Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. “ಫೆಲೆಸ್ತೀನ್ ಮಕ್ಕಳು ನಕಲಿ ಗಾಯಗಳನ್ನು...

“ಫೆಲೆಸ್ತೀನ್ ಮಕ್ಕಳು ನಕಲಿ ಗಾಯಗಳನ್ನು ಪ್ರದರ್ಶಿಸುತ್ತಿದ್ದಾರೆ” ಎಂದ ಇಸ್ರೇಲ್ ರಾಯಭಾರಿ!

Fact Check - “ಬಾಲಿವುಡ್, ಗಾಝಾದಲ್ಲಿ ನಿಮಗೆ ನಕಲಿ ಸ್ಪರ್ಧೆಯಿದೆ” ಎಂದು ನಕಲಿ ವೀಡಿಯೊ ಹಂಚಿ ವಿವಾದಕ್ಕೀಡಾದ ಶೋಶನಿ

ವಾರ್ತಾಭಾರತಿವಾರ್ತಾಭಾರತಿ10 Nov 2023 7:59 PM IST
share
“ಫೆಲೆಸ್ತೀನ್ ಮಕ್ಕಳು ನಕಲಿ ಗಾಯಗಳನ್ನು ಪ್ರದರ್ಶಿಸುತ್ತಿದ್ದಾರೆ” ಎಂದ ಇಸ್ರೇಲ್ ರಾಯಭಾರಿ!

ಹೊಸದಿಲ್ಲಿ: ಇಸ್ರೇಲ್ ದಬ್ಬಾಳಿಕೆ ನಡೆಸುತ್ತಿದೆ ಎಂದು ಬಿಂಬಿಸಲು ಫೆಲೆಸ್ತೀನ್ ಮಕ್ಕಳು ನಕಲಿ ಗಾಯಗಳನ್ನು ಪ್ರದರ್ಶಿಸುತ್ತಿದ್ದಾರೆ ಎಂದು ತಪ್ಪಾಗಿ ಆರೋಪಿಸಿರುವ ವೀಡಿಯೊವನ್ನು x ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಮುಂಬೈನಲ್ಲಿನ ಮಧ್ಯಪಶ್ಚಿಮ ಭಾರತಕ್ಕೆ ಇಸ್ರೇಲ್ ನ ಪ್ರಧಾನ ರಾಯಭಾರಿಯಾಗಿರುವ ಕೊಬ್ಬಿ ಶೋಶನಿ ವಿವಾದಕ್ಕೆ ಕಾರಣವಾಗಿದ್ದಾರೆ.

“ಬಾಲಿವುಡ್, ನಿಮಗೆ ಗಾಝಾದಲ್ಲಿ ನಕಲಿ ಸ್ಪರ್ಧೆಯಿದೆ” ಎಂಬ ಶೀರ್ಷಿಕೆಯೊಂದಿಗೆ ಶೋಶನಿ ಹಂಚಿಕೊಂಡಿರುವ ಪೋಸ್ಟ್ ದಾರಿ ತಪ್ಪಿಸುವಂಥದು ಎಂದು x ಸಾಮಾಜಿಕ ಮಾಧ್ಯಮ ವೇದಿಕೆಯು ಆಕ್ಷೇಪಿಸಿದೆ. ಆ ವೀಡಿಯೊದಲ್ಲಿ ರೆಡ್ ಕ್ರೆಸೆಂಟ್ ಕಾರ್ಯಕರ್ತರು ಬಾಲಕಿಯೊಬ್ಬಳನ್ನು ರಕ್ಷಿಸುತ್ತಿದ್ದು, ಇತರರು ಕ್ಯಾಮೆರಾ ಹಿಡಿದುಕೊಂಡಿರುತ್ತಾರೆ. ಸಿನಿಮಾ ಚಿತ್ರೀಕರಣದಂತೆ ಕಾಣುವ ಈ ವೀಡಿಯೊವನ್ನು ಫೆಲಸ್ತೀನಿಗೆ ಹೋಲಿಸಿ ನಕಲಿ ಎಂದು ಭಾರತದಲ್ಲಿನ ಇಸ್ರೇಲ್‌ ರಾಯಭಾರಿ ಹಂಚಿಕೊಂಡಿದ್ದಾರೆ. ಆದರೆ ವಾಸ್ತವವಾಗಿ ಈ ದೃಶ್ಯಾವಳಿಯು ಲೆಬನನ್ ನ ಕಿರುಚಿತ್ರದ ಶೂಟಿಂಗ್ ಸಂದರ್ಭದ್ದು!

