Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಡಿಯನ್ ಓವರ್ಸೀಸ್ ಕಾಂಗ್ರೆಸ್, ಅಟ್ಲಾಂಟ...

ಇಂಡಿಯನ್ ಓವರ್ಸೀಸ್ ಕಾಂಗ್ರೆಸ್, ಅಟ್ಲಾಂಟ ಚಾಪ್ಟರ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ30 Aug 2026 8:22 PM IST
share
ಇಂಡಿಯನ್ ಓವರ್ಸೀಸ್ ಕಾಂಗ್ರೆಸ್, ಅಟ್ಲಾಂಟ ಚಾಪ್ಟರ್ ಉದ್ಘಾಟನೆ

ಅಟ್ಲಾಂಟ: ಇಂಡಿಯನ್ ಓವರ್ಸೀಸ್ ಕಾಂಗ್ರೆಸ್, ಅಮೆರಿಕದ ಅಟ್ಲಾಂಟ ನಗರದ ಶಾಖೆಯನ್ನು ಆ.29ರಂದು ಪ್ರಾರಂಭಿಸಿತು.

ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಮೆರಿಕದ ಅಧ್ಯಕ್ಷರಾದ ಮೊಹಿಂದರ್ ಸಿಂಗ್ ಗಿಲ್ಜಿಯನ್ ಅವರು ಅಟ್ಲಾಂಟ ಚಾಪ್ಟರನ್ನು ಉದ್ಘಾಟಿಸಿ, ಮಾತನಾಡಿ ಅನಿವಾಸಿಗಳು ನಮ್ಮ ಮಾತೃಭೂಮಿ ಭಾರತಕ್ಕೆ ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯಗಳ ಕ್ಷೇತ್ರಗಳಲ್ಲಿ ಕೊಡುಗೆ ನೀಡುವುದರ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಪೂರೈಸಬೇಕೆಂದು ತಿಳಿಸಿದರು.

ಭಾರತದಲ್ಲಿ ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತ ಮನೋಭಾವನೆಗಳು ಶಕ್ತಿಯುತವಾಗಿ ಬೇರೂರಿಸಲು ಕಾಂಗ್ರೆಸ್ ಪಕ್ಷ ತೆಗೆದುಕೊಂಡ ನಿರ್ಧಾರಗಳನ್ನು ಅವರು ವಿವರಿಸಿದರು.

ಅಂತರ್ಜಾಲದ ಝೂಮ್ ಮುಖೇನ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಚೇರ್ಮನ್ ಸ್ಯಾಮ್ ಪಿತ್ರೋಡ ಅವರು, ಭಾರತದ ಸ್ವಾತಂತ್ರ್ಯಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಮತ್ತು ಈ ಹೋರಾಟದಲ್ಲಿ ಅನಿವಾಸಿಗಳಾಗಿ ನಂತರ ಭಾರತಕ್ಕೆ ಮರಳಿದವರ ಪಾತ್ರವನ್ನು ಸ್ಮರಿಸಿದರು.

ದಕ್ಷಿಣ ಅಮೆರಿಕದಿಂದ ಮರಳಿ ಬಂದ ಮಹಾತ್ಮ ಗಾಂಧಿ, ಇಂಗ್ಲೆಂಡ್ ದೇಶದ ವಿದ್ಯಾಭ್ಯಾಸದಿಂದ ಮರಳಿ ಬಂದ ಪಂಡಿತ್ ನೆಹರೂ, ಸುಭಾಷ್ ಚಂದ್ರ ಬೋಸ್, ವಲ್ಲಭಾಯಿ ಪಟೇಲ್, ಬಿ. ಆರ್. ಅಂಬೇಡ್ಕರ್ ಇವರೆಲ್ಲರ ಪ್ರಮುಖ ಹೋರಾಟ ಹಾಗೂ ತ್ಯಾಗದಿಂದ ಭಾರತವು ಸ್ವಾತಂತ್ರ್ಯ ಪಡೆಯಲು ಸಾಧ್ಯವಾಯಿತೆಂದು ತಿಳಿಸಿದರು.

ಭಾರತದ ಪ್ರಜಾಪ್ರಭುತ್ವ, ಭ್ರಾತೃತ್ವ ಮತ್ತು ಜಾತ್ಯಾತೀತಗೆ ಧಕ್ಕೆ ಕಂಡಾಗಲೆಲ್ಲ ಅನಿವಾಸಿ ಭಾರತೀಯರು ಒಕ್ಕೊರಲಿನಿಂದ ವಿರೋಧಿಸಬೇಕೆಂದು ಕರೆ ನೀಡಿದರು.

ಇಂದು ಭಾರತದಲ್ಲಿ Gen Zಗಳು ವಿಧ್ಯಾಭ್ಯಾಸ ಮತ್ತು ನಿರುದ್ಯೋಗ ಸಮಸ್ಯೆಯ ಬಗ್ಗೆ ಹೋರಾಟ ಮಾಡುತ್ತಿರುವಾಗ ಕಾಂಗ್ರೆಸ್ ಪಕ್ಷ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಬೃಹತ್ ಆಂದೋಲನವನ್ನು ಕೈಗೆತ್ತಿಕೊಂಡಿದೆಯೆಂದು ವಿವರಿಸಿದರು.

ಭಾರತದ ಯುವಜನಾಂಗದ ಈ ನ್ಯಾಯಯುತ ಹೋರಾಟಕ್ಕೆ ಅನಿವಾಸಿ ಭಾರತೀಯರು ಬೆಂಬಲಿಸಬೇಕೆಂದು ಕರೆಕೊಟ್ಟರು.

ಅಟ್ಲಾಂಟ ಚಾಪ್ಟರ್ ಅಧ್ಯಕ್ಷರಾಗಿ ಅನಿಲ್ ಬೊಡ್ಡಿರೆಡ್ಡಿ ಅವರನ್ನು ಆಯ್ಕೆ ಮಾಡಲಾಯಿತು. ಅಮೆರಿಕದ ದಕ್ಷಿಣ ಭಾಗದಲ್ಲಿರುವ ಅಟ್ಲಾಂಟ ನಗರವು ಉದ್ಯಮ ಹಾಗೂ ಪ್ರವಾಸಿ ಕ್ಷೇತ್ರವಾಗಿ ಬೆಳೆಯುತ್ತಿದ್ದು ಹೆಚ್ಚಿನ ಸಂಖ್ಯೆಯ ಅನಿವಾಸಿ ಭಾರತೀಯರು ಇಲ್ಲಿ ನೆಲೆಸಿದ್ದಾರೆ. ಸ್ವಾತಂತ್ರ್ಯ ಹೋರಾಟದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷವು ಭಾರತಕ್ಕೆ ನೀಡಿರುವ ಕೊಡುಗೆಯನ್ನು ಅನಿವಾಸಿ ಭಾರತೀಯರಿಗೆ ಮನದಟ್ಟುಪಡಿಸಿ ಅಟ್ಲಾಂಟದಲ್ಲಿ ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಬಲಪಡಿಸುವುದಾಗಿ ಅನಿಲ್ ಬೊಡ್ಡಿರೆಡ್ಡಿ ತಿಳಿಸಿದರು.




Tags

Indian Overseas CongressAtlantaChapterinaugurated
share
ವಾರ್ತಾಭಾರತಿ
ವಾರ್ತಾಭಾರತಿ
Next Story
X