Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಪರ ಹೋರಾಡುತ್ತಿರುವ ಈಶಾನ್ಯದ...

ಇಸ್ರೇಲ್ ಪರ ಹೋರಾಡುತ್ತಿರುವ ಈಶಾನ್ಯದ ಕುಕಿಗಳು

ವಾರ್ತಾಭಾರತಿವಾರ್ತಾಭಾರತಿ14 Oct 2023 9:03 AM IST
share
ಇಸ್ರೇಲ್ ಪರ ಹೋರಾಡುತ್ತಿರುವ ಈಶಾನ್ಯದ ಕುಕಿಗಳು

ಗುವಾಹತಿ: ದೂರದ ಇಸ್ರೇಲ್ ನಲ್ಲಿ ಹಮಾಸ್ ವಿರುದ್ಧದ ಹೋರಾಟಕ್ಕೆ 200ಕ್ಕೂ ಹೆಚ್ಚು ಮಂದಿ ಕುಕಿಗಳು ಸಜ್ಜಾಗಿದ್ದಾರೆ. ಅವರ ಸಮುದಾಯಗಳು ಅವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿವೆ. ಸೂಕ್ತ ಪ್ರತಿಕ್ರಿಯೆಯ ಹೊಣೆ ಹೊತ್ತಿರುವ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್)ಯ ಭಾಗವಾಗಿ ಇವರು ಹೋರಾಟಕ್ಕೆ ಇಳಿದಿದ್ದಾರೆ.

ಇಸ್ರೇಲ್ ನ ಈ ಬೃಹತ್ ಉದ್ದೇಶಕ್ಕಾಗಿ ಕ್ರೋಢೀಕರಿಸಿರುವ 3.60 ಲಕ್ಷ ಮಂದಿಯ ಪಡೆಯಲ್ಲಿ 206 ಮಂದಿ ಕುಕಿ ಸಮುದಾಯಕ್ಕೆ ಸೇರಿದವರಾಗಿದ್ದು, ಮಣಿಪುರ ಹಾಗೂ ಮಿಜೋರಾಂ ಮೂಲದವರು. ಸುಮಾರು 5000 ಮಂದಿಯ ಸಮುದಾಯ ಇಸ್ರೇಲ್ ನಲ್ಲಿ ವಾಸವಿದ್ದು, ಕಳೆದುಹೋದ ಯಹೂದಿ ಆದಿವಾಸಿಗಳಾಗಿ ಟೆಲ್ ಅವೀವ್ ಇವರನ್ನು ಪರಿಗಣಿಸಿದ್ದು, ಮುಕ್ತ ನೀತಿಯಿಂದಾಗಿ ಈ ಮಂದಿ ಇಸ್ರೇಲ್ ವಲಸೆ ಹೋಗಿದ್ದಾರೆ.

ಹಮಾಸ್ ಹೋರಾಟಗಾರರು ಇಸ್ರೇಲ್ ಪ್ರವೇಶಿಸಿದಾಗ ಅದರ ನೇರ ಬಿಸಿ ಈ ಸಣ್ಣ ಸಮಮುದಾಯದ ಮೇಲೆ ತಟ್ಟಿತ್ತು. ಬಹುತೇಕ ಮಂದಿ ಕುಕಿಗಳು ಗಾಜಾ ಸಮೀಪದ ಡೆರಾಟ್ ನಲ್ಲಿ ವಾಸವಿದ್ದು, ಈ ಪ್ರದೇಶ ಭೀಕರ ಹಿಂಸಾಚಾರವನ್ನು ಕಂಡ ಪ್ರದೇಶಗಳಲ್ಲೊಂದು. ಇಲ್ಲಿ ದೊಡ್ಡ ಪ್ರಮಾಣದ ಸಾವು ನೋವು ಆಗಿಲ್ಲವಾದರೂ, ಈ ಕುಟುಂಬಗಳ ಮನೆಗಳು ಬೆಂಕಿಗೆ ಆಹುತಿಯಾಗಿವೆ.

ಹಿಬ್ರೂ ಭಾಷೆಯಲ್ಲಿ ಈ ಸಮುದಾಯಕ್ಕೆ ನೀ ಮೆನಾಶೆ ಎಂಬ ಹೆಸರಿದ್ದು, ಮನಸ್ಸೇಯ ಮಕ್ಕಳು ಎಂಬ ಅರ್ಥ. ಯಹೂದಿ ಸಮುದಾಯದ ಈ "ಕಳೆದು ಹೋದ ಬುಡಕಟ್ಟು" ಮತ್ತೆ ಇಸ್ರೇಲ್ ಗೆ ವಲಸೆ ಹೋಗಲು ಸ್ವಯಂಸೇವಾ ಸಂಸ್ಥೆಯೊಂದು ನೆರವಾಗಿದೆ. ಯಹೂದಿಯರ ಪ್ರವಾದಿ ಎನ್ನಲಾದ ಜೋಸೆಫ್ ನ ಪ್ರಥಮ ಪುತ್ರ ಮೆಹಾಶೆ.

ನೀ ಮೆನಾಶೆ ಇಸ್ರೇಲ್ ನಿಂದ ಕಳೆದುಹೋಗಿರುವ 10 ಬುಡಕಟ್ಟುಗಳಲ್ಲಿ ಒಂದಾಗಿದ್ದು, 27 ಶತಮಾನಗಳ ಹಿಂದೆ ಇವರನ್ನು ಗಡೀಪಾರು ಮಾಡಲಾಗಿತ್ತು. ಇವರ ಪೂರ್ವಜರು ಕೇಂದ್ರ ಏಷ್ಯಾ ಮತ್ತು ಪೌರಾತ್ಯ ದೇಶಗಳಲ್ಲಿ ಅಲೆದಾಡುತ್ತಿದ್ದರು. ಬಳಿಕ ಈಶಾನ್ಯ ಭಾರತದಲ್ಲಿ ಮ್ಯಾನ್ಮಾರ್ ಮತ್ತು ಬಾಂಗ್ಲಾಗಡಿ ಪ್ರದೇಶದಲ್ಲಿ ನೆಲೆನಿಂತರು ಎಂಬ ಪ್ರತೀತಿ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X