ಈ ದಾರಿ ತಪ್ಪಿಸುವ ವೀಡಿಯೊ ಕಾರಣಕ್ಕೆ, “ಈ ವೀಡಿಯೊ ಲೆಬನಾನ್ ಕಿರುಚಿತ್ರವೊಂದರ ದೃಶ್ಯದ ಹಿಂದಿನ ದೃಶ್ಯವಾಗಿದೆ. ಈ ವೀಡಿಯೊ ಇಸ್ರೇಲ್ ವಿರುದ್ಧ ಮಾಧ್ಯಮಗಳಿಗೆ ಆಹಾರ ಒದಗಿಸಲು ಫೆಲೆಸ್ತೀನ್ ಸಂತ್ರಸ್ತೆಯನ್ನು ಸೋಗಿನ ಮೂಲಕ ಪ್ರದರ್ಶಿಸಿಲ್ಲ. ಬದಲಿಗೆ ಇದು ಫೆಲೆಸ್ತೀನ್ ಬೇಡಿಕೆಯ ಪರವಾಗಿ ಲೆಬನಾನ್ ನಲ್ಲಿ ಚಿತ್ರೀಕರಿಸಿರುವ ಕಿರು ಚಿತ್ರವಾಗಿದೆ” ಎಂದು x ಸಾಮಾಜಿಕ ಮಾಧ‍್ಯಮ ವೇದಿಕೆಯು ಈ ವೀಡಿಯೊದೊಂದಿಗೆ ಸಮಜಾಯಿಷಿ ಟಿಪ್ಪಣಿಯನ್ನು ಲಗತ್ತಿಸಬೇಕಾಗಿ ಬಂದಿದೆ.

ಫ್ಯಾಕ್ಟ್‌ ಚೆಕ್‌ ಮಾಡುವ ಹಾಗೂ ಆಲ್ಟ್ ನ್ಯೂಸ್ ಸುದ್ದಿ ಸಂಸ್ಥೆಯ ಸಹ ಸಂಸ್ಥಾಪಕ ಮುಹಮ್ಮದ್ ಝಬೇರ್ ಕೂಡಾ ಶೋಶನಿ ವೀಡಿಯೊದ ಅಸಲೀಯತ್ತನ್ನು ಬಹಿರಂಗಪಡಿಸಿ , ಇದು ನಕಲಿ ಸುದ್ದಿ ಎಂದು ಆರೋಪಿಸಿದ್ದಾರೆ. ಇದು ಫೆಲೆಸ್ತೀನ್ ಬೇಡಿಕೆಯ ಪರವಾಗಿ ಲೆಬನಾನ್ ಕಲಾವಿದರು ಗೌರವಪೂರ್ವಕವಾಗಿ ಚಿತ್ರೀಕರಿಸಿರುವ ವೀಡಿಯೊ ಆಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿಗೆ ಇಸ್ರೇಲ್-ಫೆಲೆಸ್ತೀನ್ ನಡುವೆ ಸಂಘರ್ಷ ಪ್ರಾರಂಭವಾದಾಗಿನಿಂದ ಶೋಶನಿ ಇದೇ ಪ್ರಥಮ ಬಾರಿಯೇನು ವಿವಾದ ಸೃಷ್ಟಿಸುತ್ತಿಲ್ಲ. ಅಕ್ಟೋಬರ್ 7, 2023ರಿಂದಲೂ ಫೆಲೆಸ್ತೀನ್ ವಿರುದ್ಧ ದಾರಿ ತಪ್ಪಿಸುವ ತುಣುಕುಗಳನ್ನು ಹಂಚುವುದರಲ್ಲಿ ಹಾಗೂ ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದರಲ್ಲಿ ತಮ್ಮನ್ನು ಶೋಶನಿ ತೊಡಗಿಸಿಕೊಂಡಿದ್ದಾರೆ.

ಇದಕ್ಕೂ ಮೊದಲು , ಫೆಲೆಸ್ತೀನ್ ವಿರುದ್ಧ ಇಸ್ರೇಲ್ ಅಧಿಕಾರಿಗಳು ದಾರಿ ತಪ್ಪಿಸುವ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಹಮ್ಮದ್ ಝುಬೇರ್ ಬಯಲು ಮಾಡಿದಾಗ, ಅವರು ನಕಲಿ ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಶೋಶನಿ ಆರೋಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X