Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾದಲ್ಲಿ ಸೇನೆಯ ಉಪಸ್ಥಿತಿ...

ಗಾಝಾದಲ್ಲಿ ಸೇನೆಯ ಉಪಸ್ಥಿತಿ ಮುಂದುವರಿಸಲು ಇಸ್ರೇಲ್ ಪಟ್ಟು; ಕದನ ವಿರಾಮ ಮಾತುಕತೆಗೆ ತೊಡಕು: ಹಮಾಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ10 July 2025 10:52 PM IST
share
ಗಾಝಾದಲ್ಲಿ ಸೇನೆಯ ಉಪಸ್ಥಿತಿ ಮುಂದುವರಿಸಲು ಇಸ್ರೇಲ್ ಪಟ್ಟು; ಕದನ ವಿರಾಮ ಮಾತುಕತೆಗೆ ತೊಡಕು: ಹಮಾಸ್ ಆರೋಪ

ಜೆರುಸಲೇಂ: ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಒಪ್ಪಂದದ ಬಗ್ಗೆ ಮಾತುಕತೆ ಮುಂದುವರಿದಿರುವಂತೆಯೇ ಗಾಝಾ ಪಟ್ಟಿಯ ದಕ್ಷಿಣ ಕಾರಿಡಾರ್‌ ನಲ್ಲಿ ತನ್ನ ಪಡೆಗಳ ಉಪಸ್ಥಿತಿಯನ್ನು ಮುಂದುವರಿಸಲು ಇಸ್ರೇಲ್ ಪಟ್ಟು ಹಿಡಿದಿರುವುದು ಮಾತುಕತೆಯನ್ನು ಹಳಿತಪ್ಪಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

60 ದಿನಗಳ ಕದನ ವಿರಾಮದ ಸಂದರ್ಭದಲ್ಲಿ ಮೊರಾಗ್ ಕಾರಿಡಾರ್ ಸೇರಿದಂತೆ ಗಾಝಾ ಪಟ್ಟಿಯಲ್ಲಿ ಪಡೆಗಳನ್ನು ಇರಿಸಿಕೊಳ್ಳುವುದು ಇಸ್ರೇಲ್‌ ನ ಉದ್ದೇಶವಾಗಿದೆ ಎಂದು ಇಸ್ರೇಲ್‌ ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೊರಾಗ್ ಕಾರಿಡಾರ್‌ ನಲ್ಲಿ ಒಂದು ಹೆಜ್ಜೆಯನ್ನು ಇಡುವುದು (ಈಜಿಪ್ಟ್‍ನ ಗಡಿಯುದ್ದಕ್ಕೂ ದಕ್ಷಿಣದ ಕಿರಿದಾದ ಭೂಮಿಯ ಕಡೆಗೆ ನೂರಾರು ಫೆಲೆಸ್ತೀನೀಯರನ್ನು ಸ್ಥಳಾಂತರಿಸುವ ಉದ್ದೇಶದಿಂದ) ಇಸ್ರೇಲ್‌ ನ ಯೋಜನೆಗಳಲ್ಲಿ ಒಂದು ಪ್ರಮುಖ ಅಂಶವಾಗಿದೆ. ಈ ನಡೆಯು ಗಾಝಾದ ಜನಸಂಖ್ಯೆಯ ಸುಮಾರು 2 ದಶಲಕ್ಷ ಜನರ ಬಲವಂತದ ಸ್ಥಳಾಂತರಕ್ಕೆ ಒಂದು ಪೂರ್ವಸೂಚಕವಾಗಿದೆ ಮತ್ತು ಭೂಪ್ರದೇಶದ ಮೇಲೆ ಶಾಶ್ವತವಾದ ನಿಯಂತ್ರಣವನ್ನು ಕಾಯ್ದುಕೊಳ್ಳುವ ಇಸ್ರೇಲಿ ಸರಕಾರದ ಯೋಜನೆಯ ಭಾಗವಾಗಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ. ದಕ್ಷಿಣ ಗಾಝಾದಲ್ಲಿನ ರಫಾ ನಗರದ ಕಡೆಗೆ ಫೆಲೆಸ್ತೀನೀಯರನ್ನು ಸಾಮೂಹಿಕವಾಗಿ ಸ್ಥಳಾಂತರಿಸುವ ಇಸ್ರೇಲ್‌ ನ ಯೋಜನೆಗಳನ್ನು ಫೆಲೆಸ್ತೀನಿಯನ್ ನಿರಾಶ್ರಿತರಿಗಾಗಿನ ವಿಶ್ವಸಂಸ್ಥೆ ಏಜೆನ್ಸಿಯ ಮುಖ್ಯಸ್ಥರು ಖಂಡಿಸಿದ್ದಾರೆ.

