Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೇಪಾಳದಲ್ಲಿ ದಿಢೀರ್ ಪ್ರವಾಹ: 105...

ನೇಪಾಳದಲ್ಲಿ ದಿಢೀರ್ ಪ್ರವಾಹ: 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ26 Aug 2026 4:07 PM IST
share
ನೇಪಾಳದಲ್ಲಿ ದಿಢೀರ್ ಪ್ರವಾಹ: 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ಕಠ್ಮಂಡು: ಟಿಬೆಟ್ ಗಡಿಯ ಬಳಿಯ ನೇಪಾಳದ ರಸುವಾ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಭೋಟೆ ಕೋಶಿ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾಗಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ. ಪ್ರವಾಹದ ಬಳಿಕ 105 ಭಾರತೀಯರು ಸೇರಿದಂತೆ 291 ವಿದೇಶಿ ಪ್ರಜೆಗಳು ಮತ್ತು 93 ನೇಪಾಳಿ ಪ್ರಜೆಗಳು ಸೇರಿ ಒಟ್ಟು 384 ಮಂದಿ ನಾಪತ್ತೆಯಾಗಿದ್ದಾರೆ ಎಂದು ನೇಪಾಳ ಪ್ರವಾಸೋದ್ಯಮ ಮಂಡಳಿಯ ಪ್ರಾಥಮಿಕ ಪಟ್ಟಿಯನ್ನು ಉಲ್ಲೇಖಿಸಿ ‘ನೇಪಾಳನ್ಯೂಸ್’ ವರದಿ ಮಾಡಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 9ರ ಸುಮಾರಿಗೆ ರಸುವಾಗಧಿ–ತಿಮುರೆ ಪ್ರದೇಶಕ್ಕೆ ಭೋಟೆ ಕೋಶಿ ನದಿಯ ನೀರು ಹಠಾತ್ ಉಕ್ಕಿ ಹರಿಯಿತು. ಇದರಿಂದ ರಸುವಾ ಜಿಲ್ಲೆಯ ಜತೆಗೆ ನೆರೆಯ ನುವಾಕೋಟ್ ಮತ್ತು ಧಾಡಿಂಗ್ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಭಾರಿ ಹಾನಿ ಸಂಭವಿಸಿದೆ.

ವಾಹನಗಳು, ಸರಕುಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿವೆ. ಹಲವು ಜಲವಿದ್ಯುತ್ ಯೋಜನೆಗಳಿಗೂ ಹಾನಿಯಾಗಿದೆ.


105 ಭಾರತೀಯರು ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿ ಸಂಗ್ರಹಿಸಿರುವ ಪ್ರಾಥಮಿಕ ಪಟ್ಟಿಯ ಪ್ರಕಾರ, ನಾಪತ್ತೆಯಾದ 384 ಮಂದಿಯಲ್ಲಿ 291 ಮಂದಿ ವಿದೇಶಿ ಪ್ರಜೆಗಳು ಮತ್ತು 93 ಮಂದಿ ನೇಪಾಳಿ ಪ್ರಜೆಗಳು. ವಿದೇಶಿ ಪ್ರಜೆಗಳ ಪೈಕಿ 105 ಮಂದಿ ಭಾರತೀಯರು.

ಆಸ್ಟ್ರೇಲಿಯಾ, ನೆದರ್‌ಲ್ಯಾಂಡ್ಸ್, ಅಮೆರಿಕ, ಮಲೇಷ್ಯಾ, ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದ ಪ್ರಜೆಗಳೂ ಪಟ್ಟಿಯಲ್ಲಿದ್ದಾರೆ. ಇನ್ನೂ ಕೆಲವರ ರಾಷ್ಟ್ರೀಯತೆ ದೃಢಪಟ್ಟಿಲ್ಲ.

