Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ| ವಲಸೆ ಅಧಿಕಾರಿಯ ಗುಂಡೇಟಿನಿಂದ...

ಅಮೆರಿಕ| ವಲಸೆ ಅಧಿಕಾರಿಯ ಗುಂಡೇಟಿನಿಂದ ಮಹಿಳೆ ಮೃತ್ಯು; ವ್ಯಾಪಕ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Jan 2026 9:46 PM IST
share
ಅಮೆರಿಕ| ವಲಸೆ ಅಧಿಕಾರಿಯ ಗುಂಡೇಟಿನಿಂದ ಮಹಿಳೆ ಮೃತ್ಯು; ವ್ಯಾಪಕ ಪ್ರತಿಭಟನೆ

ನ್ಯೂಯಾರ್ಕ್, ಜ.8: ಅಮೆರಿಕಾದ ಮಿನ್ನಿಯಾಪೊಲೀಸ್ ನಗರದ ರಸ್ತೆಯಲ್ಲಿ ವಲಸೆ ಅಧಿಕಾರಿಯೊಬ್ಬರು ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ವ್ಯಾಪಕ ಪ್ರತಿಭಟನೆ ನಡೆದಿದ್ದು ಆಕೆ ದೇಶೀಯ ಭಯೋತ್ಪಾದಕಿ ಎಂಬ ಶ್ವೇತಭವನದ ಪ್ರತಿಪಾದನೆಯನ್ನು ಸ್ಥಳೀಯ ನಾಯಕರು ತಿರಸ್ಕರಿಸಿದ್ದಾರೆ.

ಮೃತಪಟ್ಟ ಮಹಿಳೆಯನ್ನು 37 ವರ್ಷದ ರಿನೀ ನಿಕೊಲೆ ಗುಡ್ ಎಂದು ಸ್ಥಳೀಯ ಮಾಧ್ಯಮಗಳು ಗುರುತಿಸಿವೆ. ಈಕೆ ಚಲಾಯಿಸುತ್ತಿದ್ದ ಕಾರನ್ನು ವಲಸೆ ಅಧಿಕಾರಿಗಳು ಸುತ್ತುವರಿದಾಗ ಅಲ್ಲಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಅಧಿಕಾರಿಯೊಬ್ಬರು ತನ್ನ ಪಿಸ್ತೂಲಿನಿಂದ ಅತೀ ಹತ್ತಿರದಿಂದ ಗುಂಡು ಹಾರಿಸಿದ್ದಾರೆ. ಮಾಸ್ಕ್ ಧರಿಸಿದ್ದ ವಲಸೆ ಮತ್ತು ಸುಂಕ ಜಾರಿ ಏಜೆನ್ಸಿ(ಐಸಿಇ) ಅಧಿಕಾರಿಯೊಬ್ಬರು ಹೋಂಡಾ ಕಾರಿನತ್ತ ಮೂರು ಸುತ್ತು ಗುಂಡು ಹಾರಿಸಿದಾಗ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗುತ್ತಿರುವ, ಅಪಘಾತಕ್ಕೀಡಾದ ವಾಹನದಲ್ಲಿ ರಿನೀ ಅವರ ರಕ್ತಸಿಕ್ತ ದೇಹ ಬಿದ್ದಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ದುರಂತದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ ಟ್ರಂಪ್ ಆಡಳಿತ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿದ್ದು ರಿನೀ ವಲಸೆ ಅಧಿಕಾರಿಯನ್ನು ಕೊಲ್ಲಲು ಪ್ರಯತ್ನಿಸಿದಾಗ ಅಧಿಕಾರಿ ಆತ್ಮರಕ್ಷಣೆಗೆ ಗುಂಡು ಹಾರಿಸಿರುವುದಾಗಿ ಪ್ರತಿಪಾದಿಸಿದೆ. ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಿನ್ನಿಯಾಪೊಲೀಸ್ ನಗರದ ಮೇಯರ್ ಜಾಕೊಬ್ ಫ್ರೆ `ಐಸಿಇ ತಕ್ಷಣ ನಗರದಿಂದ ನಿರ್ಗಮಿಸಬೇಕು' ಎಂದು ಆಗ್ರಹಿಸಿದ್ದಾರೆ. ಬಳಿಕ ಸಾವಿರಾರು ಮಂದಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದು ಐಸಿಇ ವಿರುದ್ದ ಘೋಷಣೆ ಕೂಗಿದರು.

`ಪ್ರಾಣಹಾನಿ ಸಂಭವಿಸಿದ್ದು ನಿಜವಾಗಿಯೂ ದುರಂತವಾಗಿದೆ. ಆದರೆ ಇದು ದೇಶೀಯ ಭಯೋತ್ಪಾದನೆಗೆ ಸಂಬಂಧಿಸಿದ ಘಟನೆಯಾಗಿದ್ದು ರಿನೀ ಇಡೀ ದಿನ ಐಸಿಇ ಸಿಬ್ಬಂದಿಗಳ ಕಾರ್ಯಕ್ಕೆ ಅಡ್ಡಿಪಡಿಸುತ್ತಾ ಬೆದರಿಕೆ ಒಡ್ಡುತ್ತಿದ್ದರು. ಬಳಿಕ ತನ್ನ ವಾಹನವನ್ನು ಅಧಿಕಾರಿಯತ್ತ ಅಪಾಯಕಾರಿಯಾಗಿ ನುಗ್ಗಿಸಿದ್ದರು ' ಎಂದು ಆಂತರಿಕ ಭದ್ರತಾ ಇಲಾಖೆಯ ಮುಖ್ಯಸ್ಥೆ ಕ್ರಿಸ್ಟಿ ನೊಯೆಮ್ ಹೇಳಿರುವುದಾಗಿ ವರದಿಯಾಗಿದೆ.

Tags

Minneapolisshooting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X