ಗಾಝಾದಿಂದ ಇಸ್ರೇಲ್‌ ನ ಎಲ್ಲಾ ಪಡೆಗಳೂ ವಾಪಸಾಗುವುದು ಶಾಶ್ವತ ಕದನ ವಿರಾಮ ಒಪ್ಪಂದದ ಭಾಗವಾಗಬೇಕು ಎಂದು ಹಮಾಸ್ ಹೇಳುತ್ತಿದೆ. ಗಾಝಾದೊಳಗೆ ಇಸ್ರೇಲ್‌ ನ ಶಾಶ್ವತ ಉಪಸ್ಥಿತಿಯನ್ನು ಹಮಾಸ್ ವಿರೋಧಿಸಿದೆ. ಪ್ರಸ್ತಾವಿತ ಒಪ್ಪಂದದ ಭಾಗವಾಗಿ 60 ದಿನದ ಕದನ ವಿರಾಮ ಜಾರಿಯಲ್ಲಿರುತ್ತದೆ ಮತ್ತು ಈ ಅವಧಿಯಲ್ಲಿ ಕೆಲವು ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಬೇಕು ಮತ್ತು ಗಾಝಾಕ್ಕೆ ಮತ್ತಷ್ಟು ನೆರವು ಪೂರೈಕೆಯಾಗುತ್ತದೆ.

ಗಾಝಾದಲ್ಲಿ ಸೇನೆಯನ್ನು ಉಳಿಸಿಕೊಳ್ಳುವ ಇಸ್ರೇಲ್‌ ನ ಆಶಯ ಸೇರಿದಂತೆ ಕದನ ವಿರಾಮ ಒಪ್ಪಂದಕ್ಕೆ ಅಡ್ಡಿಯಾಗಬಹುದಾದ ಅಂಶಗಳ ಬಗ್ಗೆ ಮಂಗಳವಾರ ಅಮೆರಿಕ, ಇಸ್ರೇಲ್ ಮತ್ತು ಖತರ್‌ ನ ಅಧಿಕಾರಿಗಳು ವಿಸ್ತøತ ಚರ್ಚೆ ನಡೆಸಿದ್ದಾರೆ ಎಂದು ಶ್ವೇತಭವನದ ಮೂಲಗಳು ಹೇಳಿವೆ.

► ಮೊರಾಗ್ ಕಾರಿಡಾರ್

ಗಾಝಾದಲ್ಲಿ 21 ತಿಂಗಳ ಸಂಘರ್ಷದಲ್ಲಿ ಇಸ್ರೇಲಿ ಪಡೆಗಳು ಮೂರು ಪೂರ್ವ-ಪಶ್ಚಿಮ ಕಾರಿಡಾರ್‍ಗಳನ್ನು ಒಳಗೊಂಡಂತೆ ವ್ಯಾಪಕವಾದ ಭೂಮಿಯನ್ನು ವಶಪಡಿಸಿಕೊಂಡಿವೆ. ಎಪ್ರಿಲ್‌ ನಲ್ಲಿ ವಶಪಡಿಸಿಕೊಂಡ ಮೊರಾಗ್ ಕಾರಿಡಾರ್ ಗಾಝಾದ ದಕ್ಷಿಣದ ತುತ್ತತುದಿಯ ನಗರ ರಫಾ ಮತ್ತು ಖಾನ್ ಯೂನಿಸ್ ನಗರಗಳ ನಡುವೆ ಇದೆ. ಗಾಝಾ-ಈಜಿಪ್ಟ್ ಗಡಿಯುದ್ದಕ್ಕೂ ಇರುವ ಫಿಲಾಡೆಲ್ಫಿ ಕಾರಿಡಾರ್ ಮತ್ತು ಉತ್ತರ ಗಾಝಾದ ನೆಟ್‍ಝರಿಮ್ ಕಾರಿಡಾರ್‌ ನ ಮೇಲೆಯೂ ಇಸ್ರೇಲ್ ನಿಯಂತ್ರಣ ಸಾಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X