೆಲೆ : ಬಳಸು ದಾರಿ ಮೂಲಕ ನ್ಯೂಯಾರ್ಕ್‌ಗೆ ತೆರಳಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

ಜೆರುಸಲೇಂ, ಸೆ.25: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿಮಾನವು ಗುರುವಾರ ವಾಡಿಕೆಯಲ್ಲದ ಮಾರ್ಗದ ಮೂಲಕ ನ್ಯೂಯಾರ್ಕ್ ತಲುಪಿದೆ. ಐಸಿಸಿ ಬಂಧನ ವಾರಂಟ್ ಎದುರಿಸುತ್ತಿರುವ ನೆತನ್ಯಾಹು ಹಲವಾರು ಯುರೋಪಿಯನ್ ರಾಷ್ಟ್ರಗಳ ವಾಯುಮಾರ್ಗವನ್ನು ತಪ್ಪಿಸಿಕೊಂಡು ಬಳಸು ದಾರಿಯ ಮೂಲಕ ವಿಶ್ವಸಂಸ್ಥೆ ಸಾಮಾನ್ಯ ಸಭೆ ನಡೆಯುತ್ತಿರುವ ನ್ಯೂಯಾರ್ಕ್‌ಗೆ ಆಗಮಿಸಿರುವುದಾಗಿ ವರದಿಯಾಗಿದೆ.

ಇಸ್ರೇಲ್‌ಗೆ ತನ್ನ ವಾಯುಮಾರ್ಗವನ್ನು ಬಳಸಲು ಫ್ರಾನ್ಸ್ ಅನುಮತಿ ನೀಡಿದ್ದರೂ ನೆತನ್ಯಾಹು ಅವರಿದ್ದ ವಿಮಾನವು ದಕ್ಷಿಣದ ಮಾರ್ಗದ ಮೂಲಕ ಸಾಗಿರುವುದು ವಿಮಾನಗಳ ಹಾರಾಟದ ಮೇಲೆ ನಿಗಾ ಇರಿಸುವ ವ್ಯವಸ್ಥೆ ದೃಢಪಡಿಸಿದೆ ಎಂದು ಫ್ರಾನ್ಸ್ ಸರಕಾರದ ಮೂಲಗಳನ್ನು ಉಲ್ಲೇಖಿಸಿ ಎಎಫ್‌ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಸಾಮಾನ್ಯವಾಗಿ ಟೆಲ್ ಅವೀವ್‌ನಿಂದ ನ್ಯೂಯಾರ್ಕ್‌ಗೆ ವಿಮಾನಗಳು ಫ್ರಾನ್ಸ್, ಸ್ಪೇನ್, ಇಟಲಿ ಮತ್ತು ಗ್ರೀಸ್ ಇತ್ಯಾದಿ ಹಲವು ಯುರೋಪಿಯನ್ ರಾಷ್ಟ್ರಗಳ ಮೂಲಕ ಸಾಗುತ್ತವೆ. ಆದರೆ ನೆತನ್ಯಾಹು ಅವರಿದ್ದ ವಿಮಾನವು ಗ್ರೀಸ್ ಮತ್ತು ಇಟಲಿಯನ್ನು ದಾಟಿದ ಬಳಿಕ ಅಟ್ಲಾಂಟಿಕ್‌ನಾದ್ಯಂತ ಹೋಗುವ ಮೊದಲು ಜಿಬ್ರಾಲ್ಟರ್ ಜಲಸಂಧಿಯ ಮೂಲಕ ದಕ್ಷಿಣಕ್ಕೆ ತಿರುಗಿದೆ. ರೋಮ್ ಕಾನೂನಿಗೆ ಸಹಿ ಹಾಕಿರುವ ರಾಷ್ಟ್ರಗಳನ್ನು ದೂರವಿಡುವುದು ನೆತನ್ಯಾಹು ಅವರ ವಿಮಾನದ ಉದ್ದೇಶವಾಗಿದೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ರಾಷ್ಟ್ರಗಳಲ್ಲಿ ವಿಮಾನವು ತುರ್ತು ಲ್ಯಾಂಡಿಂಗ್ ನಡೆಸಿದರೆ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್(ಐಸಿಸಿ) ಹೊರಡಿಸಿದ ಬಂಧನ ವಾರಾಂಟ್ ಜಾರಿಗೊಳಿಸಬಹುದು. ಗಾಝಾದಲ್ಲಿ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆಯ ಸಂದರ್ಭ ಆಪಾದಿತ ಯುದ್ಧಾಪರಾಧಗಳ ಹಿನ್ನೆಲೆಯಲ್ಲಿ ಐಸಿಸಿ ನವೆಂಬರ್‌ನಲ್ಲಿ ನೆತನ್ಯಾಹು ಮತ್ತು ಇಸ್ರೇಲ್‌ನ ಮಾಜಿ ರಕ್ಷಣಾ ಸಚಿವ ಯೊವಾವ್ ಗ್ಯಾಲಂಟ್ ವಿರುದ್ಧ ಬಂಧನ ವಾರಾಂಟ್ ಜಾರಿಗೊಳಿಸಿದೆ. ಐಸಿಸಿ ತನಿಖೆಯನ್ನು ಬೆಂಬಲಿಸುವುದಾಗಿ ಕಳೆದ ವಾರ ಸ್ಪೇನ್ ಘೋಷಿಸಿತ್ತು ಮತ್ತು ಗಾಝಾದಲ್ಲಿ ಆಪಾದಿತ ಮಾನವ ಹಕ್ಕುಗಳ ಉಲ್ಲಂಘನೆಗಳ ತನಿಖೆಗಾಗಿ ತಂಡವೊಂದನ್ನು ರಚಿಸಿದೆ.

ಶುಕ್ರವಾರ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನುದ್ದೇಶಿಸಿ ನೆತನ್ಯಾಹು ಮಾತನಾಡಲಿದ್ದು, ಮುಂದಿನ ವಾರ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು ಭೇಟಿಯಾಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X