ಪಟ್ಟಿ ಪ್ರಾಥಮಿಕವಾಗಿದ್ದು, ಟೂರ್ ಸಂಸ್ಥೆಗಳು, ಮಾರ್ಗದರ್ಶಕರು, ಸ್ಥಳೀಯ ಅಧಿಕಾರಿಗಳು ಮತ್ತು ಭದ್ರತಾ ಸಂಸ್ಥೆಗಳ ಸಹಯೋಗದೊಂದಿಗೆ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಮಂಡಳಿ ತಿಳಿಸಿದೆ. ಪರಿಶೀಲನೆ ಪೂರ್ಣಗೊಳ್ಳುವವರೆಗೆ ನಾಪತ್ತೆಯಾದವರ ಕುಟುಂಬಗಳು ಯಾವುದೇ ತೀರ್ಮಾನಕ್ಕೆ ಬರಬಾರದು ಎಂದು ಮಂಡಳಿ ಮನವಿ ಮಾಡಿದೆ.

ಕೈಲಾಸ ಮಾನಸ ಸರೋವರಕ್ಕೆ ತೆರಳುತ್ತಿದ್ದ ಪ್ರವಾಸಿಗರು

ನಾಪತ್ತೆಯಾದವರಲ್ಲಿ ಹೆಚ್ಚಿನ ಸಂಖ್ಯೆಯವರು ಕೈಲಾಸ ಮಾನಸ ಸರೋವರ ಯಾತ್ರೆಗಾಗಿ ಟಿಬೆಟ್‌ ಗೆ ತೆರಳುತ್ತಿದ್ದ ಪ್ರವಾಸಿಗರು ಎನ್ನಲಾಗಿದೆ.

ಕಠ್ಮಂಡು ಮೂಲದ ಟಚ್ ಕೈಲಾಸ ಟ್ರಾವೆಲ್ಸ್ ಆ್ಯಂಡ್ ಟೂರ್ಸ್‌ ನ ವ್ಯವಸ್ಥಾಪಕ ನಿರ್ದೇಶಕ ಬಾಶು ಕುಮಾರ್ ಅಧಿಕಾರಿ ಅವರ ಪ್ರಕಾರ, 93 ನೇಪಾಳಿ ಪ್ರಜೆಗಳು ಸೇರಿದಂತೆ 390 ಮಂದಿ ಬುಧವಾರ ಗಡಿ ದಾಟಲು ನಿರ್ಧರಿಸಿದ್ದರು.

‘ಕೆಲವರನ್ನು ಹೊರತುಪಡಿಸಿ, ಮಧ್ಯಾಹ್ನ 3ರ ವೇಳೆಗೆ ನಾವು ಪ್ರವಾಸಿಗರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಲಿಲ್ಲ’ ಎಂದು ಅಧಿಕಾರಿ ಹೇಳಿದ್ದಾರೆ ಎಂದು ‘ಕಠ್ಮಂಡು ಪೋಸ್ಟ್’ ವರದಿ ಮಾಡಿದೆ.

ನೇಪಾಳದ ಟ್ರೆಕ್ಕಿಂಗ್ ಏಜೆನ್ಸಿಗಳ ಸಂಘದ ಅಧ್ಯಕ್ಷ ಸಾಗರ್ ಪಾಂಡೆ, ಪ್ರವಾಸಿಗರನ್ನು ಸಂಪರ್ಕಿಸಿ ಅವರ ಸ್ಥಿತಿಯನ್ನು ತಿಳಿದುಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.


ಎಂಟು ಮಂದಿ ಸಾವು; ರಕ್ಷಣಾ ಕಾರ್ಯಾಚರಣೆ

ಬುಧವಾರ ಮಧ್ಯಾಹ್ನದ ವೇಳೆಗೆ ಕನಿಷ್ಠ ಎಂಟು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. 25ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ನೇಪಾಳ ಸೇನಾ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

