Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಪಾನ್ ಪ್ರಧಾನಿ ಶಿಂಝೊ ಅಬೆ ಹತ್ಯೆಯನ್ನು...

ಜಪಾನ್ ಪ್ರಧಾನಿ ಶಿಂಝೊ ಅಬೆ ಹತ್ಯೆಯನ್ನು ಒಪ್ಪಿಕೊಂಡ ಆರೋಪಿ

ವಾರ್ತಾಭಾರತಿವಾರ್ತಾಭಾರತಿ28 Oct 2025 8:47 PM IST
share
ಜಪಾನ್ ಪ್ರಧಾನಿ ಶಿಂಝೊ ಅಬೆ ಹತ್ಯೆಯನ್ನು ಒಪ್ಪಿಕೊಂಡ ಆರೋಪಿ

ಟೋಕಿಯೊ, ಅ. 28: 2022ರಲ್ಲಿ ನಡೆದ ಜಪಾನ್ ಪ್ರಧಾನಿ ಶಿಂಝೊ ಅಬೆ ಹತ್ಯೆ ಪ್ರಕರಣದ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಈ ಪ್ರಕರಣದ ವಿಚಾರಣೆ ಮಂಗಳವಾರ ಆರಂಭವಾದಾಗ, ಪ್ರಾಸಿಕ್ಯೂಟರ್‌ಗಳು ಓದಿ ಹೇಳಿದ ಎಲ್ಲಾ ಆರೋಪಗಳನ್ನು 45 ವರ್ಷದ ಟೆಟ್ಸುಯ ಯಮಗಮಿ ಒಪ್ಪಿಕೊಂಡಿದ್ದಾನೆ ಎಂದು ಜಪಾನ್ ಸುದ್ದಿ ಚಾನೆಲ್ ಎನ್‌ಎಚ್‌ಕೆ ವರದಿ ಮಾಡಿದೆ.

ಅತಿ ಹೆಚ್ಚು ಅವಧಿ ಜಪಾನ್ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಶಿಂಝೊ ಅಬೆಯನ್ನು ಕೊಂದಿರುವ ಮತ್ತು ಶಸ್ತ್ರಾಸ್ತ್ರ ಕಾಯ್ದೆಗಳನ್ನು ಉಲ್ಲಂಘಿಸಿರುವ ಆರೋಪಗಳನ್ನು ಯಮಗಮಿ ಮೇಲೆ ಹೊರಿಸಲಾಗಿತ್ತು.

‘‘ನನ್ನ ಮೇಲಿನ ಎಲ್ಲಾ ಆರೋಪಗಳು ಸರಿಯಾಗಿವೆ’’ ಎಂದು ಆರೋಪಿಯು ನ್ಯಾಯಾಲಯದ ಎದುರು ಒಪ್ಪಿಕೊಂಡನು.

2022 ಜುಲೈ 8ರಂದು ಜಪಾನ್‌ನ ಪಶ್ಚಿಮದ ನಗರ ನಾರದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದಾಗ ಅಬೆ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಯಮಗಮಿಯನ್ನು ಸ್ಥಳದಲ್ಲೇ ಬಂಧಿಸಲಾಗಿತ್ತು.

ಶಿಂಝೊ ಅಬೆಯ ಲಿಬರಲ್ ಡೆಮಾಕ್ರಟಿಕ್ ಪಕ್ಷವು ಯೂನಿಫಿಕೇಶನ್ ಚರ್ಚ್‌ನೊಂದಿಗೆ ಹೊಂದಿರುವ ನಂಟಿನ ಬಗ್ಗೆ ಆಕ್ರೋಶಗೊಂಡು ಆರೋಪಿಯು ಕೊಲೆ ನಡೆಸಿದ್ದಾನೆ ಎನ್ನಲಾಗಿದೆ.

ಆರೋಪಿ ಯಮಗಮಿಯ ತಾಯಿ ದಕ್ಷಿಣ ಕೊರಿಯದ ಧಾರ್ಮಿಕ ಗುಂಪು ಯೂನಿಫಿಕೇಶನ್ ಚರ್ಚ್‌ಗೆ 100 ಮಿಲಿಯ ಯೆನ್ (ಸುಮಾರು 5.85 ಕೋಟಿ ರೂಪಾಯಿ) ದೇಣಿಗೆ ನೀಡಿದ್ದರು. ಈ ದೇಣಿಗೆಯ ಬಳಿಕ ಆರೋಪಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯು ಹದಗೆಟ್ಟಿತ್ತು ಎನ್ನಲಾಗಿದೆ. ಹಾಗಾಗಿ, ಶಿಂರೊ ಅಬೆಯನ್ನು ಕೊಲ್ಲುವ ಮೂಲಕ ಯೂನಿಫಿಕೇಶನ್ ಚರ್ಚ್‌ನ ಮೇಲಿದ್ದ ಆಕ್ರೋಶವನ್ನು ಹೊರಹಾಕಿದ್ದನು ಎಂಬುದಾಗಿ ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X