Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೈಜೀರಿಯಾ: ಅಪಹೃತ 287 ವಿದ್ಯಾರ್ಥಿಗಳ...

ನೈಜೀರಿಯಾ: ಅಪಹೃತ 287 ವಿದ್ಯಾರ್ಥಿಗಳ ಬಿಡುಗಡೆ

2 ವಾರದ ಸಂಧಾನ ಮಾತುಕತೆ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ24 March 2024 10:32 PM IST
share

ಅಬುಜ: ವಾಯವ್ಯ ನೈಜೀರಿಯಾದಲ್ಲಿ 2 ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಸುಮಾರು 300 ಶಾಲಾ ಮಕ್ಕಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾರ್ಚ್ 7ರಂದು ವಾಯವ್ಯ ನೈಜೀರಿಯಾದ ಕದುನಾ ರಾಜ್ಯದಲ್ಲಿನ ಶಾಲೆಯೊಂದರ 287 ವಿದ್ಯಾರ್ಥಿಗಳನ್ನು ಅಪಹರಿಸಿದ ತಂಡವೊಂದು ಸಮೀಪದ ಅರಣ್ಯ ಪ್ರದೇಶದಲ್ಲಿ ಅವರನ್ನು ಒತ್ತೆಸೆರೆಯಲ್ಲಿರಿಸಿ ಬಿಡುಗಡೆಗಾಗಿ ಭಾರೀ ಮೊತ್ತದ ಬೇಡಿಕೆ ಮುಂದಿರಿಸಿತ್ತು. ಅಪಹೃತರಲ್ಲಿ ಕನಿಷ್ಠ 100 ವಿದ್ಯಾರ್ಥಿಗಳು 12 ವರ್ಷದ ಕೆಳಹರೆಯದವರು ಎಂದು ಕದುನಾ ರಾಜ್ಯದ ಗವರ್ನರ್ ಉಬಾ ಸನಿ ಹೇಳಿದ್ದಾರೆ. ಶಾಲಾ ಮಕ್ಕಳ ಸುರಕ್ಷಿತ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಂಡ ನೈಜೀರಿಯಾ ಅಧ್ಯಕ್ಷ ಬೊಲ ತಿನುಬುಗೆ ಧನ್ಯವಾದ ಸಲ್ಲಿಸುವುದಾಗಿ ಅವರು ಟ್ವೀಟ್(ಎಕ್ಸ್) ಮಾಡಿದ್ದಾರೆ.

ಯಾವುದೇ ಒತ್ತೆಹಣ ಪಾವತಿಸದೆ ಮಕ್ಕಳನ್ನು ಬಿಡುಗಡೆಗೊಳಿಸುವುದಾಗಿ ಅಧ್ಯಕ್ಷ ತಿನುಬು ಘೋಷಿಸಿದ್ದರು. ಆದರೆ ನೈಜೀರಿಯಾದಲ್ಲಿ ಅಪಹರಣ ಕೃತ್ಯಗಳಲ್ಲಿ ಒತ್ತೆಹಣ ಪಾವತಿ ಸಾಮಾನ್ಯವಾಗಿದೆ ಮತ್ತು ಇದನ್ನು ಅಪಹೃತರ ಕುಟುಂಬದವರು ವ್ಯವಸ್ಥೆ ಮಾಡುತ್ತಾರೆ. ನೈಜೀರಿಯಾದ ಅಧಿಕಾರಿಗಳು ಒತ್ತೆಹಣ ಪಾವತಿಯನ್ನು ಒಪ್ಪಿಕೊಳ್ಳುವುದು ಅಪರೂಪವಾಗಿದೆ. ಶಾಲಾ ಮಕ್ಕಳ ಅಪಹರಣ ಕೃತ್ಯದ ಹೊಣೆಯನ್ನು ಯಾವುದೇ ಗುಂಪು ವಹಿಸಿಲ್ಲ. ಆದರೆ ಘರ್ಷಣೆಯಿಂದ ಜರ್ಝರಿತಗೊಂಡಿರುವ ಉತ್ತರ ಪ್ರಾಂತದಲ್ಲಿ ಅಪಹರಣ ಮತ್ತು ಸಾಮೂಹಿಕ ಹತ್ಯೆಗಳಿಗೆ ಹೆಸರಾದ ಡಕಾಯಿತ ಗುಂಪುಗಳ ಮೇಲೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಧರ್ಮಗುರು ಶೇಖ್ ಅಹ್ಮದ್ ಗುಮಿ ಹಾಗೂ ನೈಜೀರಿಯಾದ ಉಸ್ಮಾನ್ ಡ್ಯಾನ್‍ಫೋಡಿಯೊ ವಿವಿಯ ಪ್ರೊಫೆಸರ್ ಮುರ್ತಲಾ ಅಹ್ಮದ್ ರುಫಾಯಿ ಅಪಹರಣಕಾರರ ಜತೆ ಸಂಧಾನಕ್ಕೆ ಮಧ್ಯಸ್ಥಿಕೆ ವಹಿಸಿದ್ದರು. ದಟ್ಟವಾದ ಅರಣ್ಯಪ್ರದೇಶವನ್ನು ಹೊಂದಿರುವ ನೈಜೀರಿಯಾದಲ್ಲಿ ಬಹುತೇಕ ಅಪಹರಣ ಪ್ರಕರಣಗಳಲ್ಲಿ ಯಾವುದೇ ಬಂಧನವಾಗುವುದಿಲ್ಲ. ಸಾಮಾನ್ಯವಾಗಿ ಹತಾಶ ಕುಟುಂಬಗಳು ಒತ್ತೆಹಣ ಪಾವತಿಸಿದ ಬಳಿಕ ಅಥವಾ ಸರಕಾರಿ ಅಧಿಕಾರಿಗಳು ಮತ್ತು ಭದ್ರತಾ ಅಧಿಕಾರಿಗಳ ಜತೆ ಒಪ್ಪಂದ ಮಾಡಿಕೊಂಡ ಬಳಿಕ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲಾಗುತ್ತದೆ.

2014ರಿಂದ ನೈಜೀರಿಯಾದ ಶಾಲೆಗಳಿಂದ ಕನಿಷ್ಠ 1,400 ವಿದ್ಯಾರ್ಥಿಗಳನ್ನು ಅಪಹರಿಸಲಾಗಿದೆ. 2014ರಲ್ಲಿ ನೈಜೀರಿಯಾದ ಬೊರ್ನೊ ರಾಜ್ಯದ ಚಿಬೊಕ್ ಗ್ರಾಮದ ಶಾಲೆಗೆ ನುಗ್ಗಿದ್ದ ಬೊಕೊ ಹರಾಮ್ ಸಶಸ್ತ್ರ ಹೋರಾಟಗಾರರ ಗುಂಪು 276 ವಿದ್ಯಾರ್ಥಿನಿಯರನ್ನು ಅಪಹರಿಸಿತ್ತು. ಇತ್ತೀಚಿನ ವರ್ಷಗಳಲ್ಲಿ ಅಪಹರಣಗಳು ದೇಶದ ವಾಯವ್ಯ ಮತ್ತು ಮಧ್ಯ ಪ್ರಾಂತಗಳಲ್ಲಿ ಕೇಂದ್ರೀಕೃತಗೊಂಡಿದ್ದು ಅಲ್ಲಿ ಹತ್ತಕ್ಕೂ ಅಧಿಕ ಸಶಸ್ತ್ರ ಗುಂಪುಗಳು ಸಾಮಾನ್ಯವಾಗಿ ಹಳ್ಳಿಗರು ಮತ್ತು ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X