ನುವಾಕೋಟ್‌ ನ ಬಿದೂರ್ ಪುರಸಭೆ ವ್ಯಾಪ್ತಿಯಲ್ಲಿ ತ್ರಿಶೂಲಿ ನದಿಯ ಸಮೀಪ ನಾಲ್ಕು ಮೃತದೇಹ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನೇಪಾಳ ಸೇನೆ, ಸಶಸ್ತ್ರ ಪೊಲೀಸ್ ಪಡೆ ಮತ್ತು ನೇಪಾಳ ಪೊಲೀಸರು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸುಮಾರು 14 ಹೆಲಿಕಾಪ್ಟರ್‌ ಗಳನ್ನು ನಿಯೋಜಿಸಲಾಗಿದ್ದು, ನಾಪತ್ತೆಯಾದವರ ಪತ್ತೆಗೆ ಡ್ರೋನ್‌ ಗಳು ಮತ್ತು ಶ್ವಾನದಳವನ್ನೂ ಬಳಸಲಾಗುತ್ತಿದೆ.

ಸೈಫ್ರುಬೆಸಿಯಿಂದ ಆರು ಮಂದಿ, ಮೈಲುಂಗ್‌ ನಿಂದ ಇಬ್ಬರು ಮತ್ತು ರಸುವಾದ ಧುಂಚೆಯಿಂದ ನಾಲ್ವರನ್ನು ರಕ್ಷಿಸಲಾಗಿದೆ ಎಂದು ನೇಪಾಳ ಸೇನೆ ತಿಳಿಸಿದೆ.

ತುರ್ತು ವೈದ್ಯಕೀಯ ನೆರವು ಒದಗಿಸಲು ತ್ರಿಶೂಲಿಯ ಮಿಲಿಟರಿ ತರಬೇತಿ ಕೇಂದ್ರ ಸಂಖ್ಯೆ 1ರಲ್ಲಿ ಚಿಕಿತ್ಸಾ ಕೇಂದ್ರವನ್ನೂ ಸ್ಥಾಪಿಸಲಾಗಿದೆ.

ರಸುವಾದಿಂದ ಆರಂಭದಲ್ಲಿ ನಾಲ್ವರು ಸಶಸ್ತ್ರ ಪೊಲೀಸ್ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಮತ್ತೊಂದು ವರದಿಯ ಪ್ರಕಾರ, ನೇಪಾಳ–ಚೀನಾ ಗಡಿಯ ಸಮೀಪದ ತಿಮುರೆ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ಒಂಭತ್ತು ಸಿಬ್ಬಂದಿಯೂ ಪತ್ತೆಯಾಗಿಲ್ಲ.


ದಿಢೀರ್ ಪ್ರವಾಹಕ್ಕೆ ಕಾರಣವೇನು?

ಭೋಟೆ ಕೋಶಿ ನದಿಯಲ್ಲಿ ನೀರು ಹಠಾತ್ ಏರಿಕೆಯಾಗಲು ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ರಸುವಾದಲ್ಲಿ ಮಳೆಯ ಕಾರಣದಿಂದ ಪ್ರವಾಹ ಸಂಭವಿಸಿಲ್ಲ ಎಂದು ನೇಪಾಳದ ಜಲವಿಜ್ಞಾನ ಮತ್ತು ಹವಾಮಾನ ಇಲಾಖೆ ತಿಳಿಸಿದೆ.

ಹಿಮನದಿ ಸರೋವರ ಸ್ಫೋಟದಿಂದ ಉಂಟಾಗುವ ಪ್ರವಾಹ, ಭೂಕುಸಿತ ಅಥವಾ ಟಿಬೆಟ್‌ ನ ಗಡಿಯಾಚೆಯ ಪ್ರದೇಶದಲ್ಲಿ ಸಂಭವಿಸಿರುವ ಮತ್ತಾವುದೇ ಘಟನೆಯಿಂದ ಪ್ರವಾಹ ಉಂಟಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

‘ನಾವು ಇನ್ನೂ ಈ ವಿಷಯವನ್ನು ಅಧ್ಯಯನ ಮಾಡುತ್ತಿದ್ದೇವೆ. ಆದ್ದರಿಂದ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ’ ಎಂದು ಇಲಾಖೆಯ ಮಾಹಿತಿ ಅಧಿಕಾರಿ ದಿನಕರ್ ಕಾಯಸ್ಥ ಹೇಳಿದ್ದಾರೆ.

