Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ಮೇಲೆ ಇಸ್ರೇಲ್ ದಾಳಿಯಿಂದ...

ಇರಾನ್ ಮೇಲೆ ಇಸ್ರೇಲ್ ದಾಳಿಯಿಂದ ವಿಕಿರಣಶೀಲ ಮತ್ತು ರಾಸಾಯನಿಕ ಸೋರಿಕೆ: ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಐಎಇಎ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ14 Jun 2025 11:02 PM IST
share
ಇರಾನ್ ಮೇಲೆ ಇಸ್ರೇಲ್ ದಾಳಿಯಿಂದ ವಿಕಿರಣಶೀಲ ಮತ್ತು ರಾಸಾಯನಿಕ ಸೋರಿಕೆ: ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಐಎಇಎ ಮಾಹಿತಿ

ವಿಯೆನ್ನಾ: ಇರಾನ್‌ ನ ನಟಾನ್ಜ್ ಪರಮಾಣು ಸೌಲಭ್ಯದ ಮೇಲೆ ಇಸ್ರೇಲ್ ನಡೆಸಿದ ದಾಳಿಯು ವಿಕಿರಣಶೀಲ ಮತ್ತು ರಾಸಾಯನಿಕ ಮಾಲಿನ್ಯಕ್ಕೆ ಕಾರಣವಾಗಿದೆ ಎಂದು ಅಂತರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿ(ಐಎಇಎ)ಯ ಪ್ರಧಾನ ನಿರ್ದೇಶಕ ರಾಫೆಲ್ ಗ್ರಾಸಿ ಶುಕ್ರವಾರ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಮಾಹಿತಿ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ನಟಾನ್ಜ್ ಪರಮಾಣು ಸೌಲಭ್ಯದ ಮೇಲಿನ ಭಾಗವನ್ನು ಇಸ್ರೇಲ್ ನಾಶಪಡಿಸಿದೆ. ಸೌಲಭ್ಯದ ಭೂಗತ ಪುಷ್ಟೀಕರಣ ವ್ಯವಸ್ಥೆಗಳಿಗೆ ಹಾನಿಯ ಬಗ್ಗೆ ಯಾವುದೇ ಸೂಚನೆಗಳಿಲ್ಲ. ಆದರೆ ವಿದ್ಯುತ್ ನಿಲುಗಡೆ ಕೇಂದ್ರಾಪಗಾಮಿಗಳ(ಸೆಂಟ್ರಿಫ್ಯೂಜ್ಸ್) ಮೇಲೆ ಪರಿಣಾಮ ಬೀರಿರಬಹುದು. ಸ್ಥಳದಲ್ಲಿ ವಿಕಿರಣಶೀಲ ಮತ್ತು ರಾಸಾಯನಿಕ ಮಾಲಿನ್ಯವಿದೆ ಎಂದವರು ಹೇಳಿದ್ದಾರೆ.

ಪ್ರಸ್ತುತ, ಫೋರ್ಡೋ ಇಂಧನ ಪುಷ್ಟೀಕರಣ ಸ್ಥಾವರ ಮತ್ತು ಇಸ್ಫಾಹಾನ್ ಸೌಲಭ್ಯಗಳ ಮೇಲೆ ದಾಳಿ ನಡೆದಿರುವುದಾಗಿ ಇರಾನ್‌ ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕ್ಷಣದಲ್ಲಿ, ಈ ಸೌಲಭ್ಯಗಳ ಸುತ್ತಲೂ ಮಿಲಿಟರಿ ಚಟುವಟಿಕೆ ನಡೆಯುತ್ತಿದೆ ಎಂದು ಸೂಚಿಸುವುದನ್ನು ಬಿಟ್ಟು ನಮ್ಮಲ್ಲಿ ಹೆಚ್ಚಿನ ಮಾಹಿತಿಯಿಲ್ಲ ಎಂದವರು 15 ಸದಸ್ಯರ ಭದ್ರತಾ ಮಂಡಳಿಗೆ ತಿಳಿಸಿರುವುದಾಗಿ ವರದಿಯಾಗಿದೆ.

`ರೈಸಿಂಗ್ ಲಯನ್' ಎಂಬ ಸಂಕೇತನಾಮದ ಈ ದಾಳಿಯು ಇರಾನ್‌ ನ ಪರಮಾಣು ಸಾಮರ್ಥ್ಯವನ್ನು ಕಿತ್ತೊಗೆಯುವ ಉದ್ದೇಶವನ್ನು ಹೊಂದಿದ್ದು ಇರಾನ್‌ ನ ಹಲವಾರು ಅಧಿಕ ಸಾಮರ್ಥ್ಯದ ಮಿಲಿಟರಿ ಹಾಗೂ ಪರಮಾಣು ಸ್ಥಾಪನೆಗಳನ್ನು ಗುರಿಯಾಗಿಸಿ ನಡೆಸಲಾಗಿದೆ.

ನಟಾನ್ಜ್ ಸ್ಥಾವರದ ಬಳಿ ಬಾಹ್ಯ ವಿಕಿರಣಶೀಲತೆಯ ಮಟ್ಟವು ಹೆಚ್ಚಿಲ್ಲ ಮತ್ತು ಸೋರಿಕೆಯನ್ನು ಆಂತರಿಕವಾಗಿ ಪತ್ತೆಹಚ್ಚಲಾಗಿದೆ ಎಂದು ಐಎಎಫ್‍ಎ ಬಳಿಕ ದೃಢಪಡಿಸಿದ್ದು ಇದನ್ನು ಸೂಕ್ತ ರಕ್ಷಣಾ ಕ್ರಮಗಳ ಮೂಲಕ ನಿರ್ವಹಿಸಬಹುದಾಗಿದೆ ಎಂದು ಗ್ರಾಸಿ ಭದ್ರತಾ ಮಂಡಳಿಗೆ ತಿಳಿಸಿದ್ದಾರೆ. ಪರಿಸ್ಥಿತಿಯನ್ನು ನೇರವಾಗಿ ಪರಿಶೀಲನೆ ನಡೆಸಲು ಇರಾನ್‍ ಗೆ ಭೇಟಿ ನೀಡಲು ಬಯಸಿರುವುದಾಗಿ ಗ್ರಾಸಿ ಹೇಳಿದ್ದಾರೆ. ಐಎಇಎ ಆಡಳಿತ ಮಂಡಳಿಯನ್ನುದ್ದೇಶಿಸಿ ಮಾತನಾಡಿದ ಅವರು `ಇನ್ನಷ್ಟು ಉಲ್ಬಣಿಸುವುದನ್ನು ತಡೆಯಲು ಗರಿಷ್ಠ ಸಂಯಮ ವಹಿಸುವಂತೆ ಎಲ್ಲಾ ಪಕ್ಷಗಳನ್ನೂ ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

Tags

IsraelIAEA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X