ಟಿಬೆಟ್ ಭಾಗದಿಂದ ಅಪಾಯದ ಸಾಧ್ಯತೆ ಇನ್ನೂ ದೂರವಾಗಿಲ್ಲ ಎಂದು ಎಚ್ಚರಿಸಿರುವ ಅವರು, ಜನರು ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.

ಪ್ರವಾಹಕ್ಕೂ ಮುನ್ನ ಟಿಬೆಟ್ ಭಾಗದಲ್ಲಿ ಸಂಭವಿಸಿದ ಭೂಕುಸಿತದಿಂದ ನದಿ ತಾತ್ಕಾಲಿಕವಾಗಿ ತಡೆಯಲ್ಪಟ್ಟಿರಬಹುದು ಎಂಬ ಅನೌಪಚಾರಿಕ ಮಾಹಿತಿ ಅಧಿಕಾರಿಗಳಿಗೆ ಲಭಿಸಿದೆ. ಆದರೆ ಇದನ್ನು ಇನ್ನೂ ದೃಢಪಡಿಸಲಾಗಿಲ್ಲ.


ವ್ಯಾಪಕ ಹಾನಿ

ರಸುವಾ ಜಿಲ್ಲೆ ಪ್ರವಾಹದಿಂದ ಅತ್ಯಂತ ಹೆಚ್ಚು ಹಾನಿಗೊಳಗಾದ ಪ್ರದೇಶವಾಗಿದೆ. ತಿಮುರೆ ಮತ್ತು ಸೈಫ್ರುಬೆಸಿ ಪ್ರದೇಶಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ.

ಕಸ್ಟಮ್ಸ್ ಆವರಣದಲ್ಲಿ ಸಂಗ್ರಹಿಸಲಾಗಿದ್ದ ವಾಹನಗಳು ಮತ್ತು ಸರಕುಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿವೆ. ಇತ್ತೀಚೆಗೆ ನಿರ್ಮಿಸಲಾಗಿದ್ದ ಸೇತುವೆಯೊಂದೂ ನಾಶವಾಗಿದೆ.

ಸೈಫ್ರುಬೆಸಿ, ಬೆತ್ರಾವತಿ, ಮೈಲುಂಗ್, ಸಲ್ಲೆಟರ್, ಶಾಂತಿಬಜಾರ್, ಪೈರೆಬೆಸಿ, ಖಲ್ತಿ ಬಸ್ತಿ, ಸೋಲೆ, ತ್ರಿಶೂಲಿ ಮತ್ತು ಬತ್ತಾರ್ ಸೇರಿದಂತೆ ನದಿಯುದ್ದಕ್ಕೂ ಇರುವ ಹಲವು ವಸತಿ ಪ್ರದೇಶಗಳು ಪ್ರವಾಹದಿಂದ ಬಾಧಿತವಾಗಿವೆ.

ಧಾಡಿಂಗ್ ಜಿಲ್ಲೆಯ ಗಜುರಿಯಲ್ಲಿದ್ದ ಸೇತುವೆಯೂ ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿದೆ.

ನೇಪಾಳದ ಟಿಬೆಟ್‌ ನೊಂದಿಗಿನ ವ್ಯಾಪಾರ ಮಾರ್ಗದ ಮೇಲೂ ಪ್ರವಾಹ ತೀವ್ರ ಪರಿಣಾಮ ಬೀರಿದೆ. ಚೀನಾದೊಂದಿಗಿನ ಪ್ರಮುಖ ಗಡಿ ದಾಟುವ ಸ್ಥಳವಾದ ರಸುವಾಗಧಿಯಲ್ಲಿ ಮೂಲಸೌಕರ್ಯಗಳು ಹಾನಿಗೊಳಗಾಗಿವೆ.


ಜಲವಿದ್ಯುತ್ ಯೋಜನೆಗಳಿಗೂ ಹಾನಿ

ಪ್ರವಾಹದಿಂದ ನೇಪಾಳದ ಜಲವಿದ್ಯುತ್ ವಲಯಕ್ಕೂ ಹಾನಿಯಾಗಿದೆ. ಸ್ವತಂತ್ರ ವಿದ್ಯುತ್ ಉತ್ಪಾದಕರ ಸಂಘ, ನೇಪಾಳದ ಪ್ರಕಾರ, ರಸುವಾ ಮತ್ತು ನುವಾಕೋಟ್ ಜಿಲ್ಲೆಗಳಲ್ಲಿ ಒಟ್ಟು 354 ಮೆಗಾವಾಟ್ ಸಾಮರ್ಥ್ಯದ ಎಂಟು ಕಾರ್ಯಾಚರಣೆಯಲ್ಲಿದ್ದ ಜಲವಿದ್ಯುತ್ ಯೋಜನೆಗಳು ಹಾಗೂ ನಿರ್ಮಾಣ ಹಂತದಲ್ಲಿದ್ದ ಐದು ಯೋಜನೆಗಳು ಹಾನಿಗೊಳಗಾಗಿವೆ.

ಹಾನಿಗೊಳಗಾದ ಕಾರ್ಯಾಚರಣೆಯಲ್ಲಿದ್ದ ಯೋಜನೆಗಳಲ್ಲಿ 111 ಮೆಗಾವಾಟ್ ಸಾಮರ್ಥ್ಯದ ರಸುವಾಗಧಿ ಜಲವಿದ್ಯುತ್ ಯೋಜನೆ, 78 ಮೆಗಾವಾಟ್ ಸಾಮರ್ಥ್ಯದ ಸಾಂಜೆನ್ ಖೋಲಾ ಜಲವಿದ್ಯುತ್ ಯೋಜನೆ ಮತ್ತು 60 ಮೆಗಾವಾಟ್ ಸಾಮರ್ಥ್ಯದ ಅಪ್ಪರ್ ತ್ರಿಶೂಲಿ–3ಎ ಯೋಜನೆಗಳು ಸೇರಿವೆ.


ಹಲವು ಜಿಲ್ಲೆಗಳಲ್ಲಿ ಎಚ್ಚರಿಕೆ

ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರವು ರಸುವಾ, ನುವಾಕೋಟ್, ಧಾಡಿಂಗ್, ಚಿತಾವನ್ ಮತ್ತು ಗೂರ್ಖಾ ಸೇರಿದಂತೆ ಹಲವು ಕೆಳಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

ತ್ರಿಶೂಲಿ ಸೇರಿದಂತೆ ಇತರ ನದಿಗಳ ಸಮೀಪ ವಾಸಿಸುವ ಜನರು ನದಿ ದಂಡೆಗಳಿಂದ ದೂರವಿದ್ದು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಪ್ರವಾಸಿಗರು ಶಾಂತವಾಗಿದ್ದು, ಅಧಿಕೃತ ಮಾಹಿತಿಯನ್ನು ಪಡೆದು ಸುರಕ್ಷತಾ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ತುರ್ತು ನೆರವಿನ ಅಗತ್ಯವಿರುವವರು 1234 ಅಥವಾ 1144ಕ್ಕೆ ಕರೆ ಮಾಡಬಹುದು. ಪ್ರವಾಸಿ ಪೊಲೀಸರನ್ನು 9851289445ರಲ್ಲಿ ಸಂಪರ್ಕಿಸಬಹುದು. ಸಮೀಪದ ಪೊಲೀಸ್ ಅಥವಾ ಭದ್ರತಾ ಠಾಣೆ, ಸ್ಥಳೀಯ ಆಡಳಿತ, ಪ್ರಯಾಣ ಸಂಸ್ಥೆ, ಮಾರ್ಗದರ್ಶಕ ಅಥವಾ ಪ್ರವಾಸ ನಿರ್ವಾಹಕರಿಗೂ ಮಾಹಿತಿ ನೀಡಬಹುದು.

Tags

Nepal FloodIndians missing
share
ವಾರ್ತಾಭಾರತಿ
ವಾರ್ತಾಭಾರತಿ
Next Story
X